Featured

ಉಡುಪಿ : ಸಂಘಟನೆಯ ಶಕ್ತಿಯನ್ನು ಕುಗ್ಗಿಸಬೇಕು ಎಂದು ಜಿಹಾದಿಗಳು ಅಂದುಕೊಂಡಿದ್ದರೇ ಅದು ಸಾಧ್ಯವಿಲ್ಲ : ಕುಯಿಲಾಡಿ

ಜಿಲ್ಲಾ ಬಿಜೆಪಿಯಿಂದ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಶ್ರದ್ದಾಂಜಲಿ

ಹಿಂದೂ ಕಾರ್ಯಕರ್ತರ ಕೊಲೆ ಹಿಂದೆ ಮತಾಂಧಿಯರ ಹುನ್ನಾರ

ಕಾರ್ಯಕರ್ತರು ಮನನೊಂದು ರಾಜಿನಾಮೆ ಕೊಡುವುದು ಸೂಕ್ತ ಅಲ್ಲ..

ಪ್ರವೀಣ್ ನೆಟ್ಟಾರು ಅವರ ಮನೆಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಆರ್ಥಿಕ ಸಹಾಯ

ನಾವೆಲ್ಲಾ ಒಟ್ಟಾಗಿ ಇಂತಹ ಸಂದರ್ಭವನ್ನು ಎದುರಿಸುವ – ಕಾರ್ಯಕರ್ತರಿಗೆ ಕರೆ ನೀಡಿದ ಕುಯಿಲಾಡಿ

ಉಡುಪಿ: ಸುಳ್ಯದ ಬೆಳ್ಳಾರೆಯಲ್ಲಿ ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಕಗ್ಗೊಲೆಯಾಗಿದೆ‌. ಕೋಳಿ ಅಂಗಡಿ ಇಟ್ಟುಕೊಂಡು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದ್ದನು. ಜಿಹಾದಿಗಳು ಭಾಜಪಕ್ಕೆ ನೀಡುವ ಬೆದರಿಕೆ ಹೊಸತಲ್ಲ. ಆದರೆ ಸಂಘಟನೆಯ ಶಕ್ತಿಯನ್ನು ಕುಗ್ಗಿಸಬೇಕು ಎಂದು ಜಿಹಾದಿಗಳು ಅಂದುಕೊಂಡಿದ್ದರೇ ಅದು ಸಾಧ್ಯವಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಶನಿವಾರ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದರು.

ಸರಕಾರ ಹರ್ಷ ಹತ್ಯೆ, ಪ್ರವೀಣ್ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಎನ್.ಐ.ಎ ಗೆ ವಹಿಸಿದೆ. ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡುವುದು ನೆಪ ಮಾತ್ರ. ಆದರೆ ಇದರ ಹಿಂದೆ ಇರುವ ಮತಾಂಧಿಯರ ಹುನ್ನಾರವನ್ನು ಅರಿಯಬೇಕಿದೆ.

ಬಿಜೆಪಿ ಪಕ್ಷಕ್ಕೆ ಇದು ಪರೀಕ್ಷೆಯ ಕಾಲಘಟ್ಟ. ಕಾರ್ಯಕರ್ತರು ಮನನೊಂದು ರಾಜಿನಾಮೆ ಕೊಡುವುದು ಸೂಕ್ತ ಅಲ್ಲ. ಮನೆಗೆ ಬೆಂಕಿ ಬಿದ್ದಾಗ ಅಗ್ನಿಶಾಮಕ ದಳವನ್ನು ಕರಿಯಬೇಕು, ಅದನ್ನು ಬಿಟ್ಟು ಪೆಟ್ರೋಲ್ ಹುಡುಕುವುದಲ್ಲ. ನಾವೆಲ್ಲಾ ಒಟ್ಟಾಗಿ ಇಂತಹ ಸಂದರ್ಭವನ್ನು ಎದುರಿಸುವ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಪ್ರವೀಣ್ ನೆಟ್ಟಾರು ಅವರ ಮನೆಗೆ ಉಡುಪಿ ಜಿಲ್ಲಾ ಬಿಜೆಪಿಯ ತಂಡ ಭೇಟಿ ನೀಡಿ ಆರ್ಥಿಕ ಸಹಾಯ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಎಸ್ ಡಿ ಪಿಐ ಪಿಎಫ್ ಐ ಸಂಘಟನೆಗಳನ್ನು ಮುಸ್ಲಿಂ ಸಮಾಜ ದೂರವಿಟ್ಟಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯವಿದೆ. ಹಿಜಾಬ್ ವಿವಾದದಲ್ಲಿ ಕೈಜೋಡಿಸಿದ ಭಯೊತ್ಪಾಕ ಜಿಹಾದಿ ಸಂಘಟನೆಗಳು ಪ್ರವೀಣ್ ನೆಟ್ಟಾರ್ ಹತ್ಯೆಯಲ್ಲಿ ಕೈ ಜೋಡಿಸಿವೆ. ಪ್ರವೀಣ್ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯರಾದ ಗೀತಾಂಜಲಿ ಸುವರ್ಣ, ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷರಾದ ಹೆರ್ಗ ದಿನಕರ್ ಶೆಟ್ಟಿ, ಯುವಮೋರ್ಚಾ ಜಿ.ಪ್ರ.ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ ಮತ್ತು ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

7 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

7 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

7 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

22 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

22 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

23 hours ago