Featured

ಸಂಘಟನೆ ಇಲ್ಲದಿದ್ದರೆ ದೇಶ ಉದ್ಧಾರವಾಗಲು ಸಾಧ್ಯವಿಲ್ಲ : ವಿನಯ್‌ ಗುರೂಜಿ -Vishwanews24

ಸಂಘಟನೆ ಇಲ್ಲದಿದ್ದರೆ ದೇಶ ಉದ್ಧಾರವಾಗಲು ಸಾಧ್ಯವಿಲ್ಲ,  ಸಂಘಟನೆ ಮೂಲಕ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ : ವಿನಯ್‌ ಗುರೂಜಿ -Vishwanews24

ಸಮಾಜದಲ್ಲಿ ರಾಜಕೀಯ ಮಾಡುವುದು ನನ್ನ ಉದ್ದೇಶವಲ್ಲ. ದೇಶ ಕಟ್ಟುವುದೇ ನಮ್ಮ ಉದ್ದೇಶ..

ಬಾಳೆಹೊನ್ನೂರು: ಸಂಘಟನೆ ಇಲ್ಲದಿದ್ದರೆ ದೇಶ ಉದ್ಧಾರವಾಗಲು ಸಾಧ್ಯವಿಲ್ಲ. ಸಂಘಟನೆ ಮೂಲಕ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ. ಸಮಾಜದಲ್ಲಿ ರಾಜಕೀಯ ಮಾಡುವುದು ನನ್ನ ಉದ್ದೇಶವಲ್ಲ. ದೇಶ ಕಟ್ಟುವುದೇ ನಮ್ಮ ಉದ್ದೇಶ ಎಂದು ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ ಸಂಸ್ಥಾಪಕರೂ ಆದ ಗೌರಿಗದ್ದೆಯ ಅವಧೂತ ವಿನಯ್‌ ಗುರೂಜಿ ನುಡಿದರು.

ಇಲ್ಲಿಗೆ ಸಮೀಪದ ಸೀಗೋಡು-ದೇವಗೋಡು ಗ್ರಾಮದ 2.20 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಡಿಸಿಎಂ ಗೋವಿಂದ ಕಾರಜೋಳ ಅವರ ಸಹಕಾರದಿಂದ ಸೀಗೋಡು ದೇವಗೋಡು ರಸ್ತೆಗೆ 1.5 ಕೋಟಿ ರು. ಹಾಗೂ ಶಾಸಕ ರಾಜೇಗೌಡ ಅನುದಾದಲ್ಲಿ 70 ಲಕ್ಷ ರು. ಅಭಿವೃದ್ಧಿ ಕಾಮಗಾರಿಗಾಗಿ ಮಂಜೂರಾಗಿರುವುದು ಶ್ಲಾಘನೀಯ ಎಂದರು.

ಮಾನವ ಸೇವೆಯೇ ಮಾಧವ ಸೇವೆಯಾಗಿದೆ. ಜಾತಿ, ಧರ್ಮ, ತತ್ವ ಎಲ್ಲವನ್ನೂ ಮೀರಿದ್ದೆ ಮನುಷ್ಯತ್ವ. ಮನುಷ್ಯತ್ವವೇ ದೇವರಾಗಿದ್ದು, ದೇವರನ್ನು ಮೀರಿರುವುದು ಸತ್ಯ ಮತ್ತು ಪ್ರೀತಿಯಾಗಿದೆ. ಹಳ್ಳಿಗಳ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಬೇಕಿದೆ. ಈ ನಿಟ್ಟಿನಲ್ಲಿ ತಮ್ಮ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ ಸಹ ಕಾರ್ಯನಿರ್ವಹಿಸುತ್ತಿದೆ. ರೈತ ನಿಧಿ ಆರಂಭಿಸಲಾಗಿದೆ ಎಂದು ಹೇಳಿದರು

ಕೆಂಪುಕೋಟೆಯಲ್ಲಿ ಕಿಸಾನ್‌ ಯೂನಿಯನ್‌ ಧ್ವಜ ಹಾರಿಸಿದ ರೈತ -Vishwanews24

ಸಿಎಂ ಯಡಿಯೂರಪ್ಪ ನಮ್ಮ ಆಶ್ರಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗೋ ಹತ್ಯೆ ನಿಷೇಧವಾಗಬೇಕು. ರೈತರ ಸಾಲ ಮನ್ನಾ ಆಗಬೇಕು ಎಂದು ಕೋರಿದ್ದೆವು. ಯಡಿಯೂರಪ್ಪ ಅವರು ಅದನ್ನು ನೆರವೇರಿಸಿದ್ದಾರೆ. ರೈತರ ಸಾಲ ಮನ್ನಾ ಮಾಡಿದರೆ ಅದೇ ನನಗೆ ನೀಡುವ ಗುರುದಕ್ಷಿಣೆ ಎಂದು ನಾನು ಹೇಳಿದ್ದೆ. ರಾಸಾಯನಿಕ ಗೊಬ್ಬರ ಬಳಕೆಯನ್ನು ನಾವು ನಿಲ್ಲಿಸಬೇಕಿದೆ. ಮನುಷ್ಯ ದುರಾಸೆಯಿಂದ ಬೇಗ ಹಣ ಮಾಡಬೇಕು ಎಂಬ ಉದ್ದೇಶದಿಂದ ತಮ್ಮ ಜಮೀನಿಗೆ ರಾಸಾಯನಿಕ ಗೊಬ್ಬರವನ್ನು ಹಾಕುತ್ತಿದ್ದಾನೆ. ಇದರಿಂದಾಗಿ 100 ವರ್ಷ ಬಾಳುವ ಮರಗಳು 10 ವರ್ಷಕ್ಕೆ ಕೊನೆಗಾಣುತ್ತಿವೆ. ರಾಸಾಯನಿಕದಿಂದ ಕ್ಯಾನ್ಸರ್‌ ಇಂದು ನಮ್ಮನ್ನು ಆವರಿಸುತ್ತಿದೆ. ಭಾರತ ಸಂಸ್ಕಾರದಿಂದ ದೊಡ್ಡದಾದ ದೇಶ. ಇದು ದುಡ್ಡಿನಿಂದ ದೊಡ್ಡದಾದಲ್ಲ. ಸಾಧನೆ, ಶೋಧನೆಯಿಂದ ನಾವು ಮುಂದೆ ಸಾಗೋಣ. ದೇವಸ್ಥಾನ ಕೇವಲ ದೇವರಿಗೆ ಸೀಮಿತವಲ್ಲ. ಪುರಾತನ ದೇವಸ್ಥಾನದಲ್ಲಿರುವ ಇರುವ ವಿಜ್ಞಾನವನ್ನು ನಮ್ಮ ಜನ ಅರಿತಿಲ್ಲ ಎಂದರು.

ವಿನಯ್‌ ಗುರೂಜಿ ಅವರು ಸೀಗೋಡು ಗ್ರಾಮದ ಕೆಫೆ ಕಾಫಿ ಡೇ ಮಾಲೀಕ ದಿ.ಸಿದ್ಧಾಥ್‌ರ್‍ ಹೆಗ್ಡೆ ಅವರ ವೃತ್ತದ ಸಮೀಪದಲ್ಲಿ ಸಿದ್ಧಾಥ್‌ರ್‍ ಮಹಾದ್ವಾರ ನಿರ್ಮಾಣ ಕಾರ್ಯಕ್ಕೂ ಸಹ ಗುದ್ದಲಿ ಪೂಜೆ ನೆರವೇರಿಸಿದರು.

ನಮ್ಮ ಪ್ರತಿಭಟನೆ ವೇಳೆ ನಡೆದ ಗಲಭೆಗೂ, ನಮಗೂ ಸಂಬಂಧ ಇಲ್ಲ : ಭಾರತೀಯ ಕಿಸಾನ್ ಒಕ್ಕೂಟದ ವಕ್ತಾರ ರಾಕೇಶ್ ಟಿಖಾಯತ್ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

11 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

11 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

11 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

12 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

12 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

13 hours ago