ಬೆಂಗಳೂರು: ಕೇಸರಿ ಕಂಡರೆ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ? ನನಗೆ ಸಮಾಜದ ಬಗ್ಗೆ ಕಾಳಜಿ ಇದೆ. ಸಂಘ ಪರಿವಾರದವರು ಅಶಾಂತಿ ನಿರ್ಮಾಣದ ಮೂಲಕ ಸಮಾಜ ಒಡೆಯುವ ಕೆಲಸ ಮಾಡ್ತಾರೆ ಎಂಬ ಭಯವಿದೆ. ಸೌಹಾರ್ದತೆಗೆ ಧಕ್ಕೆಯಾಗಾದ ಮನಸಿಗೆ ನೋವಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಟ್ವೀಟ್ ಮಾಡಿರುವ ಅವರು, ಹಣ, ಅಧಿಕಾರದ ಆಸೆಗೆ ಕಾಂಗ್ರೆಸ್ ಗೆ ದ್ರೋಹ ಮಾಡಿ ಬಿಜೆಪಿ ಪಕ್ಷ ಸೇರಿ ಮಂತ್ರಿಯಾಗಿರುವ ಕೆ. ಸುಧಾಕರ್ ಅಧಿಕಾರದ ಮದದಿಂದ ವರ್ತಿಸುತ್ತಿದ್ದಾರೆ. ಈ ಅಧಿಕಾರ ಶಾಶ್ವತವಲ್ಲ. 2023 ಕ್ಕೆ ಚುನಾವಣೆ ಬರುತ್ತದೆ, ಯಾರು ಯಾರನ್ನು ಜೈಲಿಗೆ ಕಳಿಸ್ತಾರೆ ಎಂಬುದನ್ನು ನಾವೂ ನೋಡ್ತೀವಿ ಎಂದು ಗುಡುಗಿದ್ದಾರೆ.
ಉಪ ಚುನಾವಣೆಯಾಗಲಿ, ಸಾರ್ವತ್ರಿಕ ಚುನಾವಣೆಯೇ ಆಗಲಿ ಎಲ್ಲಾ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಗೆಲುವಿಗಾಗಿ ಹೋರಾಟ ಮಾಡುತ್ತೇನೆ. ಕಳೆದ ಉಪ ಚುನಾವಣೆಯಲ್ಲಿ ಕೂಡ 15 ಕ್ಷೇತ್ರಗಳಲ್ಲಿ ನಿರಂತರ ಪ್ರಚಾರ ಮಾಡಿದ್ದೆ. ನಮ್ಮ ಪಕ್ಷದ ಪ್ರತಿ ಅಭ್ಯರ್ಥಿಯ ಗೆಲುವು ನನಗೆ ಮುಖ್ಯ ಎಂದಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…