ಬೆಂಗಳೂರು: ಪರಿಷ್ಕೃತ ಸಂಚಾರಿ ನಿಯಮ ಉಲ್ಲಂಘನೆ ದಂಡ ಜಾರಿಯಾದ ಮೊದಲ ದಿನವೇ 30 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಅಂತ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೇಳಿದ್ದಾರೆ.
ಅವರು ಗುರುವಾರ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದರು. ಇನ್ನು ಇದೇ ವೇಳೆ ಅವರು ದಂಡ ಪರಿಷ್ಕರಣೆ ಮಾಡಿರುವುದು ಆದಾಯ ಸಂಗ್ರಹಕ್ಕಲ್ಲ, ಜನರ ಸುರಕ್ಷತೆ ದೃಷ್ಟಿಯಿಂದ. ಮದ್ಯ ಸೇವಿಸಿ ಚಾಲನೆ ಮಾಡಿದರೆ ಪ್ರಾಣಹಾನಿ ಉಂಟಾಗುತ್ತದೆ ಎಂಬುದು ಗೊತ್ತಿದ್ದರೂ ತಪ್ಪು ಮಾಡುತ್ತಾರೆ. ಏಕಮುಖ ಸಂಚಾರ, ರಾಂಗ್ ಸೈಡ್ನಲ್ಲಿ ವಾಹನ ಚಾಲನೆ ಮಾಡುತ್ತಾರೆ. ಹೆಲ್ಮೆಟ್ರಹಿತ ಚಾಲನೆ ಪ್ರಾಣ ಹಾನಿಗೆ ಕಾರಣವಾಗಿದೆ.
ಈ ಸಂಗತಿ ಗೊತ್ತಿದ್ದರೂ ಕಾನೂನು ಉಲ್ಲಂಘಿಸುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಜನರಿಗೆ ಬುದ್ಧಿ ಹೇಳುವ ಅಗತ್ಯ ಇಲ್ಲ ಅಂತ ಹೇಳಿದರು ಇನ್ನು ವಾಹನ ನಿಲುಗಡೆ ನೀತಿ ಜಾರಿಗೊಳಿಸುವಂತೆ ಕೋರಿ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಶಾಲಾ- ಕಾಲೇಜು, ಸಿಬಿಡಿ ಮತ್ತು ಜನವಸತಿ ಪ್ರದೇಶಗಳಲ್ಲಿ ವಾಹನಗಳನ್ನು ರಸ್ತೆಗಳಲ್ಲಿ ಅಡ್ಡಾದಿಡ್ಡಿ ನಿಲುಗಡೆ ಮಾಡದಿರಲು ನೀತಿ ರೂಪಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿದೆ.
ಸಿಬಿಡಿ ವ್ಯಾಪ್ತಿಯಲ್ಲಿ ಇರುವ ಶಾಲೆ-ಕಾಲೇಜು ಆಡಳಿತ ಮಂಡಳಿ ತಮ್ಮ ವಾಹನಗಳಿಗೆ ಶಾಲಾ ಆವರಣದಲ್ಲಿ ರ್ಪಾಂಗ್ವ್ಯವಸ್ಥೆ ಮಾಡಲಿ. ರಸ್ತೆಬದಿ ನಿಲ್ಲಿಸಿ ಜನರಿಗೆ ತೊಂದರೆ ಕೊಟ್ಟರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಜಾಗ ಇಲ್ಲದಿದ್ದರೆ ನಗರ ಬಿಟ್ಟು ಹೊರಗಡೆ ಹೋಗಿ ಎಂದು ಶಾಲಾ ಆಡಳಿತ ಮಂಡಳಿಗಳಿಗೆ ಭಾಸ್ಕರ್ ರಾವ್ ಖಡಕ್ ವಾರ್ನಿಂಗ್ ನೀಡಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…