Featured

ಸಂಚಾರಿ ನಿಯಮ ಉಲ್ಲಂಘನೆ : ಮೊದಲ ದಿನವೇ 30 ಲಕ್ಷ ರೂ. ದಂಡ ವಸೂಲಿ -Vishwanews24

ಬೆಂಗಳೂರು: ಪರಿಷ್ಕೃತ ಸಂಚಾರಿ ನಿಯಮ ಉಲ್ಲಂಘನೆ ದಂಡ ಜಾರಿಯಾದ ಮೊದಲ ದಿನವೇ 30 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಅಂತ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೇಳಿದ್ದಾರೆ.

ಅವರು ಗುರುವಾರ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದರು. ಇನ್ನು ಇದೇ ವೇಳೆ ಅವರು ದಂಡ ಪರಿಷ್ಕರಣೆ ಮಾಡಿರುವುದು ಆದಾಯ ಸಂಗ್ರಹಕ್ಕಲ್ಲ, ಜನರ ಸುರಕ್ಷತೆ ದೃಷ್ಟಿಯಿಂದ. ಮದ್ಯ ಸೇವಿಸಿ ಚಾಲನೆ ಮಾಡಿದರೆ ಪ್ರಾಣಹಾನಿ ಉಂಟಾಗುತ್ತದೆ ಎಂಬುದು ಗೊತ್ತಿದ್ದರೂ ತಪ್ಪು ಮಾಡುತ್ತಾರೆ. ಏಕಮುಖ ಸಂಚಾರ, ರಾಂಗ್ ಸೈಡ್​ನಲ್ಲಿ ವಾಹನ ಚಾಲನೆ ಮಾಡುತ್ತಾರೆ. ಹೆಲ್ಮೆಟ್​ರಹಿತ ಚಾಲನೆ ಪ್ರಾಣ ಹಾನಿಗೆ ಕಾರಣವಾಗಿದೆ.

ಈ ಸಂಗತಿ ಗೊತ್ತಿದ್ದರೂ ಕಾನೂನು ಉಲ್ಲಂಘಿಸುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಜನರಿಗೆ ಬುದ್ಧಿ ಹೇಳುವ ಅಗತ್ಯ ಇಲ್ಲ ಅಂತ ಹೇಳಿದರು ಇನ್ನು ವಾಹನ ನಿಲುಗಡೆ ನೀತಿ ಜಾರಿಗೊಳಿಸುವಂತೆ ಕೋರಿ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಶಾಲಾ- ಕಾಲೇಜು, ಸಿಬಿಡಿ ಮತ್ತು ಜನವಸತಿ ಪ್ರದೇಶಗಳಲ್ಲಿ ವಾಹನಗಳನ್ನು ರಸ್ತೆಗಳಲ್ಲಿ ಅಡ್ಡಾದಿಡ್ಡಿ ನಿಲುಗಡೆ ಮಾಡದಿರಲು ನೀತಿ ರೂಪಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿದೆ.

ಸಿಬಿಡಿ ವ್ಯಾಪ್ತಿಯಲ್ಲಿ ಇರುವ ಶಾಲೆ-ಕಾಲೇಜು ಆಡಳಿತ ಮಂಡಳಿ ತಮ್ಮ ವಾಹನಗಳಿಗೆ ಶಾಲಾ ಆವರಣದಲ್ಲಿ ರ್ಪಾಂಗ್​ವ್ಯವಸ್ಥೆ ಮಾಡಲಿ. ರಸ್ತೆಬದಿ ನಿಲ್ಲಿಸಿ ಜನರಿಗೆ ತೊಂದರೆ ಕೊಟ್ಟರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಜಾಗ ಇಲ್ಲದಿದ್ದರೆ ನಗರ ಬಿಟ್ಟು ಹೊರಗಡೆ ಹೋಗಿ ಎಂದು ಶಾಲಾ ಆಡಳಿತ ಮಂಡಳಿಗಳಿಗೆ ಭಾಸ್ಕರ್ ರಾವ್ ಖಡಕ್ ವಾರ್ನಿಂಗ್ ನೀಡಿದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago