ಸಂಚಾರ ಮುಕ್ತವಾಗಲಿದೆ ಕುಂದಾಪುರ ಫ್ಲೈ ಓವರ್ ; ಎಪ್ರಿಲ್ ತಿಂಗಳಿನಲ್ಲಿ ಲೋಕಾರ್ಪಣೆ -Vishwanews24

ಕುಂದಾಪುರ: ಇದೇ ಬರುವ ಎಪ್ರಿಲ್ ತಿಂಗಳಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ನಿರ್ಮಾಣವಾಗುತ್ತಿರುವ ಪ್ಲೈ ಓವರ್ ಸಂಚಾರ ಮುಕ್ತವಾಗಲಿದೆ. ಹಲವಾರು ಸಭೆ, ಚರ್ಚೆ, ಟೋಲ್ ಬಂದ್ ಎಚ್ಚರಿಕೆ ನಂತರ ಕಾಮಗಾರಿಗೆ ವೇಗ ಸಿಕ್ಕಿದ್ದು, ಕಾಮಗಾರಿ ಪೂರ್ಣಗೊಳ್ಳವ ಹಂತಕ್ಕೆ ಬಂದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಪ್ಲೇ ಓವರ್ ಕಾಮಗಾರಿ ಮುಗಿಸಿ ಆದಷ್ಟು ಶೀಘ್ರ ಸಂಚಾರಕ್ಕೆ ಬಿಟ್ಟುಕೊಡುವಂತೆ ಒತ್ತಾಯ, ಮಾಡಿದ್ದಲ್ಲದೆ, ಕುಂದಾಪುರದಲ್ಲಿ ಡಿಸಿ ಜೊತೆ ನಡೆಸಿದ ಸಭೆಯಲ್ಲಿ ಏಪ್ರಿಲ್ ತಿಂಗಳೊಳಗೆ ಸಂಚಾರಕ್ಕೆ ಬಿಟ್ಟುಕೊಡಬೇಕು ಇಲ್ಲದಿದ್ದರೆ ಟೋಲ್ ನಿರಾಕರಣೆ ಮೂಲಕ ಪ್ರತಿಭಟನೆ ಎಚ್ಚರಿಕೆ ನೀಡಲಾಗಿತ್ತು. ಪ್ರಸಕ್ತ ಕಾಮಗಾರಿ ವೇಗ ಪಡೆದುಕೊಂಡಿದ್ದು, ಎಪ್ರಿಲ್ ತಿಂಗಳಲ್ಲಿ ಸಂಚಾರಕ್ಕೆ ಬಿಟ್ಟುಕೊಡುವುದಾಗಿ ಕಂಪನಿ ಇಂಜಿನಿಯರ್ ಭರವಸೆ ನೀಡಿದ್ದಾರೆ ಎಂದು ಶುಕ್ರವಾರ ಪ್ಲೇ ಓವರ್ ಕಾಮಗಾರಿ ವೀಕ್ಷಣೆ ನಡೆಸಿ ಸುದ್ದಿಗಾರರಿಗೆ ತಿಳಿಸಿದರು.

ಬೆಂಗಳೂರಿಂದ ಕಾರವಾರಕ್ಕೆ ಮಂಜೂರಾದ ಹೊಸ ರೈಲ್ ಹಾಗೂ ಹಿಂದಿನ ಓಡುತ್ತಿದ್ದ ರೈಲು ಪಡೀಲ್ ಮೂಲಕ ಕುಂದಾಪುರ ಕಾರವಾರಕ್ಕೆ ಹೋಗುವಂತೆ ಮಾಡಲು ರೈಲ್ವೆ ಸಚಿವರ ಜೊತೆ ಮಾತನಾಡಿದ್ದು, ಎರಡೂ ರೈಲು ವಾರದಲ್ಲಿ ಏಳುದಿನವೂ ಓಡುವಂತೆ ಕೇಳಿಕೊಳ್ಳಲಾಗಿದೆ. ರೈಲು ಮಂಗಳೂರು ಸ್ಟೇಶನ್ನಿಗೆ ಹೋಗಿ ಬರುವುದರಿಂದ ಸಮಯ ವ್ಯಯವಾಗುವುದರಿಂದ ಪ್ರಯಾಣಿಕರಿಗೂ ಸಮಸ್ಯೆ ಆಗುತ್ತದೆ. ರೈಲು ಪೇಟೆ ಒಳಗಡೆ ಹೋಗುವುದರಿಂದ ಮಂಗಳೂರು ನಗರಕ್ಕೆ ಏನೂ ಪ್ರಯೋಜನವಿಲ್ಲ. ರೈಲ್ ಮಂಗಳೂರು ಸ್ಟೇಶನ್‌ಗೆ ಬರಬೇಕೆಂದು ಒತ್ತಾಯಿಸದಂತೆ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕೇಳಿಕೊಂಡಿದ್ದು, ಅವರು ಅದಕ್ಕೆ ಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕಿರಣ್‌ ಕೊಡ್ಗಿ, ಜಿಲ್ಲಾ ಪಂಚಾಯತ್‌ ಸದಸ್ಯೆ ಶ್ರೀಲತಾ ಸುರೇಶ್‌ ಶೆಟ್ಟಿ, ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಸುರೇಶ್‌ ಶೆಟ್ಟಿ ಕಾಡೂರು, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್‌ ಶೆಟ್ಟಿ ಬೀಜಾಡಿ, ಸತೀಶ್‌ ಪೂಜಾರಿ, ಮಾಜಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಬಿಲ್ಲವ, ಪುರಸಭೆ ಸದಸ್ಯರಾದ ಮೋಹನದಾಸ ಶೆಣೈ, ರಾಘವೇಂದ್ರ ಖಾರ್ವಿ, ಸಂದೀಪ ಖಾರ್ವಿ, ಶ್ವೇತಾ ಸಂತೋಷ್‌, ವೀಣಾ ಭಾಸ್ಕರ ಮೆಂಡನ್‌, ವನಿತಾ ಎಸ್‌. ಬಿಲ್ಲವ, ಸಂತೋಷ್‌ ಕುಮಾರ್‌ ಶೆಟ್ಟಿ, ಪ್ರೇಮಲತಾ, ಅಶ್ವಿ‌ನಿ ಪ್ರದೀಪ್‌, ಮಾಜಿ ಸದಸ್ಯರಾದ ವಿಜಯ್‌ ಎಸ್‌. ಪೂಜಾರಿ, ಸತೀಶ್‌ ಶೆಟ್ಟಿ, ವಸಂತಿ ಸಾರಂಗ, ಗುಣರತ್ನಾ, ಪುಷ್ಪಾ ಶೇಟ್‌, ಮುಖಂಡರಾದ ಕುತ್ಯಾರು ನವೀನ್‌ ಶೆಟ್ಟಿ, ಉದಯ ಕುಮಾರ್‌ ಶೆಟ್ಟಿ ಉಡುಪಿ, ಗೋಪಾಲ ಕಳಂಜಿ, ಸಂಗೀತಾ, ದಿವಾಕರ ಕಡ್ಗಿ, ಸದಾನಂದ ಬಳ್ಕೂರು, ವಿನೋದ್‌ರಾಜ್‌ ಪೂಜಾರಿ, ರೈಲ್ವೇ ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಗಣೇಶ್‌ ಪುತ್ರನ್‌, ವಿವೇಕ್‌ ನಾಯಕ್‌, ಪ್ರವೀಣ್‌ ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

9 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

19 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

19 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

19 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago