ಕಾಪು : ಸದ್ಯ ಸ್ಯಾಂಡಲ್ ವುಡ್ ನಲ್ಲಿ ಕಾಂತಾರ ಸಿನಿಮಾದ್ದೇ ಹವಾ . ಬಾಲಿವುಡ್ ಗೆ ಡಬ್ ಆಗ್ತಿರುವ ಕಾಂತಾರ ವರ್ಲ್ಡ್ ವೈಡ್ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಚಿತ್ರದಲ್ಲಿ ಕಾರಾಗೃಹದ ಸೀಕ್ವೆನ್ಸ್ ನಲ್ಲಿ ಕಾಪುವಿನ ಯುವಕ ಶ್ರೀಶೈಲ ನಟಿಸಿದ್ದಾರೆ.
ಪೊಲೀಸ್ ಪಾತ್ರದಲ್ಲಿ ಶ್ರೀಶೈಲ ಪಾತ್ರ ಮಾಡಿದ್ದಾರೆ. ರಿಷಬ್ ಶಿಕ್ಷೆ ಅನುಭವಿಸುವ ಸಂದರ್ಭದಲ್ಲಿ ಇವರು ಎಂಟ್ರಿ ಕೊಡ್ತಾರೆ. ಜೈವಿನಿಂದ ಪಾರಾಗಲು ಹಾಕಿರುವ ಸ್ಕೆಚ್ ಅನ್ನ ಕಾಪುವಿನ ಶ್ರೀಶೈಲ ಬಯಲು ಮಾಡಿ ಚಿತ್ರಕ್ಕೆ ದೊಡ್ಡ ಟ್ವಿಸ್ಟ್ ಕೊಟ್ಟಿದ್ದಾರೆ.
ಒಂದು ವಾರಗಳ ಕಾಲ ಕೆರಾಡಿಯ ಸಿನಿಮಾ ಸೆಟ್ನಲ್ಲಿ ನಟ ಬೀಡು ಬಿಟ್ಟಿದ್ದರು. ಶ್ರೀ ಶೈಲ ಮೂಲತಃ ಬಾಗಲಕೋಟೆ ಯವರು. ಪ್ರಸ್ತುತ ಹದಿನೈದು ವರ್ಷಗಳಿಂದ ಕಾಪುವಿನಲ್ಲಿ ವಾಸವಾಗಿದ್ದಾರೆ. ಕುಟುಂಬ ಹಲವಾರು ವರ್ಷಗಳಿಂದ ಇಲ್ಲಿಯೇ ನೆಲೆಸಿದೆ. ಈತ ಸಂತೆ ಮಾರುಕಟ್ಟೆಯಲ್ಲಿ ದಿನಸಿ ಮಾರಾಟ ಮಾಡುವ ಕೆಲಸ ಮಾಡುತ್ತಿದ್ದು ಇಂತಹ ಯುವಕ ಸಿನಿಮಾಕ್ಕೆ ಆಯ್ಕೆಯಾಗಿದ್ದು ಚಿತ್ರದ ಘನತೆ ಮತ್ತಷ್ಟು ಹೆಚ್ಚಿದೆ.
ಶ್ರೀಶೈಲ ನೈಜ ನಟನೆಯನ್ನು ನೋಡಿದ ಸ್ಥಳೀಯ ರಂಗಭೂಮಿ ಕಲಾವಿದರು ಕಿರುಚಿತ್ರ ಮತ್ತು ನಾಟಕಗಳಲ್ಲಿ ಅಭಿನಯಿಸುವಂತೆ ಆಫರ್ ಕೊಟ್ಟಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…