Featured

ಸಂತ್ರಸ್ತೆಯೊಂದಿಗೆ  ರೇವಣ್ಣ ನಿವಾಸದಲ್ಲಿ ಮಹಜರು ನಡೆಸಿದ ಎಸ್ಐಟಿ – Vishwanews24

ಸಂತ್ರಸ್ತೆಯೊಂದಿಗೆ  ರೇವಣ್ಣ ನಿವಾಸದಲ್ಲಿ ಮಹಜರು ನಡೆಸಿದ ಎಸ್ಐಟಿ

ಬೆಂಗಳೂರು: ಹೆಚ್‌ಡಿ ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ್ದ ಸಂತ್ರಸ್ತೆಯನ್ನು ಇಂದು ಬಸವನಗುಡಿಯಲ್ಲಿರುವ  ರೇವಣ್ಣ ನಿವಾಸಕ್ಕೆ ಕರೆತಂದು ವಿಶೇಷ ತನಿಖಾ ದಳ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ.

ಬೆಳಗ್ಗೆ 11 ಗಂಟೆಗೆ ರೇವಣ್ಣ ನಿವಾಸಕ್ಕೆ ನಾಲ್ವರು ಮಹಿಳಾ ಅಧಿಕಾರಿಗಳು ಸೇರಿ ಆರು ಮಂದಿ ಅಧಿಕಾರಿಗಳ ತಂಡದೊಂದಿಗೆ ಸಂತ್ರಸ್ತೆ ಆಗಮಿಸಿದರು. ಈ ವೇಳೆ ಸಂತ್ರಸ್ತೆಯ ಹೇಳಿಕೆ ಸೇರಿದಂತೆ ಎಲ್ಲಾ ಮಹಜರು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಚಿತ್ರೀಕರಣ ಮಾಡಲಾಯಿತು.

ಮಹಜರು ನಡೆಸುವ ಮೊದಲು ಮುಂಜಾಗ್ರತಾ ಕ್ರಮವಾಗಿ ರೇವಣ್ಣ ನಿವಾಸಕ್ಕೆ ಬ್ಯಾರಿಕೇಡ್‌ ಹಾಕಲಾಗಿತ್ತು. ಬಸವನಗುಡಿ ಪೊಲೀಸರು ಸ್ಥಳದಲ್ಲಿ ಬಿಗಿಭದ್ರತೆ ಕಲ್ಪಿಸಿದ್ದರು.

ಸಂತ್ರಸ್ತೆಯ ಆರೋಪ ಏನು?
ರೇವಣ್ಣ ತಮ್ಮ ಕೊಠಡಿಗೆ ಬರುವಂತೆ ಆಹ್ವಾನಿಸಿ ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು. ಮನೆಯ ಸ್ಟೋರ್ ರೂಂನಲ್ಲಿ ಕೈ ಹಿಡಿದು ಎಳೆಯುತ್ತಿದ್ದರು. ಸೀರೆಯ ಪಿನ್ ಕಿತ್ತು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಪ್ರಜ್ವಲ್ ಹಿಂದಿನಿಂದ ಬಂದು ಮೈ ಮುಟ್ಟುತ್ತಾ ಹೊಟ್ಟೆಯನ್ನು ಮುಟ್ಟುತ್ತಿದ್ದರು. ಇದೇ ರೀತಿ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆ ದೂರು ನೀಡಿದ್ದರು.

ತನ್ನ ಮಗಳ ಪೋನ್ ಗೆ ಹಲವು ಬಾರಿ ಪ್ರಜ್ವಲ್ ರೇವಣ್ಣ ವಿಡಿಯೋ ಕಾಲ್ ಮಾಡಿ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದಿಸಲು ಯತ್ನಿಸಿದ್ದರು ಎಂದು ಮಹಿಳೆ ಆರೋಪಿಸಿದ್ದರು. ಈ ದೂರಿನ ಅನ್ವಯ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ಕಿರುಕುಳ ಸೆಕ್ಷನ್ ಅಡಿ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಳೆದ ಎರಡು ದಿನಗಳ ಹಿಂದೆ ಹೊಳೆನರಸೀಪುರ ನಿವಾಸದಲ್ಲಿ ಮಹಜರ್ ನಡೆಸಿದ್ದ ಎಸ್‌ಐಟಿ ಇಂದು ರೇವಣ್ಣ ಅವರ ಬಸವನಗುಡಿ ನಿವಾಸಕ್ಕೆ ಸಂತ್ರಸ್ತೆಯನ್ನು ಕರೆತಂದು ಮಹಜರು ಮಾಡಿದ್ದಾರೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

2 days ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

2 days ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

2 days ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

2 days ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

2 days ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

2 days ago