Featured

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ : ಜೂನ್ 1ರಂದು ವಿಚಾರಣೆಗೆ ಹಾಜರಾಗಲು ಭವಾನಿ ರೇವಣ್ಣನಿಗೆ ಎಸ್‌ಐಟಿ ನೋಟಿಸ್ – vishwanews24

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ : ಜೂನ್ 1ರಂದು ವಿಚಾರಣೆಗೆ ಹಾಜರಾಗಲು ಭವಾನಿ ರೇವಣ್ಣನಿಗೆ ಎಸ್‌ಐಟಿ ನೋಟಿಸ್

ಬೆಂಗಳೂರು:  ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೂನ್ 1ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಎಸ್‌ಐಟಿ ತಂಡ, ಭವಾನಿ ರೇವಣ್ಣ ಅವರಿಗೆ ಮತ್ತೊಂದು ನೋಟಿಸ್ ಜಾರಿಗೊಳಿಸಿದೆ.

ಈ ಮುಂಚೆ ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ನೀವು, ತನಿಖೆಗೆ ಅವಶ್ಯವಿದ್ದರೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇರುವುದಾಗಿ ತಿಳಿಸಿದ್ದೀರಿ. ಆದರೆ, ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರ ನೀಡಿರಲಿಲ್ಲ. ಈ ಕೇಸ್‌ನಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಜೊತೆಗ ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಬರುತ್ತೇವೆ. ಆ ವೇಳೆ ಮನೆಯಲ್ಲಿ ಖುದ್ದು ಹಾಜರಿರಬೇಕು ಎಂದು ಎಸ್‌ಐಟಿ ಇನ್‌ಸ್ಪೆಕ್ಟರ್ ಹೇಮಂತ್ ಕುಮಾರ್ ನೋಟಿಸ್‌ನಲ್ಲಿ ಸೂಚನೆ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಯಲಿದೆ. ಈ ಮಧ್ಯೆ ಎಸ್‌ಐಟಿ ಖುದ್ದು ಹಾಜರಿರುವಂತೆ ನೋಟಿಸ್ ನೀಡಿದ್ದು, ನಿರೀಕ್ಷಣಾ ಜಾಮೀನು ಸಿಗದಿದ್ದರೆ ಭವಾನಿ ರೇವಣ್ಣ ಅವರು ಬಂಧನವಾಗುವ ಸಾಧ್ಯತೆ ಇದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

15 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

15 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

15 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

15 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

16 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

16 hours ago