Featured

ಸಂಧಾನದ ಮೂಲಕ ರಾಮ ಜನ್ಮಭೂಮಿ ಅಯೋಧ್ಯೆ ವಿವಾದವನ್ನು ಬಗೆಹರಿಸಿ : ಸುಪ್ರೀಂ ಆದೇಶ- Vishwanews24

ನವದೆಹಲಿ: ಹಲವು ದಶಕಗಳಿಂದ ಪರಿಹಾರ ಕಾಣದ ಸಮಸ್ಯೆಯಾಗಿರುವ ರಾಮಜನ್ಮಭೂಮಿ ವಿವಾದಕ್ಕೆ ಇದೀಗ ತಾರ್ಕಿಕ ಅಂತ್ಯವೊಂದು ಲಭಿಸುವ ಸೂಚನೆ ಸಿಕ್ಕಿದೆ. ಜನ್ಮಭೂಮಿ ವಿವಾದವನ್ನು ದಾವೆದಾರರು ಪರಸ್ಪರ ರಾಜೀ ಸಂಧಾನದ ಮೂಲಕವೇ ಬಗೆಹರಿಸಿಕೊಳ್ಳುವಂತೆ ದೇಶದ ಉಚ್ಛ ನ್ಯಾಯಾಲಯದ ಸಾಂವಿಧಾನಿಕ ಪೀಠವು ಇಂದು ಮಹತ್ವದ ತೀರ್ಪು ನೀಡಿದೆ.

ಇನ್ನೊಂದು ವಾರದಲ್ಲಿ ಸಂಧಾನ ಪ್ರಕ್ರಿಯೆ ಶುರುವಾಗಬೇಕು ಹಾಗೂ 2 ತಿಂಗಳ ಒಳಗೆ ಸಂಧಾನ ಪ್ರಕ್ರಿಯೆ ಅಂತ್ಯವಾಗಬೇಕು. ಉತ್ತರ ಪ್ರದೇಶದ ಫೈಜಾಬಾದ್ ನಲ್ಲಿ ಸಂಧಾನ ಮಾತುಕತೆ ನಡೆಸಿ ಇನ್ನೊಂದು ತಿಂಗಳಲ್ಲಿ ಸಂಧಾನದ ಫಲಶೃತಿ ಬಗ್ಗೆ ನಮಗೆ ಹೇಳಬೇಕು ಎಂದು ಖಲೀಫುಲ್ಲಾ ಸಂಧಾನಕಾರರ ತಂಡಕ್ಕೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಸೂಚಿಸಿದೆ.

ಕಾಲಮಿತಿಯಲ್ಲಿ ರಾಮ ಜನ್ಮಭೂಮಿ – ಬಾಬರಿ ಮಸೀದಿ ಜಮೀನು ವಿವಾದವನ್ನು ಸಂಧಾನ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ನ ಸಾಂವಿಧಾನಿಕ ಪೀಠ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಉತ್ತರಪ್ರದೇಶದ ಫೈಸಲಾಬಾದ್ ನಲ್ಲಿ ಈ ಸಂಧಾನ ಪ್ರಕ್ರಿಯೆ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ನ್ಯಾಯಾಲವು ತಾನು ನಿಯಮಿಸುವ ಸಂಧಾನಕಾರರ ನೇತೃತ್ವದಲ್ಲಿ ಮತ್ತು ತನ್ನ ನಿಗಾವಹಣೆಯಲ್ಲಿ ಈ ಪ್ರಕ್ರಿಯೆ ನಡೆಯಬೇಕು ಎಂದು ಸ್ಪಷ್ಟಪಡಿಸಿದೆ.

Vishwa News 24

Recent Posts

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

18 seconds ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago