Featured

ಸಂಧಾನದ ಮೂಲಕ ರಾಮ ಜನ್ಮಭೂಮಿ ಅಯೋಧ್ಯೆ ವಿವಾದವನ್ನು ಬಗೆಹರಿಸಿ : ಸುಪ್ರೀಂ ಆದೇಶ- Vishwanews24

ನವದೆಹಲಿ: ಹಲವು ದಶಕಗಳಿಂದ ಪರಿಹಾರ ಕಾಣದ ಸಮಸ್ಯೆಯಾಗಿರುವ ರಾಮಜನ್ಮಭೂಮಿ ವಿವಾದಕ್ಕೆ ಇದೀಗ ತಾರ್ಕಿಕ ಅಂತ್ಯವೊಂದು ಲಭಿಸುವ ಸೂಚನೆ ಸಿಕ್ಕಿದೆ. ಜನ್ಮಭೂಮಿ ವಿವಾದವನ್ನು ದಾವೆದಾರರು ಪರಸ್ಪರ ರಾಜೀ ಸಂಧಾನದ ಮೂಲಕವೇ ಬಗೆಹರಿಸಿಕೊಳ್ಳುವಂತೆ ದೇಶದ ಉಚ್ಛ ನ್ಯಾಯಾಲಯದ ಸಾಂವಿಧಾನಿಕ ಪೀಠವು ಇಂದು ಮಹತ್ವದ ತೀರ್ಪು ನೀಡಿದೆ.

ಇನ್ನೊಂದು ವಾರದಲ್ಲಿ ಸಂಧಾನ ಪ್ರಕ್ರಿಯೆ ಶುರುವಾಗಬೇಕು ಹಾಗೂ 2 ತಿಂಗಳ ಒಳಗೆ ಸಂಧಾನ ಪ್ರಕ್ರಿಯೆ ಅಂತ್ಯವಾಗಬೇಕು. ಉತ್ತರ ಪ್ರದೇಶದ ಫೈಜಾಬಾದ್ ನಲ್ಲಿ ಸಂಧಾನ ಮಾತುಕತೆ ನಡೆಸಿ ಇನ್ನೊಂದು ತಿಂಗಳಲ್ಲಿ ಸಂಧಾನದ ಫಲಶೃತಿ ಬಗ್ಗೆ ನಮಗೆ ಹೇಳಬೇಕು ಎಂದು ಖಲೀಫುಲ್ಲಾ ಸಂಧಾನಕಾರರ ತಂಡಕ್ಕೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಸೂಚಿಸಿದೆ.

ಕಾಲಮಿತಿಯಲ್ಲಿ ರಾಮ ಜನ್ಮಭೂಮಿ – ಬಾಬರಿ ಮಸೀದಿ ಜಮೀನು ವಿವಾದವನ್ನು ಸಂಧಾನ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ನ ಸಾಂವಿಧಾನಿಕ ಪೀಠ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಉತ್ತರಪ್ರದೇಶದ ಫೈಸಲಾಬಾದ್ ನಲ್ಲಿ ಈ ಸಂಧಾನ ಪ್ರಕ್ರಿಯೆ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ನ್ಯಾಯಾಲವು ತಾನು ನಿಯಮಿಸುವ ಸಂಧಾನಕಾರರ ನೇತೃತ್ವದಲ್ಲಿ ಮತ್ತು ತನ್ನ ನಿಗಾವಹಣೆಯಲ್ಲಿ ಈ ಪ್ರಕ್ರಿಯೆ ನಡೆಯಬೇಕು ಎಂದು ಸ್ಪಷ್ಟಪಡಿಸಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago