Featured

ಸಂಧಾನ ಸೂತ್ರದ ಪ್ರತಿಯನ್ನು ಸಚಿವರು ಮುಷ್ಕರದ ವೇದಿಕೆಗೆ ಬಂದು ಸಲ್ಲಿಸಬೇಕು  : ಕೋಡಿಹಳ್ಳಿ ಚಂದ್ರಶೇಖರ್ -Vishwanews24

ಸಂಧಾನ ಸೂತ್ರದ ಪ್ರತಿಯನ್ನು ಸಚಿವರು ಮುಷ್ಕರದ ವೇದಿಕೆಗೆ ಬಂದು ಸಲ್ಲಿಸಬೇಕು  : ಕೋಡಿಹಳ್ಳಿ ಚಂದ್ರಶೇಖರ್ -Vishwanews24

ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಸಂಘಟನೆಗಳು ಮತ್ತು ಸರ್ಕಾರದ ನಡುವೆ ಭಾನುವಾರ ನಡೆದ ಸಭೆಯಲ್ಲಿ ಅಂತಿಮಗೊಳಿಸಿರುವ ಸಂಧಾನ ಸೂತ್ರಗಳನ್ನು ಸಚಿವರು ಮುಷ್ಕರದ ವೇದಿಕೆಗೆ ಬಂದು ಸಲ್ಲಿಸಬೇಕು ಎಂಬ ಬೇಡಿಕೆಯನ್ನು ‌ಕೋಡಿಹಳ್ಳಿ ಚಂದ್ರಶೇಖರ್ ಮುಂದಿಟ್ಟಿದ್ದಾರೆ.

ಸ್ವಾತಂತ್ರ್ಯ ಉದ್ಯಾನದ ಆವರಣದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಸ್ಥಳದಲ್ಲಿ ಸೋಮವಾರ ಮಾತನಾಡಿದ ಅವರು, ‘ನಾವು ಹತ್ತು ಬೇಡಿಕೆಗಳನ್ನು ಮುಂದಿಟ್ಟಿದ್ದೆವು. ಒಂಭತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಕೊಂಡಿದೆ. ಸಂಧಾನ ಸೂತ್ರದ ಪ್ರತಿಯನ್ನು ಸಚಿವರು ಇಲ್ಲಿಗೆ ತಂದು ಒಪ್ಪಿಸಲಿ. ಆ ಬಳಿಕ ಹೋರಾಟದ ಮುಂದಿನ ಹೆಜ್ಜೆ ಕುರಿತು ನಿರ್ಧರಿಸುತ್ತೇವೆ’ ಎಂದರು.

ಮುಖಂಡರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ: ‘ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಸಂಘಟನೆಯ ಎಂಟು ಮುಖಂಡರು ಸೋಮವಾರ ಬೆಳಿಗ್ಗೆಯಿಂದ ಎರಡು ಗಂಟೆಗಳ ಕಾಲ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಎಲ್ಲರ ಮೊಬೈಲ್ ಫೋನ್ ಗಳು ಸ್ವಿಚ್ಡ್ ಆಫ್ ಆಗಿದ್ದವು. ಮುಖಂಡರ ಅಪಹರಣ ನಡೆದಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು.‌ ಪೊಲೀಸರಿಗೆ ದೂರು ನೀಡಲು ಯೋಚಿಸಲಾಗಿತ್ತು’ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

‘ಎರಡು ಗಂಟೆಗಳ ಬಳಿಕ ಒಂದು ನಂಬರ್ ನಿಂದ ಕರೆ ಬಂತು. ಆ ಕಡೆಯಿಂದ ಮಾತನಾಡಿದ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಮಾತನಾಡಿದರು. ಆತಂಕಪಡಬೇಡಿ ಸಂಘಟನೆಯ ಮುಖಂಡರು ನಮ್ಮೊಂದಿಗೆ ಇದ್ದಾರೆ ಎಂದರು. ಆ ಬಳಿಕ ಮುಖಂಡರು ನಮ್ಮ ಸಂಪರ್ಕಕ್ಕೆ ಬಂದರು’ ಎಂದು ತಿಳಿಸಿದರು.

ಸಚಿವರು ಸಂಧಾನ ಸೂತ್ರದ ಲಿಖಿತ ಪ್ರತಿಯೊಂದಿಗೆ ಇಲ್ಲಿಗೆ ಬರಲು. ಅಷ್ಟರವರೆಗೆ ಭಾನುವಾರದಿಂದ ನಡೆದಿರುವ‌ ಎಲ್ಲ ಬೆಳವಣಿಗೆಗಳ ಕುರಿತು ಚರ್ಚೆ ನಡೆಯಲಿ. ಸಚಿವರು ಬಂದ ಬಳಿಕ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.

ಆಮಿಷಕ್ಕೆ ಒಳಗಾಗಿಲ್ಲ: ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ‘ ನಮ್ಮ ಯಾವುದೇ ಬೇಡಿಕೆಗಳಿಂದ ಹಿಂದೆ ಸರಿದಿಲ್ಲ. ಸರ್ಕಾರಿ ನೌಕರರು ಎಂದು ಪರಿಗಣಿಸುವ ವಿಚಾರದಲ್ಲಿ ಆರ್ಥಿಕ ತೊಡಕುಗಳಿವೆ ಎಂದು ಸರ್ಕಾರ ಹೇಳಿದೆ’ ಎಂದರು.

‘ಜಾತಿ ಸಂಘಟನೆಗಳ ಕುರಿತು ಕೆಲವು ಆರೋಪಗಳು ಕೇಳಿಬರುತ್ತಿವೆ. ಯಾವುದೇ ಜಾತಿ ಸಂಘಟನೆಗಳ ಮಾತನ್ನು ನಾವು ಕೇಳಿಲ್ಲ. ಯಾವುದೇ ರೀತಿಯ ಆಮಿಷಕ್ಕೆ ಒಳಗಾಗಿಲ್ಲ. ಯಾರಿಂದಲೂ ಹಣ ಸೇರಿದಂತೆ ಯಾವುದನ್ನೂ ನಾವು ಪಡೆದಿಲ್ಲ’ ಎಂದು ಹೇಳಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago