ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಸಂಘಟನೆಗಳು ಮತ್ತು ಸರ್ಕಾರದ ನಡುವೆ ಭಾನುವಾರ ನಡೆದ ಸಭೆಯಲ್ಲಿ ಅಂತಿಮಗೊಳಿಸಿರುವ ಸಂಧಾನ ಸೂತ್ರಗಳನ್ನು ಸಚಿವರು ಮುಷ್ಕರದ ವೇದಿಕೆಗೆ ಬಂದು ಸಲ್ಲಿಸಬೇಕು ಎಂಬ ಬೇಡಿಕೆಯನ್ನು ಕೋಡಿಹಳ್ಳಿ ಚಂದ್ರಶೇಖರ್ ಮುಂದಿಟ್ಟಿದ್ದಾರೆ.
ಸ್ವಾತಂತ್ರ್ಯ ಉದ್ಯಾನದ ಆವರಣದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಸ್ಥಳದಲ್ಲಿ ಸೋಮವಾರ ಮಾತನಾಡಿದ ಅವರು, ‘ನಾವು ಹತ್ತು ಬೇಡಿಕೆಗಳನ್ನು ಮುಂದಿಟ್ಟಿದ್ದೆವು. ಒಂಭತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಕೊಂಡಿದೆ. ಸಂಧಾನ ಸೂತ್ರದ ಪ್ರತಿಯನ್ನು ಸಚಿವರು ಇಲ್ಲಿಗೆ ತಂದು ಒಪ್ಪಿಸಲಿ. ಆ ಬಳಿಕ ಹೋರಾಟದ ಮುಂದಿನ ಹೆಜ್ಜೆ ಕುರಿತು ನಿರ್ಧರಿಸುತ್ತೇವೆ’ ಎಂದರು.
ಮುಖಂಡರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ: ‘ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಸಂಘಟನೆಯ ಎಂಟು ಮುಖಂಡರು ಸೋಮವಾರ ಬೆಳಿಗ್ಗೆಯಿಂದ ಎರಡು ಗಂಟೆಗಳ ಕಾಲ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಎಲ್ಲರ ಮೊಬೈಲ್ ಫೋನ್ ಗಳು ಸ್ವಿಚ್ಡ್ ಆಫ್ ಆಗಿದ್ದವು. ಮುಖಂಡರ ಅಪಹರಣ ನಡೆದಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಪೊಲೀಸರಿಗೆ ದೂರು ನೀಡಲು ಯೋಚಿಸಲಾಗಿತ್ತು’ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
‘ಎರಡು ಗಂಟೆಗಳ ಬಳಿಕ ಒಂದು ನಂಬರ್ ನಿಂದ ಕರೆ ಬಂತು. ಆ ಕಡೆಯಿಂದ ಮಾತನಾಡಿದ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಮಾತನಾಡಿದರು. ಆತಂಕಪಡಬೇಡಿ ಸಂಘಟನೆಯ ಮುಖಂಡರು ನಮ್ಮೊಂದಿಗೆ ಇದ್ದಾರೆ ಎಂದರು. ಆ ಬಳಿಕ ಮುಖಂಡರು ನಮ್ಮ ಸಂಪರ್ಕಕ್ಕೆ ಬಂದರು’ ಎಂದು ತಿಳಿಸಿದರು.
ಸಚಿವರು ಸಂಧಾನ ಸೂತ್ರದ ಲಿಖಿತ ಪ್ರತಿಯೊಂದಿಗೆ ಇಲ್ಲಿಗೆ ಬರಲು. ಅಷ್ಟರವರೆಗೆ ಭಾನುವಾರದಿಂದ ನಡೆದಿರುವ ಎಲ್ಲ ಬೆಳವಣಿಗೆಗಳ ಕುರಿತು ಚರ್ಚೆ ನಡೆಯಲಿ. ಸಚಿವರು ಬಂದ ಬಳಿಕ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.
ಆಮಿಷಕ್ಕೆ ಒಳಗಾಗಿಲ್ಲ: ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ‘ ನಮ್ಮ ಯಾವುದೇ ಬೇಡಿಕೆಗಳಿಂದ ಹಿಂದೆ ಸರಿದಿಲ್ಲ. ಸರ್ಕಾರಿ ನೌಕರರು ಎಂದು ಪರಿಗಣಿಸುವ ವಿಚಾರದಲ್ಲಿ ಆರ್ಥಿಕ ತೊಡಕುಗಳಿವೆ ಎಂದು ಸರ್ಕಾರ ಹೇಳಿದೆ’ ಎಂದರು.
‘ಜಾತಿ ಸಂಘಟನೆಗಳ ಕುರಿತು ಕೆಲವು ಆರೋಪಗಳು ಕೇಳಿಬರುತ್ತಿವೆ. ಯಾವುದೇ ಜಾತಿ ಸಂಘಟನೆಗಳ ಮಾತನ್ನು ನಾವು ಕೇಳಿಲ್ಲ. ಯಾವುದೇ ರೀತಿಯ ಆಮಿಷಕ್ಕೆ ಒಳಗಾಗಿಲ್ಲ. ಯಾರಿಂದಲೂ ಹಣ ಸೇರಿದಂತೆ ಯಾವುದನ್ನೂ ನಾವು ಪಡೆದಿಲ್ಲ’ ಎಂದು ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…