Featured

ಸಂಧಾನ ಸೂತ್ರದ ಪ್ರತಿಯನ್ನು ಸಚಿವರು ಮುಷ್ಕರದ ವೇದಿಕೆಗೆ ಬಂದು ಸಲ್ಲಿಸಬೇಕು  : ಕೋಡಿಹಳ್ಳಿ ಚಂದ್ರಶೇಖರ್ -Vishwanews24

ಸಂಧಾನ ಸೂತ್ರದ ಪ್ರತಿಯನ್ನು ಸಚಿವರು ಮುಷ್ಕರದ ವೇದಿಕೆಗೆ ಬಂದು ಸಲ್ಲಿಸಬೇಕು  : ಕೋಡಿಹಳ್ಳಿ ಚಂದ್ರಶೇಖರ್ -Vishwanews24

ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಸಂಘಟನೆಗಳು ಮತ್ತು ಸರ್ಕಾರದ ನಡುವೆ ಭಾನುವಾರ ನಡೆದ ಸಭೆಯಲ್ಲಿ ಅಂತಿಮಗೊಳಿಸಿರುವ ಸಂಧಾನ ಸೂತ್ರಗಳನ್ನು ಸಚಿವರು ಮುಷ್ಕರದ ವೇದಿಕೆಗೆ ಬಂದು ಸಲ್ಲಿಸಬೇಕು ಎಂಬ ಬೇಡಿಕೆಯನ್ನು ‌ಕೋಡಿಹಳ್ಳಿ ಚಂದ್ರಶೇಖರ್ ಮುಂದಿಟ್ಟಿದ್ದಾರೆ.

ಸ್ವಾತಂತ್ರ್ಯ ಉದ್ಯಾನದ ಆವರಣದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಸ್ಥಳದಲ್ಲಿ ಸೋಮವಾರ ಮಾತನಾಡಿದ ಅವರು, ‘ನಾವು ಹತ್ತು ಬೇಡಿಕೆಗಳನ್ನು ಮುಂದಿಟ್ಟಿದ್ದೆವು. ಒಂಭತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಕೊಂಡಿದೆ. ಸಂಧಾನ ಸೂತ್ರದ ಪ್ರತಿಯನ್ನು ಸಚಿವರು ಇಲ್ಲಿಗೆ ತಂದು ಒಪ್ಪಿಸಲಿ. ಆ ಬಳಿಕ ಹೋರಾಟದ ಮುಂದಿನ ಹೆಜ್ಜೆ ಕುರಿತು ನಿರ್ಧರಿಸುತ್ತೇವೆ’ ಎಂದರು.

ಮುಖಂಡರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ: ‘ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಸಂಘಟನೆಯ ಎಂಟು ಮುಖಂಡರು ಸೋಮವಾರ ಬೆಳಿಗ್ಗೆಯಿಂದ ಎರಡು ಗಂಟೆಗಳ ಕಾಲ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಎಲ್ಲರ ಮೊಬೈಲ್ ಫೋನ್ ಗಳು ಸ್ವಿಚ್ಡ್ ಆಫ್ ಆಗಿದ್ದವು. ಮುಖಂಡರ ಅಪಹರಣ ನಡೆದಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು.‌ ಪೊಲೀಸರಿಗೆ ದೂರು ನೀಡಲು ಯೋಚಿಸಲಾಗಿತ್ತು’ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

‘ಎರಡು ಗಂಟೆಗಳ ಬಳಿಕ ಒಂದು ನಂಬರ್ ನಿಂದ ಕರೆ ಬಂತು. ಆ ಕಡೆಯಿಂದ ಮಾತನಾಡಿದ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಮಾತನಾಡಿದರು. ಆತಂಕಪಡಬೇಡಿ ಸಂಘಟನೆಯ ಮುಖಂಡರು ನಮ್ಮೊಂದಿಗೆ ಇದ್ದಾರೆ ಎಂದರು. ಆ ಬಳಿಕ ಮುಖಂಡರು ನಮ್ಮ ಸಂಪರ್ಕಕ್ಕೆ ಬಂದರು’ ಎಂದು ತಿಳಿಸಿದರು.

ಸಚಿವರು ಸಂಧಾನ ಸೂತ್ರದ ಲಿಖಿತ ಪ್ರತಿಯೊಂದಿಗೆ ಇಲ್ಲಿಗೆ ಬರಲು. ಅಷ್ಟರವರೆಗೆ ಭಾನುವಾರದಿಂದ ನಡೆದಿರುವ‌ ಎಲ್ಲ ಬೆಳವಣಿಗೆಗಳ ಕುರಿತು ಚರ್ಚೆ ನಡೆಯಲಿ. ಸಚಿವರು ಬಂದ ಬಳಿಕ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.

ಆಮಿಷಕ್ಕೆ ಒಳಗಾಗಿಲ್ಲ: ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ‘ ನಮ್ಮ ಯಾವುದೇ ಬೇಡಿಕೆಗಳಿಂದ ಹಿಂದೆ ಸರಿದಿಲ್ಲ. ಸರ್ಕಾರಿ ನೌಕರರು ಎಂದು ಪರಿಗಣಿಸುವ ವಿಚಾರದಲ್ಲಿ ಆರ್ಥಿಕ ತೊಡಕುಗಳಿವೆ ಎಂದು ಸರ್ಕಾರ ಹೇಳಿದೆ’ ಎಂದರು.

‘ಜಾತಿ ಸಂಘಟನೆಗಳ ಕುರಿತು ಕೆಲವು ಆರೋಪಗಳು ಕೇಳಿಬರುತ್ತಿವೆ. ಯಾವುದೇ ಜಾತಿ ಸಂಘಟನೆಗಳ ಮಾತನ್ನು ನಾವು ಕೇಳಿಲ್ಲ. ಯಾವುದೇ ರೀತಿಯ ಆಮಿಷಕ್ಕೆ ಒಳಗಾಗಿಲ್ಲ. ಯಾರಿಂದಲೂ ಹಣ ಸೇರಿದಂತೆ ಯಾವುದನ್ನೂ ನಾವು ಪಡೆದಿಲ್ಲ’ ಎಂದು ಹೇಳಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

10 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

10 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

10 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

11 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

11 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

12 hours ago