Featured

ಸಂಧಾನ ಸೂತ್ರದ ಪ್ರತಿಯನ್ನು ಸಚಿವರು ಮುಷ್ಕರದ ವೇದಿಕೆಗೆ ಬಂದು ಸಲ್ಲಿಸಬೇಕು  : ಕೋಡಿಹಳ್ಳಿ ಚಂದ್ರಶೇಖರ್ -Vishwanews24

ಸಂಧಾನ ಸೂತ್ರದ ಪ್ರತಿಯನ್ನು ಸಚಿವರು ಮುಷ್ಕರದ ವೇದಿಕೆಗೆ ಬಂದು ಸಲ್ಲಿಸಬೇಕು  : ಕೋಡಿಹಳ್ಳಿ ಚಂದ್ರಶೇಖರ್ -Vishwanews24

ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಸಂಘಟನೆಗಳು ಮತ್ತು ಸರ್ಕಾರದ ನಡುವೆ ಭಾನುವಾರ ನಡೆದ ಸಭೆಯಲ್ಲಿ ಅಂತಿಮಗೊಳಿಸಿರುವ ಸಂಧಾನ ಸೂತ್ರಗಳನ್ನು ಸಚಿವರು ಮುಷ್ಕರದ ವೇದಿಕೆಗೆ ಬಂದು ಸಲ್ಲಿಸಬೇಕು ಎಂಬ ಬೇಡಿಕೆಯನ್ನು ‌ಕೋಡಿಹಳ್ಳಿ ಚಂದ್ರಶೇಖರ್ ಮುಂದಿಟ್ಟಿದ್ದಾರೆ.

ಸ್ವಾತಂತ್ರ್ಯ ಉದ್ಯಾನದ ಆವರಣದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಸ್ಥಳದಲ್ಲಿ ಸೋಮವಾರ ಮಾತನಾಡಿದ ಅವರು, ‘ನಾವು ಹತ್ತು ಬೇಡಿಕೆಗಳನ್ನು ಮುಂದಿಟ್ಟಿದ್ದೆವು. ಒಂಭತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಕೊಂಡಿದೆ. ಸಂಧಾನ ಸೂತ್ರದ ಪ್ರತಿಯನ್ನು ಸಚಿವರು ಇಲ್ಲಿಗೆ ತಂದು ಒಪ್ಪಿಸಲಿ. ಆ ಬಳಿಕ ಹೋರಾಟದ ಮುಂದಿನ ಹೆಜ್ಜೆ ಕುರಿತು ನಿರ್ಧರಿಸುತ್ತೇವೆ’ ಎಂದರು.

ಮುಖಂಡರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ: ‘ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಸಂಘಟನೆಯ ಎಂಟು ಮುಖಂಡರು ಸೋಮವಾರ ಬೆಳಿಗ್ಗೆಯಿಂದ ಎರಡು ಗಂಟೆಗಳ ಕಾಲ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಎಲ್ಲರ ಮೊಬೈಲ್ ಫೋನ್ ಗಳು ಸ್ವಿಚ್ಡ್ ಆಫ್ ಆಗಿದ್ದವು. ಮುಖಂಡರ ಅಪಹರಣ ನಡೆದಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು.‌ ಪೊಲೀಸರಿಗೆ ದೂರು ನೀಡಲು ಯೋಚಿಸಲಾಗಿತ್ತು’ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

‘ಎರಡು ಗಂಟೆಗಳ ಬಳಿಕ ಒಂದು ನಂಬರ್ ನಿಂದ ಕರೆ ಬಂತು. ಆ ಕಡೆಯಿಂದ ಮಾತನಾಡಿದ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಮಾತನಾಡಿದರು. ಆತಂಕಪಡಬೇಡಿ ಸಂಘಟನೆಯ ಮುಖಂಡರು ನಮ್ಮೊಂದಿಗೆ ಇದ್ದಾರೆ ಎಂದರು. ಆ ಬಳಿಕ ಮುಖಂಡರು ನಮ್ಮ ಸಂಪರ್ಕಕ್ಕೆ ಬಂದರು’ ಎಂದು ತಿಳಿಸಿದರು.

ಸಚಿವರು ಸಂಧಾನ ಸೂತ್ರದ ಲಿಖಿತ ಪ್ರತಿಯೊಂದಿಗೆ ಇಲ್ಲಿಗೆ ಬರಲು. ಅಷ್ಟರವರೆಗೆ ಭಾನುವಾರದಿಂದ ನಡೆದಿರುವ‌ ಎಲ್ಲ ಬೆಳವಣಿಗೆಗಳ ಕುರಿತು ಚರ್ಚೆ ನಡೆಯಲಿ. ಸಚಿವರು ಬಂದ ಬಳಿಕ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.

ಆಮಿಷಕ್ಕೆ ಒಳಗಾಗಿಲ್ಲ: ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ‘ ನಮ್ಮ ಯಾವುದೇ ಬೇಡಿಕೆಗಳಿಂದ ಹಿಂದೆ ಸರಿದಿಲ್ಲ. ಸರ್ಕಾರಿ ನೌಕರರು ಎಂದು ಪರಿಗಣಿಸುವ ವಿಚಾರದಲ್ಲಿ ಆರ್ಥಿಕ ತೊಡಕುಗಳಿವೆ ಎಂದು ಸರ್ಕಾರ ಹೇಳಿದೆ’ ಎಂದರು.

‘ಜಾತಿ ಸಂಘಟನೆಗಳ ಕುರಿತು ಕೆಲವು ಆರೋಪಗಳು ಕೇಳಿಬರುತ್ತಿವೆ. ಯಾವುದೇ ಜಾತಿ ಸಂಘಟನೆಗಳ ಮಾತನ್ನು ನಾವು ಕೇಳಿಲ್ಲ. ಯಾವುದೇ ರೀತಿಯ ಆಮಿಷಕ್ಕೆ ಒಳಗಾಗಿಲ್ಲ. ಯಾರಿಂದಲೂ ಹಣ ಸೇರಿದಂತೆ ಯಾವುದನ್ನೂ ನಾವು ಪಡೆದಿಲ್ಲ’ ಎಂದು ಹೇಳಿದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 days ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

2 days ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

2 days ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

2 days ago