ಕಾಪು: ಕಾಪು ಪುರಸಭೆ ವ್ಯಾಪ್ತಿಯ ಮೂಳೂರು ತೊಟ್ಟಂ ವಾರ್ಡಿಗೆ ಸಂಬಂಧಿಸಿದ ಫಿಶರಿಸ್ ರಸ್ತೆಯೂ ಸಂಪೂರ್ಣ ಹದಗೆಟ್ಟ ಪರಿಣಾಮ ಪ್ರತಿದಿನ ವಾಹನ ಸವಾರರು ,ಪಾದಚಾರಿಗಳು ಸಂಕಟ ಪಡುವಂತಾಗಿದೆ.
ಗೆಸ್ಟ್ ಹೌಸ್ ಗಳ ಮೂಲದ ಮನೆ ಎಂಬಂತ್ತಿರುವ ಮೂಳೂರು ತೊಟ್ಟಂ ವಾರ್ಡಿನ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು ಕಾಪು ದ್ವೀಪಸ್ಥಂಭ-ಮಟ್ಟು ಬೀಚ್-ಮಲ್ಪೆ ಬಂದರಿಗೆ ಸಂಪರ್ಕಕೊಂಡಿಯಾಗಿರುವ ಈ ರಸ್ತೆ ಸದ್ಯ ಕಂಬಳದ ಗದ್ದೆಯಂತೆ ಮಾರ್ಪಟ್ಟಿದೆ.
ಸುಮಾರು ಹತ್ತು ವರ್ಷದ ಹಿಂದೆ ಡಾಂಬರಿಕರಣ ಕಂಡ ಈ ರಸ್ತೆಯೂ ವಾಣಿಜ್ಯ ರಸ್ತೆಯಾಗಿಯೂ ಮಾರ್ಪಡಾಗಿದ್ದು ಘಣ ವಾಹನಗಳು ಸೇರಿದಂತೆ ಬೇರೆ ಊರಿನಿಂದ ಕೂಡ ಬೀಚ್ ಸವಿಯಲು ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಐವತ್ತಕ್ಕೂ ಅಧಿಕ ಗೆಸ್ಟ್ ಹೌಸ್ :
ಈ ಭಾಗದಲ್ಲಿ ಸುಮಾರು ಐವತ್ತಕ್ಕೂ ಅಧಿಕ ಪ್ರವಾಸಿಗರಿಗಾಗಿ ಐವತ್ತಕ್ಕೂ ಅಧಿಕ ಖಾಸಾಗಿ ಗೆಸ್ಟ್ ಹೌಸ್ ಗಳು ಕೂಡ ತಲೆ ಎತ್ತಿದ್ದು ದಿನದ ಇಪ್ಪತ್ತನಾಲ್ಕು ಗಂಟೆಯೂ ಕೂಡ ವಾಹನ ದಟ್ಟನೆ ಇರುತ್ತದೆ.
ಮಳೆಗಾಲದಲ್ಲಿ ಕೆಸರರು-ಬೇಸಿಗೆ ಧೂಳು ಹೈರಾಣು
ಮಳೆಗಾಲದಲ್ಲಿ ಈ ರಸ್ತೆ ಸಂಪೂರ್ಣ ಕೆಸರುತುಂಬಿ ಪಾದಚಾರಿಗಳಿಗೆ ನಡೆಯಲು ಕಷ್ಟವಾದರೆ,ಇತರ ಸಮಯದಲ್ಲಿ ಸಂಪೂರ್ಣ ಧೂಳು ಅಕ್ಕಪಕ್ಕದ ಮನೆಯೊಳಗೆ ಸೇರಿಕೊಂಡು ಸಮಸ್ಯೆಯಾಗುತ್ತಿದೆ.
ಈ ಬಗ್ಗೆ ಸಂಬಂಧಪಟ್ಟ ಪುರಸಭೆ ಸದಸ್ಯರಿಗೆ ಮನವಿ ಮಾಡಿದ್ದರೂ ಕೂಡ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಅನ್ನುತ್ತಾರೆ ಗ್ರಾಮಸ್ಥರು.
“ಮೂರು ಬಾರಿ ಸಂಬಂಧ ಪಟ್ಟ ಅಧಿಕಾರಿಗಳಿಗೆ-ಶಾಸಕರಿಗೆ ದಾಖಲೆ ಸಮೇತ ಮನವಿ ಸಲ್ಲಿಸಿದ್ದು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ ಆದರೆ ಕಾಮಗಾರಿಗೆ ಹಣ ಬಿಡುಗಡೆಯಾಗಿಲ್ಲ ,ಮುಂದಿನ ಪುರಸಭೆಯ ಸಭೆಯಲ್ಲಿ ಮತ್ತೊಂದು ಬಾರಿ ಧ್ವನಿಎತ್ತುವ ಮುಖೇನ ರಸ್ತೆ ದುರಸ್ತಿಗೆ ಆಗ್ರಹ ಮಾಡಲಾಗುತ್ತದೆ”
ಸತೀಶ್ಚಂದ್ರ : ಪುರಸಭೆ ಸದಸ್ಯರು,ತೊಟ್ಟಂವಾರ್ಡ್
“ಪ್ರತಿದಿನ ಸಾವಿರಾರು ವಾಹನಗಳು ಓಡಾಡುತ್ತಿದೆ ಅಷ್ಟು ಮಾತ್ರವಲ್ಲದೆ ಘನವಾಹನಗಳ ಸಂಚಾರ ಕೂಡ ಜಾಸ್ತಿಯಾಗಿಯೇ ಇದೆ ,ಸುಮಾರು ಹತ್ತು ವರ್ಷದ ಹಿಂದೆ ಹಾಕಿದ ಡಾಂಬರು ಸಂಪೂರ್ಣ ಮಳೆ-ಹಾಗೂ ವಾಹನದ ದಟ್ಟಣೆಯಿಂದ ಕೊಚ್ಚಿಹೋಗಿದೆ ಮನವಿಗೆ ಯಾವುದೇ ರೀತಿಯ ಸ್ಪಂದನೆ ಇಲ್ಲ “
ಹೇಮನಾಥ್ : ಗ್ರಾಮಸ್ಥರು
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…