Featured

ಸಂಪ್ರದಾಯಕ್ಕೆ ಬ್ರೇಕ್ ಹಾಕಲು ಶಿಕ್ಷಣ ಇಲಾಖೆಯ ಮೂಲಕ ಯತ್ನಿಸಿರುವುದು ಅಕ್ಷಮ್ಯ : ರಾಜ್ಯ ಸರ್ಕಾರದ ವಿರುದ್ದ ವೇದವ್ಯಾಸ ಕಾಮತ್ ಆಕ್ರೋಶ – vishwanews24

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕತೆಗೆ ಅವಕಾಶ ಬೇಡ ಎನ್ನುವ ಕಾಂಗ್ರೆಸ್ ಹಿಜಾಬ್ ಗೆ ಬೆಂಬಲ ಕೊಡುವ ಮೂಲಕ ಇಬ್ಬಗೆ ನೀತಿ ಅನುಸರಿಸುತ್ತದೆ  : ವೇದವ್ಯಾಸ ಕಾಮತ್ ಆಕ್ರೋಶ

ಮಂಗಳೂರು: ಇನ್ಮೇನು ಕೆಲವೇ ದಿನಗಳಲ್ಲಿ ಹಬ್ಬ ಹರಿದಿನಗಳು ಆರಂಭಗೊಳ್ಳಲಿದ್ದು ಇಂತಹ ಸಂದರ್ಭದಲ್ಲಿ ಹಿಂದೂ ಸಮಾಜವನ್ನು ಕೆಣಕುವ ದುರುದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದಿನಿಂದ ನಡೆದುಕೊಂಡ ಬಂದ ಸಂಪ್ರದಾಯಕ್ಕೆ ಬ್ರೇಕ್ ಹಾಕಲು ಶಿಕ್ಷಣ ಇಲಾಖೆಯ ಮೂಲಕ ಯತ್ನಿಸಿರುವುದು ಅಕ್ಷಮ್ಯ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯ ಪ್ರಕಾರ ಶಾಲಾ ಮೈದಾನಗಳಲ್ಲಿ ಇನ್ನು ಮೇಲೆ ಇಷ್ಟು ವರ್ಷಗಳಿಂದ ಆಚರಿಸಿಕೊಂಡು ಬಂದಂತಹ ಸಂಪ್ರದಾಯಗಳಾದ ಗಣೇಶೋತ್ಸವ, ಅಷ್ಟಮಿ, ಸರಸ್ವತಿ ಪೂಜೆ ಮುಂತಾದ ಹಬ್ಬಗಳಿಗೆ ಅವಕಾಶ ನಿರಾಕರಣೆ ಮಾಡಲಾಗಿದೆ. ಭಾರತದಲ್ಲಿ ಎಷ್ಟೋ ಶಿಕ್ಷಣ ಸಂಸ್ಥೆಗಳಿಗೆ ಹಿಂದೂ ಸಮಾಜ ದೇವಸ್ಥಾನಗಳ ಜಾಗವನ್ನು ಮಾತ್ರವಲ್ಲದೇ ತಮ್ಮ ವೈಯಕ್ತಿಕ ಜಾಗವನ್ನೂ ಸಹ ದಾನ ಮಾಡಿರುವ ಉದಾಹರಣೆ ಇದೆ.

ಅಂತಹ ಉದಾತ್ತ ಚಿಂತನೆಯ ಧರ್ಮದ ಸಂಸ್ಕೃತಿ ಬಗ್ಗೆ ಜಿಹಾದಿ ಮಾನಸಿಕತೆಯ ಕಾಂಗ್ರೆಸ್ಸಿಗೆ ಅರ್ಥವಾಗುವುದಾದರೂ ಹೇಗೆ? ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕತೆಗೆ ಅವಕಾಶ ಬೇಡ ಎನ್ನುವ ಇದೇ ಕಾಂಗ್ರೆಸ್ ಹಿಜಾಬ್ ಗೆ ಬೆಂಬಲ ಕೊಡುವ ಮೂಲಕ ಇಬ್ಬಗೆ ನೀತಿ ಅನುಸರಿಸುತ್ತದೆ ಎಂದರು.

ಕೂಡಲೇ ದುರುದ್ದೇಶಪೂರಿತವಾದ ಶಿಕ್ಷಣ ಇಲಾಖೆಯ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ಹಿಂದೂ ಸಮಾಜದ ಆಕ್ರೋಶದ ಕಟ್ಟೆಯೊಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಶಾಸಕರು ಎಚ್ಚರಿಸಿದರು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

1 hour ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

4 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

4 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

4 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

4 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

5 hours ago