Featured

ಸಂವಿಧಾನದಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್ – vishwanews24

ಸಂವಿಧಾನದಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

ಹೊಸದಿಲ್ಲಿ: ಲೋಕಸಭಾ ಕಲಾಪದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿ ಇಂಡಿಯಾ ಮೈತ್ರಿಕೂಟದ ಸಂಸದರು ಮುಗಿಬಿದ್ದು ವಾಗ್ದಾಳಿ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿ ಬಿಜೆಪಿ ಸಂಸದರು ದಿಟ್ಟ ತಿರುಗೇಟು ನೀಡುತ್ತಿದ್ದಾರೆ. ಮಂಗಳವಾರ ನಡೆದ ಕಲಾಪದಲ್ಲಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ‘ಸಂವಿಧಾನದಲ್ಲಿ ಎಷ್ಟು ಪುಟಗಳಿವೆ? ಎಷ್ಟು?’ ಎಂದು ವಿಪಕ್ಷಗಳನ್ನು ಪ್ರಶ್ನಿಸಿರುವ ವಿಡಿಯೋ ವೈರಲ್ ಆಗುತ್ತಿದೆ.

 

ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು ಕಿಡಿ ಕಾರಿದ ಠಾಕೂರ್ ‘ಸಂವಿಧಾನದಲ್ಲಿ ಎಷ್ಟು ಪುಟಗಳಿವೆ? ಸಂವಿಧಾನ ಎಷ್ಟು ದಪ್ಪವಾಗಿದೆ ಎಂದು ಹೇಳಬೇಡಿ ಆದರೆ ಪುಟಗಳನ್ನು ತಿಳಿಸಿ. ನೀವು ಅದನ್ನು ಪ್ರತಿದಿನ ಹಿಡಿದುಕೊಂಡು ಬರುತ್ತೀರಿ, ನೀವು ಅದನ್ನು ಕೆಲವೊಮ್ಮೆ ತೆರೆದು ಓದಿದರೆ ಅಡ್ಡಿಲ್ಲ. ನೀವು ಅದನ್ನು ಅಧ್ಯಯನ ಮಾಡುವುದಿಲ್ಲ, ಹಿಡಿದುಕೊಂಡು ಅಲೆದಾಡುತ್ತೀರಿ.ಒಮ್ಮೆ ಜೇಬಿನಿಂದ ತೆಗೆದು ನೋಡಿ’ ಎಂದು ಸವಾಲೆಸೆದರು.

‘ಮೊದಲು ಸಂವಿಧಾನ ರಚಿಸಿದ ವ್ಯಕ್ತಿಯನ್ನು ಅವಮಾನಿಸಿದ್ದರು ಈಗ ಸಂವಿಧಾನ ತೋರಿಸಿದರೂ ಓದುವುದಿಲ್ಲ.ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿರುವುದು ಒಳ್ಳೆಯದು. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಕಳೆದ 20 ವರ್ಷಗಳಿಂದ ಜವಾಬ್ದಾರಿಯಿಲ್ಲದೆಯಿದ್ದ ಅವರು ಈಗ ಜವಾಬ್ದಾರಿಯನ್ನೂ ಹೊರಬೇಕಾಗುತ್ತದೆ. ರಾಹುಲ್ ಗಾಂಧಿಗೆ ಇದೊಂದು ಪರೀಕ್ಷೆ. ಅವರು ಪ್ರತಿಪಕ್ಷಗಳನ್ನು ಒಗ್ಗೂಡಿಸಬಲ್ಲರೇ? ಕಳೆದ ಅಧಿವೇಶನದಲ್ಲಿ ಅವರ ಹಾಜರಾತಿ ಶೇಕಡ 50ಕ್ಕಿಂತ ಕಡಿಮೆ ಇತ್ತು ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago