Featured

ಸಂವಿಧಾನದಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್ – vishwanews24

ಸಂವಿಧಾನದಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

ಹೊಸದಿಲ್ಲಿ: ಲೋಕಸಭಾ ಕಲಾಪದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿ ಇಂಡಿಯಾ ಮೈತ್ರಿಕೂಟದ ಸಂಸದರು ಮುಗಿಬಿದ್ದು ವಾಗ್ದಾಳಿ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿ ಬಿಜೆಪಿ ಸಂಸದರು ದಿಟ್ಟ ತಿರುಗೇಟು ನೀಡುತ್ತಿದ್ದಾರೆ. ಮಂಗಳವಾರ ನಡೆದ ಕಲಾಪದಲ್ಲಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ‘ಸಂವಿಧಾನದಲ್ಲಿ ಎಷ್ಟು ಪುಟಗಳಿವೆ? ಎಷ್ಟು?’ ಎಂದು ವಿಪಕ್ಷಗಳನ್ನು ಪ್ರಶ್ನಿಸಿರುವ ವಿಡಿಯೋ ವೈರಲ್ ಆಗುತ್ತಿದೆ.

 

ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು ಕಿಡಿ ಕಾರಿದ ಠಾಕೂರ್ ‘ಸಂವಿಧಾನದಲ್ಲಿ ಎಷ್ಟು ಪುಟಗಳಿವೆ? ಸಂವಿಧಾನ ಎಷ್ಟು ದಪ್ಪವಾಗಿದೆ ಎಂದು ಹೇಳಬೇಡಿ ಆದರೆ ಪುಟಗಳನ್ನು ತಿಳಿಸಿ. ನೀವು ಅದನ್ನು ಪ್ರತಿದಿನ ಹಿಡಿದುಕೊಂಡು ಬರುತ್ತೀರಿ, ನೀವು ಅದನ್ನು ಕೆಲವೊಮ್ಮೆ ತೆರೆದು ಓದಿದರೆ ಅಡ್ಡಿಲ್ಲ. ನೀವು ಅದನ್ನು ಅಧ್ಯಯನ ಮಾಡುವುದಿಲ್ಲ, ಹಿಡಿದುಕೊಂಡು ಅಲೆದಾಡುತ್ತೀರಿ.ಒಮ್ಮೆ ಜೇಬಿನಿಂದ ತೆಗೆದು ನೋಡಿ’ ಎಂದು ಸವಾಲೆಸೆದರು.

‘ಮೊದಲು ಸಂವಿಧಾನ ರಚಿಸಿದ ವ್ಯಕ್ತಿಯನ್ನು ಅವಮಾನಿಸಿದ್ದರು ಈಗ ಸಂವಿಧಾನ ತೋರಿಸಿದರೂ ಓದುವುದಿಲ್ಲ.ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿರುವುದು ಒಳ್ಳೆಯದು. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಕಳೆದ 20 ವರ್ಷಗಳಿಂದ ಜವಾಬ್ದಾರಿಯಿಲ್ಲದೆಯಿದ್ದ ಅವರು ಈಗ ಜವಾಬ್ದಾರಿಯನ್ನೂ ಹೊರಬೇಕಾಗುತ್ತದೆ. ರಾಹುಲ್ ಗಾಂಧಿಗೆ ಇದೊಂದು ಪರೀಕ್ಷೆ. ಅವರು ಪ್ರತಿಪಕ್ಷಗಳನ್ನು ಒಗ್ಗೂಡಿಸಬಲ್ಲರೇ? ಕಳೆದ ಅಧಿವೇಶನದಲ್ಲಿ ಅವರ ಹಾಜರಾತಿ ಶೇಕಡ 50ಕ್ಕಿಂತ ಕಡಿಮೆ ಇತ್ತು ಎಂದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

4 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

5 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

5 hours ago