ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸುವುದು ಕಾಂಗ್ರೆಸ್ ಜವಾಬ್ದಾರಿ, ಮೋದಿ, ಅಮಿತ್ ಶಾ ಜೋಡಿ ದೇಶವನ್ನು ನಾಶ ಮಾಡುತ್ತಿದೆ, ಬಿಜೆಪಿ ತೊಲಗಿಸುವವರೆಗೂ ಹೋರಾಟ ನಿಲ್ಲಲ್ಲ : ಸಿದ್ದರಾಮಯ್ಯ -Vishwanews24

ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸುವುದು ಕಾಂಗ್ರೆಸ್ ಜವಾಬ್ದಾರಿ..

ಮೋದಿ, ಅಮಿತ್ ಶಾ ಜೋಡಿ ದೇಶವನ್ನು ನಾಶ ಮಾಡುತ್ತಿದೆ..

ಬಿಜೆಪಿ ತೊಲಗಿಸುವವರೆಗೂ ಹೋರಾಟ ನಿಲ್ಲಲ್ಲ : ಸಿದ್ದರಾಮಯ್ಯ

ಬೆಂಗಳೂರುಬೀದರ್​ನ ಶಾಹೀನ್ ಶಾಲೆಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್​ ನಾಯಕರು ಶನಿವಾರ ಮೌರ್ಯ ಸರ್ಕಲ್​ ಬಳಿ ಪ್ರತಿಭಟನೆ ನಡೆಸಿದರು.

 

ಈ ಸಂದರ್ಭ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸುವುದು ಕಾಂಗ್ರೆಸ್ ಜವಾಬ್ದಾರಿ. ಇವರು ಭಾವನಾತ್ಮಕ ವಿಚಾರವನ್ನ ಜನರ ಮುಂದಿಟ್ಟು ಜನರ ದಾರಿ ತಪ್ಪಿಸುತ್ತಿದ್ದಾರೆ. ಕಾನೂನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ನರೇಂದ್ರ ಮೋದಿ, ಅಮಿತ್ ಶಾ ಜೋಡಿ ದೇಶವನ್ನು ನಾಶ ಮಾಡುತ್ತಿದೆ. ಕಳೆದ ಆರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದರು.

ಮೈಸೂರಿನಲ್ಲಿ ಯುವತಿ ಫ್ರೀ ಕಾಶ್ಮೀರ ಎಂದರೆ ಕೇಸ್ ಬೀಳುತ್ತದೆ. ಖಾದರ್ ಮಾತಾಡಿದರೆ ದೇಶದ್ರೋಹದ ಕೇಸ್ ಹಾಕುತ್ತಾರೆ. ಬೀದರ್‌‌ನ ಶಾಹೀನ ಶಾಲೆಯಲ್ಲಿ ಸಿಎಎ ಬಗ್ಗೆ ಮಕ್ಕಳು ನಾಟಕ ಮಾಡಿದ್ದರು. ನಾಟಕ ಮಾಡುವಾಗ ಹಿರಿಯರ ಮಾಹಿತಿ ಕೇಳಿದರೆ ಅವರು ಎಲ್ಲಿಂದ ತರುತ್ತಾರೆ? ಸಮಾಧಿಯಿಂದ ಬಗೆದು ತರಬೇಕಾ ? ಮಾಹಿತಿ ಕೇಳಲು ಬರೋರಿಗೆ ಚಪ್ಪಲಿ ತಗೊಂಡು ಹೊಡಿತೀನಿ, ಎಂದು 11 ವರ್ಷದ ಮಗು ಡೈಲಾಗ್ ಹೇಳುತ್ತದೆ. ಅದು ಮೋದಿ ವಿರುದ್ಧ ಹೇಳಿದ ಮಾತಲ್ಲ. ಮಾಹಿತಿ ಕೇಳಲು ಬರುವವರಿಗೆ ಹೇಳಿದ ಮಾತಾಗಿದೆ ಎಂದು ಹೇಳಿದರು.

ಯಡಿಯೂರಪ್ಪ, ಬೊಮ್ಮಾಯಿಗೆ ಗೊತ್ತಿಲ್ಲದೆ ಪೊಲೀಸರು ಕೇಸ್ ಹಾಕುವುದಿಲ್ಲ. ಪೊಲೀಸರಿಗೆ ನಾನು ಹೇಳೋದು ಒಂದೇ, ಯಡಿಯೂರಪ್ಪ ಶಾಶ್ವತವಾಗಿ ಗೂಟ ಹೊಡ್ಕೊಂಡು ಕೂತಿರಲ್ಲ. ದೆಹಲಿ ಜೆಎನ್​ಯು ವಿವಿಯಲ್ಲಿ ಗೂಂಡಾಗಳು ದಾಳಿ ಮಾಡಿದ್ದರು. ಇಂತಹವರ ಮೇಲೆ ಕೇಸ್ ಹಾಕಿಲ್ಲ. ಇದಕ್ಕಿಂತ ಕ್ರೂರವಾದ ಸರ್ಕಾರ ಮತ್ತೊಂದಿಲ್ಲ. ಬಿಜೆಪಿಯ ನಾಯಕರ ಮಾತನ್ನು ಕೇಳಿ ಕಾನೂನು ವಿರುದ್ಧವಾಗಿ ನಡೆದುಕೊಂಡರೆ ಮುಂದಿನ ದಿನದಲ್ಲಿ ತಕ್ಕ ಪಾಠ ಕಲಿಯಬೇಕಾಗುತ್ತೆ ಎಂದರು.

ಆರ್ ಅಶೋಕ ಮಗನ ಕೇಸ್ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಹ್ಯಾರಿಸ್ ಮಗನನ್ನ ಗೂಂಡಾ ಎಂದು ಪ್ರಚಾರ ಮಾಡಲಾಗುತ್ತಿದೆ. ಬಿಜೆಪಿ ತೊಲಗಿಸುವವರೆಗೂ ಹೋರಾಟ ನಿಲ್ಲಲ್ಲ ಎಂದು ಹೇಳಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

13 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

13 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

13 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

16 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

17 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

17 hours ago