ಬೆಂಗಳೂರು: ಬೀದರ್ನ ಶಾಹೀನ್ ಶಾಲೆಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರು ಶನಿವಾರ ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸುವುದು ಕಾಂಗ್ರೆಸ್ ಜವಾಬ್ದಾರಿ. ಇವರು ಭಾವನಾತ್ಮಕ ವಿಚಾರವನ್ನ ಜನರ ಮುಂದಿಟ್ಟು ಜನರ ದಾರಿ ತಪ್ಪಿಸುತ್ತಿದ್ದಾರೆ. ಕಾನೂನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ನರೇಂದ್ರ ಮೋದಿ, ಅಮಿತ್ ಶಾ ಜೋಡಿ ದೇಶವನ್ನು ನಾಶ ಮಾಡುತ್ತಿದೆ. ಕಳೆದ ಆರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದರು.
ಮೈಸೂರಿನಲ್ಲಿ ಯುವತಿ ಫ್ರೀ ಕಾಶ್ಮೀರ ಎಂದರೆ ಕೇಸ್ ಬೀಳುತ್ತದೆ. ಖಾದರ್ ಮಾತಾಡಿದರೆ ದೇಶದ್ರೋಹದ ಕೇಸ್ ಹಾಕುತ್ತಾರೆ. ಬೀದರ್ನ ಶಾಹೀನ ಶಾಲೆಯಲ್ಲಿ ಸಿಎಎ ಬಗ್ಗೆ ಮಕ್ಕಳು ನಾಟಕ ಮಾಡಿದ್ದರು. ನಾಟಕ ಮಾಡುವಾಗ ಹಿರಿಯರ ಮಾಹಿತಿ ಕೇಳಿದರೆ ಅವರು ಎಲ್ಲಿಂದ ತರುತ್ತಾರೆ? ಸಮಾಧಿಯಿಂದ ಬಗೆದು ತರಬೇಕಾ ? ಮಾಹಿತಿ ಕೇಳಲು ಬರೋರಿಗೆ ಚಪ್ಪಲಿ ತಗೊಂಡು ಹೊಡಿತೀನಿ, ಎಂದು 11 ವರ್ಷದ ಮಗು ಡೈಲಾಗ್ ಹೇಳುತ್ತದೆ. ಅದು ಮೋದಿ ವಿರುದ್ಧ ಹೇಳಿದ ಮಾತಲ್ಲ. ಮಾಹಿತಿ ಕೇಳಲು ಬರುವವರಿಗೆ ಹೇಳಿದ ಮಾತಾಗಿದೆ ಎಂದು ಹೇಳಿದರು.
ಯಡಿಯೂರಪ್ಪ, ಬೊಮ್ಮಾಯಿಗೆ ಗೊತ್ತಿಲ್ಲದೆ ಪೊಲೀಸರು ಕೇಸ್ ಹಾಕುವುದಿಲ್ಲ. ಪೊಲೀಸರಿಗೆ ನಾನು ಹೇಳೋದು ಒಂದೇ, ಯಡಿಯೂರಪ್ಪ ಶಾಶ್ವತವಾಗಿ ಗೂಟ ಹೊಡ್ಕೊಂಡು ಕೂತಿರಲ್ಲ. ದೆಹಲಿ ಜೆಎನ್ಯು ವಿವಿಯಲ್ಲಿ ಗೂಂಡಾಗಳು ದಾಳಿ ಮಾಡಿದ್ದರು. ಇಂತಹವರ ಮೇಲೆ ಕೇಸ್ ಹಾಕಿಲ್ಲ. ಇದಕ್ಕಿಂತ ಕ್ರೂರವಾದ ಸರ್ಕಾರ ಮತ್ತೊಂದಿಲ್ಲ. ಬಿಜೆಪಿಯ ನಾಯಕರ ಮಾತನ್ನು ಕೇಳಿ ಕಾನೂನು ವಿರುದ್ಧವಾಗಿ ನಡೆದುಕೊಂಡರೆ ಮುಂದಿನ ದಿನದಲ್ಲಿ ತಕ್ಕ ಪಾಠ ಕಲಿಯಬೇಕಾಗುತ್ತೆ ಎಂದರು.
ಆರ್ ಅಶೋಕ ಮಗನ ಕೇಸ್ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಹ್ಯಾರಿಸ್ ಮಗನನ್ನ ಗೂಂಡಾ ಎಂದು ಪ್ರಚಾರ ಮಾಡಲಾಗುತ್ತಿದೆ. ಬಿಜೆಪಿ ತೊಲಗಿಸುವವರೆಗೂ ಹೋರಾಟ ನಿಲ್ಲಲ್ಲ ಎಂದು ಹೇಳಿದರು.
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…