ಬೆಂಗಳೂರು: ಸಂವಿಧಾನ ಬದಲಾವಣೆ ಮಾಡಿದರೆ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಅನಂತ್ ಕುಮಾರ್ ಹೆಗಡೆಯವರ ಸಂವಿಧಾನ ತಿದ್ದುಪಡಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಹೇಳಿಕೆ ಮೊದಲ ಬಾರಿಯಲ್ಲ. ಈ ಹಿಂದೆ ಮಂತ್ರಿಯಾಗಿದ್ದಾಗಲೂ ಇದನ್ನೇ ಹೇಳಿದ್ದರು. ಮೋದಿ ಪ್ರಧಾನಿಯಾಗಿದ್ದಾಗಲೇ ಅವರು ಹೇಳಿದ್ದರು. ಮೋದಿಯವರು ಅವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಿಲ್ಲ. ಇದು ಬಿಜೆಪಿಯವರ ಹಿಡನ್ ಅಜೆಂಡಾ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಂವಿಧಾನ ಬದಲಾವಣೆ ಮಾಡಬೇಕು ಎನ್ನುವುದು ಬಿಜೆಪಿಗರ ಹಿಡನ್ ಅಜೆಂಡಾ. ಸಂವಿಧಾನಕ್ಕೆ ಅನಗತ್ಯ ವಿಚಾರಗಳನ್ನ ಸೇರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಸಂವಿಧಾನ ಬದಲಾವಣೆ ಮಾಡಬೇಕು, ಇದಕ್ಕಾಗಿ 2/3 ಬಹುಮತ ಬೇಕು ಎಂದಿದ್ದಾರೆ. ದೇಶ ಉದ್ದಾರಕ್ಕೆ, ಬಡವರ ಉದ್ದಾರಕ್ಕೆ ಅಲ್ಲ. ಸಂವಿಧಾನ ಬದಲಾವಣೆಗಾಗಿ 2/3 ಬಹುಮತ ಕೇಳುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.
ಮನುವಾದವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಎನ್ನುವುದು ಇವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರು ಎಲ್ಲರೂ ಇದನ್ನ ವಿರೋಧ ಮಾಡ್ತಾರೆ. ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ಹೆಗಡೆ ಮೂಲಕ ಇದನ್ನು ಹೇಳಿಸುತ್ತಿದ್ದಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸವಾದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಅನಂತ್ ಕುಮಾರ್ ಹೆಗಡೆ ಹೇಳಿಕೆ ವೈಯಕ್ತಿಕ ಎಂಬ ಬಿಜೆಪಿ ನಿಲುವಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಂತ್ರಿ ಮಂಡಲದಲ್ಲಿದ್ದುಕೊಂಡು ಅದು ವೈಯಕ್ತಿಕ ಹೇಳಿಕೆ ಆಗುತ್ತಾ? ಸರ್ಕಾರ ಎಂದರೆ ಅದು ಪಕ್ಷದ ಹೇಳಿಕೆ. ಈಗ ಸಿಟ್ಟಿಂಗ್ ಎಂಪಿ, ಅವರು ಸ್ಟೇಟ್ಮೆಂಟ್ ಕೊಡ್ತಾರೆ ಅಂದ್ರೆ ಏನು? ಅವರು ಸಿನೀಯರ್ ಸಂಸದರು. ನಮ್ಗೂ ಅದಕ್ಕೂ ಸಂಬಂಧವಿಲ್ಲ ಅಂದ್ರೆ ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…