Featured

ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಪೇಜಾವರ ಮಠಾಧೀಶರ ವಿರುದ್ಧ ಸ್ವಯಂಪ್ರೇರಿತ ಕೇಸು ದಾಖಲಿಸಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹ – vishwanews24

ಉಡುಪಿ: ಪೇಜಾವರ ಮಠಾದೀಶರು ದೇಶದ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆ ಅತ್ಯಂತ ಆಘಾತಕಾರಿ : ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ

ಉಡುಪಿ: ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥರು ದೇಶದ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಪೇಜಾವರ ಮಠಾದೀಶರು ಈ ಹಿಂದೆಯೂ ಅಧ್ಯಾತ್ಮಿಕ ನಾಯಕರಿಗೆ ತಕ್ಕುದಲ್ಲದ ಹೇಳಿಕೆಗಳನ್ನು ನೀಡಿದ್ದಾರೆ. ಈ ಬಾರಿ ಅವರು ನೇರವಾಗಿ ದೇಶದ ಸಂವಿಧಾನವನ್ನೇ ವಿರೋಧಿಸಿ ಮಾತಾಡಿದ್ದಾರೆ. ಇದು ಅತ್ಯಂತ ಕಳವಳಕಾರಿ ಬೆಳವಣಿಗೆಯಾಗಿದೆ. ಇದನ್ನು ಎಲ್ಲರೂ ಒಕ್ಕೊರಳಿನಿಂದ ಖಂಡಿಸಬೇಕು ಹಾಗು ದೇಶ ವಿರೋಧಿ, ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಪೇಜಾವರ ಮಠಾಧೀಶರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಪದಾಧಿಕಾರಿಗಳ ಸಭೆಯು ಆಗ್ರಹಿಸಿದೆ.

‘ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕು’ ಎಂದು ಹೇಳುವ ಮೂಲಕ ಪೇಜಾವರ ಮಠಾದೀಶರು ಏನು ಹೇಳಲು ಬಯಸುತ್ತಿದ್ದಾರೆ ಎಂದು ಸ್ಪಷ್ಟ ಪಡಿಸಬೇಕಾಗಿದೆ. ಈ ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇಡೀ ವಿಶ್ವವೇ ಮಾದರಿ ಎಂದು ಗೌರವಿಸುವಂತಹ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ಈ ದೇಶದ ಎಲ್ಲರೂ ಸಮಾನರು, ಎಲ್ಲರಿಗೂ ಸಮಾನ ಗೌರವ ಹಾಗೂ ಅವಕಾಶಗಳು ಸಿಗಬೇಕು. ಅಲ್ಲದೆ ಪ್ರತಿಯೊಬ್ಬರಿಗೂ ಅವರವರ ನಂಬಿಕೆಗಳನ್ನು ಅನುಸರಿಸಿಕೊಂಡು ಹೋಗಲು ಅವಕಾಶವಿದೆ ಎಂದು ನಮ್ಮ ದೇಶದ ಸಂವಿಧಾನ ಹೇಳುತ್ತದೆ. ಆದರೆ ಪೇಜಾವರ ಮಠಾಧೀಶರಿಗೆ ಎಲ್ಲರಿಗೂ ಗೌರವ ಕೊಡುವ ಸಂವಿಧಾನ ಬೇಡವಾಗಿದೆ. ಸಮಾಜದ ಒಂದು ವರ್ಗವನ್ನು ಮಾತ್ರ ಉಳಿದ ಎಲ್ಲ ವರ್ಗಗಳು ಗೌರವಿಸುವ ಹಾಗೂ ಉಳಿದೆಲ್ಲ ವರ್ಗಗಳು ಗುಲಾಮರಾಗಿಯೇ ಇರುವ ವ್ಯವಸ್ಥೆ ಹಾಗು ಸಂವಿಧಾನ ಬೇಕು ಎಂಬ ಧಾಟಿಯ ತೀರಾ ಅಮಾನವೀಯ ಬೇಡಿಕೆಯನ್ನು ಪೇಜಾವರ ಮಠಾಧೀಶರು ಇಟ್ಟಿರುವುದು ಆಘಾತಕಾರಿಯಾಗಿದೆ.

ಸಮಾನತೆಯ ವಿರೋಧಿಗಳು ಆರಂಭದಿಂದಲೂ ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಈ ದೇಶದ ಸಂವಿಧಾನ ವನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಮನುಷ್ಯ ವಿರೋಧಿ, ಸ್ತ್ರೀ ವಿರೋಧಿ ಆಶಯಗಳಿಂದಲೇ ತುಂಬಿ ತುಳುಕುತ್ತಿರುವ ಮನುಸ್ಮೃತಿಯನ್ನೇ ಈ ದೇಶದ ಸಂವಿಧಾನವಾಗಿ ಮಾಡಬೇಕು ಎಂದು ಬಯಸುತ್ತಾರೆ. ಈಗ ಪೇಜಾವರ ಮಠಾಧೀಶರು ಪರೋಕ್ಷವಾಗಿ ಅದನ್ನೇ ಹೇಳುತ್ತಿರುವ ಹಾಗೆ ಕಾಣುತ್ತಿದೆ. ಆಧ್ಯಾತ್ಮಿಕತೆಯ ಮಾರ್ಗದರ್ಶಕರಾಗಬೇಕಾದ ವ್ಯಕ್ತಿಯೊಬ್ಬರು ಇಂತಹ ಜನವಿರೋಧಿ, ದೇಶವಿರೋಧಿ ಹಾಗು ಸಂವಿಧಾನ ವಿರೋಧಿ ಮಾತುಗಳನ್ನಾಡುವುದು ಅತ್ಯಂತ ಖಂಡನೀಯವಾಗಿದೆ.

ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹಿಸಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

19 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

20 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

21 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

21 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago