Featured

ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಪೇಜಾವರ ಮಠಾಧೀಶರ ವಿರುದ್ಧ ಸ್ವಯಂಪ್ರೇರಿತ ಕೇಸು ದಾಖಲಿಸಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹ – vishwanews24

ಉಡುಪಿ: ಪೇಜಾವರ ಮಠಾದೀಶರು ದೇಶದ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆ ಅತ್ಯಂತ ಆಘಾತಕಾರಿ : ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ

ಉಡುಪಿ: ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥರು ದೇಶದ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಪೇಜಾವರ ಮಠಾದೀಶರು ಈ ಹಿಂದೆಯೂ ಅಧ್ಯಾತ್ಮಿಕ ನಾಯಕರಿಗೆ ತಕ್ಕುದಲ್ಲದ ಹೇಳಿಕೆಗಳನ್ನು ನೀಡಿದ್ದಾರೆ. ಈ ಬಾರಿ ಅವರು ನೇರವಾಗಿ ದೇಶದ ಸಂವಿಧಾನವನ್ನೇ ವಿರೋಧಿಸಿ ಮಾತಾಡಿದ್ದಾರೆ. ಇದು ಅತ್ಯಂತ ಕಳವಳಕಾರಿ ಬೆಳವಣಿಗೆಯಾಗಿದೆ. ಇದನ್ನು ಎಲ್ಲರೂ ಒಕ್ಕೊರಳಿನಿಂದ ಖಂಡಿಸಬೇಕು ಹಾಗು ದೇಶ ವಿರೋಧಿ, ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಪೇಜಾವರ ಮಠಾಧೀಶರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಪದಾಧಿಕಾರಿಗಳ ಸಭೆಯು ಆಗ್ರಹಿಸಿದೆ.

‘ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕು’ ಎಂದು ಹೇಳುವ ಮೂಲಕ ಪೇಜಾವರ ಮಠಾದೀಶರು ಏನು ಹೇಳಲು ಬಯಸುತ್ತಿದ್ದಾರೆ ಎಂದು ಸ್ಪಷ್ಟ ಪಡಿಸಬೇಕಾಗಿದೆ. ಈ ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇಡೀ ವಿಶ್ವವೇ ಮಾದರಿ ಎಂದು ಗೌರವಿಸುವಂತಹ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ಈ ದೇಶದ ಎಲ್ಲರೂ ಸಮಾನರು, ಎಲ್ಲರಿಗೂ ಸಮಾನ ಗೌರವ ಹಾಗೂ ಅವಕಾಶಗಳು ಸಿಗಬೇಕು. ಅಲ್ಲದೆ ಪ್ರತಿಯೊಬ್ಬರಿಗೂ ಅವರವರ ನಂಬಿಕೆಗಳನ್ನು ಅನುಸರಿಸಿಕೊಂಡು ಹೋಗಲು ಅವಕಾಶವಿದೆ ಎಂದು ನಮ್ಮ ದೇಶದ ಸಂವಿಧಾನ ಹೇಳುತ್ತದೆ. ಆದರೆ ಪೇಜಾವರ ಮಠಾಧೀಶರಿಗೆ ಎಲ್ಲರಿಗೂ ಗೌರವ ಕೊಡುವ ಸಂವಿಧಾನ ಬೇಡವಾಗಿದೆ. ಸಮಾಜದ ಒಂದು ವರ್ಗವನ್ನು ಮಾತ್ರ ಉಳಿದ ಎಲ್ಲ ವರ್ಗಗಳು ಗೌರವಿಸುವ ಹಾಗೂ ಉಳಿದೆಲ್ಲ ವರ್ಗಗಳು ಗುಲಾಮರಾಗಿಯೇ ಇರುವ ವ್ಯವಸ್ಥೆ ಹಾಗು ಸಂವಿಧಾನ ಬೇಕು ಎಂಬ ಧಾಟಿಯ ತೀರಾ ಅಮಾನವೀಯ ಬೇಡಿಕೆಯನ್ನು ಪೇಜಾವರ ಮಠಾಧೀಶರು ಇಟ್ಟಿರುವುದು ಆಘಾತಕಾರಿಯಾಗಿದೆ.

ಸಮಾನತೆಯ ವಿರೋಧಿಗಳು ಆರಂಭದಿಂದಲೂ ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಈ ದೇಶದ ಸಂವಿಧಾನ ವನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಮನುಷ್ಯ ವಿರೋಧಿ, ಸ್ತ್ರೀ ವಿರೋಧಿ ಆಶಯಗಳಿಂದಲೇ ತುಂಬಿ ತುಳುಕುತ್ತಿರುವ ಮನುಸ್ಮೃತಿಯನ್ನೇ ಈ ದೇಶದ ಸಂವಿಧಾನವಾಗಿ ಮಾಡಬೇಕು ಎಂದು ಬಯಸುತ್ತಾರೆ. ಈಗ ಪೇಜಾವರ ಮಠಾಧೀಶರು ಪರೋಕ್ಷವಾಗಿ ಅದನ್ನೇ ಹೇಳುತ್ತಿರುವ ಹಾಗೆ ಕಾಣುತ್ತಿದೆ. ಆಧ್ಯಾತ್ಮಿಕತೆಯ ಮಾರ್ಗದರ್ಶಕರಾಗಬೇಕಾದ ವ್ಯಕ್ತಿಯೊಬ್ಬರು ಇಂತಹ ಜನವಿರೋಧಿ, ದೇಶವಿರೋಧಿ ಹಾಗು ಸಂವಿಧಾನ ವಿರೋಧಿ ಮಾತುಗಳನ್ನಾಡುವುದು ಅತ್ಯಂತ ಖಂಡನೀಯವಾಗಿದೆ.

ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹಿಸಿದೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

12 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

16 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

18 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

19 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

20 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

20 hours ago