ಸಂಶೋಧಕನಿಗೆ ಸತ್ಯವೇ ಮುಖ್ಯವಾಗುತ್ತದೆ ಮತ್ತು ಅದಕ್ಕಾಗಿ ಆತ ಜಗತ್ತನ್ನೇ ಎದುರು ಹಾಕಿಕೊಳ್ಳಲು ಸಿದ್ಧವಾಗಿರುತ್ತಾನೆ ಎನ್ನುವ ಮೂಲಕ ರಾಜ್ಯ ಪಠ್ಯಪುಸ್ತಕ ಸಮಿತಿ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ವ್ಯವಸ್ಥೆಯ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿ ರೋಹಿತ್ ಚಕ್ರತೀರ್ಥ ಅವರನ್ನು ಸರ್ಕಾರ ನೇಮಿಸಿತ್ತು. ಬಳಿಕ ಪ್ರಾಥಮಿಕ ಶಾಲೆ ಹಾಗೂ ಮಾಧ್ಯಮಿಕ ಶಾಲೆಗಳ ಪಠ್ಯವನ್ನು ಸಮಿತಿ ಪರಿಷ್ಕರಣೆ ಮಾಡಿತ್ತು. ಇದರಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ, ಬಸವಣ್ಣ ಪಠ್ಯ ಕೈಬಿಡಲಾಗಿದೆ ಎಂಬುದು ಸೇರಿದಂತೆ ಹಲವು ಕಾರಣಕ್ಕಾಗಿ ರೋಹಿತ್ ಚಕ್ರತೀರ್ಥ ಪಠ್ಯಕ್ರಮ ಪರಿಷ್ಕರಣೆ ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.
ನಾಡಿದ ಮಠಾಧೀಶರು, ಬರಹಗಾರರು,ಸಾಹಿತಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಇದಕ್ಕೆಲ್ಲ ಕ್ಯಾರೇ ಎನ್ನದ ಸರ್ಕಾರ ಪಠ್ಯಪುಸ್ತಕ ಮರುಮುದ್ರಣಕ್ಕೆ ನೋ ಎಂದಿದ್ದಲ್ಲದೇ, ಅಗತ್ಯವಿರೋ ಪಠ್ಯಗಳನ್ನು ಪರಿಷ್ಕರಣೆ ಮಾಡೋದಾಗಿ ಘೋಷಿಸಿತ್ತು. ಅಲ್ಲದೇ ವಿವಾದಗಳ ಕಾರಣಕ್ಕೆ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿಯನ್ನೇ ವಿಸರ್ಜಿಸಿತ್ತು.
ಇದಾದ ಬಳಿಕ ಪಿಯು ಪಠ್ಯ ಪರಿಷ್ಕರಣೆಗೂ ರೋಹಿತ್ ಚಕ್ರತೀರ್ಥ ನಾಯಕತ್ವದಲ್ಲೇ ಸಮಿತಿ ರಚನೆಯಾಗಿತ್ತು. ಇದಕ್ಕೂ ತೀವ್ರ ವಿರೋಧ ವ್ಯಕ್ತವಾಗಿದ್ದಲ್ಲದೇ, ರೋಹಿತ್ ಚಕ್ರತೀರ್ಥ ರನ್ನು ಬಂಧಿಸುವಂತೆ ಆಗ್ರಹವೂ ಕೇಳಿಬಂದಿತ್ತು. ಈ ಮಧ್ಯೆ ಅಚ್ಚರಿಯ ಬೆಳವಣಿಗೆಯಲ್ಲಿ ಧಿಡೀರ್ ಶಿಕ್ಷಣ ಸಚಿವರು ರೋಹಿತ್ ಚಕ್ರತೀರ್ಥರನ್ನು ಪಿಯುಸಿ ಪಠ್ಯ ಪುಸ್ತಕ ಪರಿಷ್ಕರಣಯಿಂದ ಕೈಬಿಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಎಲ್ಲ ಬೆಳವಣಿಗೆಯ ಬಳಿಕ ಬರಹಗಾರ ರೋಹಿತ್ ಚಕ್ರತೀರ್ಥ ತಮ್ಮ ಪೇಸ್ ಬುಕ್ ಪೇಜ್ ನಲ್ಲಿ ಸ್ಪಷ್ಟ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಟು ಟೀಕೆಯ ಪೋಸ್ಟ್ ಹಂಚಿಕೊಂಡಿದ್ದಾರೆ.
ಸಂಶೋಧಕನಿಗೆ ಸತ್ಯವೇ ಮುಖ್ಯವಾಗಿದ್ದರೇ, ಆದರೆ ರಾಜಕೀಯ ಪಕ್ಷ ಅಥವಾ ಸರ್ಕಾರಗಳಿಗೆ ಅಂತಿಮವಾಗಿ ಮುಖ್ಯವಾಗುವುದು ಮತಗಳು. ಸತ್ಯ ಮತ್ತು ಮತ ಎಂಬ ಹಾದಿಯ ನಡುವೆ ಸಂಶೋಧಕ ಸತ್ಯವನ್ನು ಆಯ್ದುಕೊಂಡರೇ ರಾಜಕೀಯ ಶಕ್ತಿ ಎರಡನೇಯದನ್ನು ಆಯ್ದುಕೊಳ್ಳುತ್ತದೆ ಎಂದು ನೇರವಾಗಿ ರೋಹಿತ್ ಚಕ್ರತೀರ್ಥ ರಾಜ್ಯ ಸರ್ಕಾರ ಮತದ ಆಸೆಗಾಗಿ ತನ್ನನ್ನು ಸಮಿತಿಯಿಂದ ಕೈಬಿಟ್ಟಿದೆ ಎಂದು ಆರೋಪಿಸಿದ್ದಾರೆ.
ತನಗೆ ಬೇಕಾದಂತೆ ಇತಿಹಾಸ ಬರೆಯುವುದು ಎಷ್ಟು ಅರ್ಥಹೀನವೋ ಅಷ್ಟೇ ಅರ್ಥಹೀನವಾದದ್ದು ಬೇರೆಯವರಿಗೆ ಬೇಕಾದಂತೆ ಇತಿಹಾಸ ಬರೆಯುತ್ತೇನೆ ಎನ್ನುವಂತದ್ದು. ಇತಿಹಾಸಕ್ಕೆ ನಿಷ್ಠವಾಗಿ ಇತಿಹಾಸವನ್ನು ಬರೆಯಬೇಕೆಂಬ ನನ್ನ ತತ್ವ ಇವರೆಡಕ್ಕೂ ಸೇರದ್ದು ಹೀಗಾಗಿ ವಿಸರ್ಜನೆಯಾದ ಮೇಲೂ ಅಲ್ಲಿ ಉಳಿಯದೇ ನನ್ನ ಕೆಲಸಕ್ಕೆ ಮರಳಿದ್ದೇನೆ ಎಂದು ಚಕ್ರತೀರ್ಥ ಪೋಸ್ಟ್ ಹಾಕಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…