Featured

ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡ ಪಾಕ್​​ ಪ್ರಧಾನಿ ಇಮ್ರಾನ್ ಖಾನ್ ; ರಾಜೀನಾಮೆ ಸಾಧ್ಯತೆ ! Vishwanews24

ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡ ಪಾಕ್​​ ಪ್ರಧಾನಿ ಇಮ್ರಾನ್ ಖಾನ್ ; ರಾಜೀನಾಮೆ ಸಾಧ್ಯತೆ !

ಇಸ್ಲಾಮಬಾದ್ : ಪಾಕಿಸ್ತಾನದ ಪ್ರಧಾನಿ ಇಮ್ರಾನ್​​ ಖಾನ್​​​​​​​​​​ ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡಿದ್ದಾರೆ. ಪಾಕಿಸ್ತಾನ್​​ ತೆಹರಿಕ್​​ ಇ ಇನ್ಸಾಫ್​ ಮೈತ್ರಿಕೂಟಕ್ಕೆ ನೀಡಿದ್ದ ಬೆಂಬಲವನ್ನು ಮುತಾಹಿದಾ ಖುವಾಮಿ ಮೂವ್​ಮೆಂಟ್​ ಪಾಕಿಸ್ತಾನ್​​ ವಾಪಸ್​ ಪಡೆದು ಪಾಕಿಸ್ತಾನ್​​ ಪೀಪಲ್​ ಪಾರ್ಟಿ ಜತೆ ಕೈಜೋಡಿಸಿದೆ.

ವಿಶ್ವಾಸಮತ ಯಾಚನೆಗೆ ಮೊದಲೇ ಮುತಾಹಿದಾ ಕ್ವಾಮಿ ಮೂವ್‌ಮೆಂಟ್ ಪಾಕಿಸ್ತಾನ್ (ಎಂಕ್ಯುಎಂ-ಪಿ) ಪಕ್ಷವು ಪಾಕಿಸ್ತಾನದ ತೆಹ್ರೀಕ್-ಇ-ಇನ್ಸಾಫ್‌ನ (ಪಿಟಿಐ) ಮೈತ್ರಿಯನ್ನು ತೊರೆದು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿದೆ ಆ ಹಿನ್ನೆಲೆಯಲ್ಲಿ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಪಿಟಿಐ ಪಕ್ಷವು ಬಹುಮತ ಕಳೆದುಕೊಂಡಿದೆ.ಈ ಕುರಿತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ(ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ ಬುಧವಾರ ಮುಂಜಾನೆ ಟ್ವೀಟ್ ಮಾಡಿದ್ದು, ಪಿಪಿಪಿ ಮತ್ತು ಎಂಕ್ಯೂಎಂ-ಪಿ ಪಕ್ಷಗಳು ಮೈತ್ರಿ ಒಪ್ಪಂದ ಮಾಡಿಕೊಂಡಿವೆ ಎಂದು ತಿಳಿಸಿದ್ದಾರೆ.

ಈ ಬೆಳವಣಿಗೆಗಳ ಬೆನ್ನಲ್ಲೇ ಇಮ್ರಾನ್​​ ಖಾನ್​ ರಾಜೀನಾಮೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ಮಾರ್ಚ್​ 31 ಅಥವಾ ಏಪ್ರಿಲ್​​​​​ 2ರ ನಂತರ ಇಮ್ರಾನ್​​​​ ಖಾನ್​​ ವಿಶ್ವಾಸಮತ ಪರೀಕ್ಷೆ ಎದುರಿಸಬೇಕಿದೆ.ಪ್ರಧಾನಿ ಇಮ್ರಾನ್‌ ಖಾನ್‌ ಅಧಿಕಾರ ಉಳಿಸಿಕೊಳ್ಳಲು 342 ಸದಸ್ಯ ಬಲದ ಸಂಸತ್ತಿನಲ್ಲಿ 172 ಮತಗಳನ್ನು ಪಡೆಯುವುದು ಅನಿವಾರ್ಯವಾಗಿದೆ. ಆಡಳಿತಾರೂಢ ಪಕ್ಷದೊಂದಿಗೆ ಮೈತ್ರಿಯಲ್ಲಿದ್ದ 23 ಸದಸ್ಯರು ಇಮ್ರಾನ್‌ ಅವರಿಗೆ ನೀಡಿದ್ದ ಬೆಂಬಲವನ್ನು ವಾಪಸ್ಸು ಪಡೆದಿದ್ದಾರೆ.ಆಡಳಿತ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್‌ನ ಸುಮಾರು 24 ಸಂಸದರೂ ಬಂಡಾಯ ಘೋಷಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago