Featured

ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡ ಪಾಕ್​​ ಪ್ರಧಾನಿ ಇಮ್ರಾನ್ ಖಾನ್ ; ರಾಜೀನಾಮೆ ಸಾಧ್ಯತೆ ! Vishwanews24

ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡ ಪಾಕ್​​ ಪ್ರಧಾನಿ ಇಮ್ರಾನ್ ಖಾನ್ ; ರಾಜೀನಾಮೆ ಸಾಧ್ಯತೆ !

ಇಸ್ಲಾಮಬಾದ್ : ಪಾಕಿಸ್ತಾನದ ಪ್ರಧಾನಿ ಇಮ್ರಾನ್​​ ಖಾನ್​​​​​​​​​​ ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡಿದ್ದಾರೆ. ಪಾಕಿಸ್ತಾನ್​​ ತೆಹರಿಕ್​​ ಇ ಇನ್ಸಾಫ್​ ಮೈತ್ರಿಕೂಟಕ್ಕೆ ನೀಡಿದ್ದ ಬೆಂಬಲವನ್ನು ಮುತಾಹಿದಾ ಖುವಾಮಿ ಮೂವ್​ಮೆಂಟ್​ ಪಾಕಿಸ್ತಾನ್​​ ವಾಪಸ್​ ಪಡೆದು ಪಾಕಿಸ್ತಾನ್​​ ಪೀಪಲ್​ ಪಾರ್ಟಿ ಜತೆ ಕೈಜೋಡಿಸಿದೆ.

ವಿಶ್ವಾಸಮತ ಯಾಚನೆಗೆ ಮೊದಲೇ ಮುತಾಹಿದಾ ಕ್ವಾಮಿ ಮೂವ್‌ಮೆಂಟ್ ಪಾಕಿಸ್ತಾನ್ (ಎಂಕ್ಯುಎಂ-ಪಿ) ಪಕ್ಷವು ಪಾಕಿಸ್ತಾನದ ತೆಹ್ರೀಕ್-ಇ-ಇನ್ಸಾಫ್‌ನ (ಪಿಟಿಐ) ಮೈತ್ರಿಯನ್ನು ತೊರೆದು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿದೆ ಆ ಹಿನ್ನೆಲೆಯಲ್ಲಿ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಪಿಟಿಐ ಪಕ್ಷವು ಬಹುಮತ ಕಳೆದುಕೊಂಡಿದೆ.ಈ ಕುರಿತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ(ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ ಬುಧವಾರ ಮುಂಜಾನೆ ಟ್ವೀಟ್ ಮಾಡಿದ್ದು, ಪಿಪಿಪಿ ಮತ್ತು ಎಂಕ್ಯೂಎಂ-ಪಿ ಪಕ್ಷಗಳು ಮೈತ್ರಿ ಒಪ್ಪಂದ ಮಾಡಿಕೊಂಡಿವೆ ಎಂದು ತಿಳಿಸಿದ್ದಾರೆ.

ಈ ಬೆಳವಣಿಗೆಗಳ ಬೆನ್ನಲ್ಲೇ ಇಮ್ರಾನ್​​ ಖಾನ್​ ರಾಜೀನಾಮೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ಮಾರ್ಚ್​ 31 ಅಥವಾ ಏಪ್ರಿಲ್​​​​​ 2ರ ನಂತರ ಇಮ್ರಾನ್​​​​ ಖಾನ್​​ ವಿಶ್ವಾಸಮತ ಪರೀಕ್ಷೆ ಎದುರಿಸಬೇಕಿದೆ.ಪ್ರಧಾನಿ ಇಮ್ರಾನ್‌ ಖಾನ್‌ ಅಧಿಕಾರ ಉಳಿಸಿಕೊಳ್ಳಲು 342 ಸದಸ್ಯ ಬಲದ ಸಂಸತ್ತಿನಲ್ಲಿ 172 ಮತಗಳನ್ನು ಪಡೆಯುವುದು ಅನಿವಾರ್ಯವಾಗಿದೆ. ಆಡಳಿತಾರೂಢ ಪಕ್ಷದೊಂದಿಗೆ ಮೈತ್ರಿಯಲ್ಲಿದ್ದ 23 ಸದಸ್ಯರು ಇಮ್ರಾನ್‌ ಅವರಿಗೆ ನೀಡಿದ್ದ ಬೆಂಬಲವನ್ನು ವಾಪಸ್ಸು ಪಡೆದಿದ್ದಾರೆ.ಆಡಳಿತ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್‌ನ ಸುಮಾರು 24 ಸಂಸದರೂ ಬಂಡಾಯ ಘೋಷಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago