ನವದೆಹಲಿ: ಕೃಷಿ ಮಸೂದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದರೂ ಕೂಡ ನಾವು ಪ್ರತಿಭಟನೆಯನ್ನು ಹಿಂಪಡೆಯಲ್ಲ ಎಂದು ಭಾರತ್ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಕೃಷಿ ಮಸೂದೆಯನ್ನು ಹಿಂಪಡೆಯುತ್ತಿದ್ದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೈತರೊಂದಿಗೆ ಪ್ರತಿಭಟನೆಯನ್ನು ಕೈ ಬಿಟ್ಟು ಮನೆಗೆ ತೆರಳುವಂತೆ ಮನವಿ ಮಾಡಿದ್ದಾರೆ. ಈ ಮನವಿ ಬಳಿಕ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ರಾಕೇಶ್ ಟಿಕಾಯತ್, ಕೃಷಿ ಮಸೂದೆಯನ್ನು ಸಂಸತ್ತಿನಲ್ಲಿ ಪಾಸ್ ಮಾಡಲಾಗಿತ್ತು. ಇದೀಗ ಸಂಸತ್ನಲ್ಲಿ ಮತ್ತೆ ಕೃಷಿ ಮಸೂದೆ ಹಿಂಪಡೆಯುವ ಬಗ್ಗೆ ಬಿಲ್ ಪಾಸ್ ಆದ ಬಳಿಕ ನಾವು ಪ್ರತಿಭಟನಾ ಸ್ಥಳದಿಂದ ತೆರಳುತ್ತೇವೆ ಎಂದು ಹೇಳಿದ್ದಾರೆ.
ಇದಲ್ಲದೆ ರೈತರ ಹಲವು ಸಮಸ್ಯೆಗಳು ಬಾಕಿ ಇದೆ. ಕನಿಷ್ಠ ಬೆಂಬಲ ಬೆಲೆ ಬಗ್ಗೆ ನರೇಂದ್ರ ಮೋದಿ ಅವರು ಯಾವುದೇ ಮಾತನಾಡಿಲ್ಲ ಈ ಬಗ್ಗೆ ನಮಗೆ ಸ್ಪಷ್ಟಪಡಿಸಿದ ಬಳಿಕ ಮನೆಗೆ ತೆರಳುವ ಬಗ್ಗೆ ರೈತರೊಂದಿಗೆ ಮಾತುಕತೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸಂಸತ್ನಲ್ಲಿ ಕೃಷಿ ಮಸೂದೆ ಹಿಂಪಡೆದ ಬಿಲ್ ಪಾಸ್ ಆಗುವವರೆಗೆ ನಾವು ಯಾವುದೇ ಹೇಳಿಕೆಗಳನ್ನು ನಂಬುವುದಿಲ್ಲ ಎಂದರು.
ಕೃಷಿ ಮಸೂದೆ ಹಿಂಪಡೆದ ಬಗ್ಗೆ ಮಾಹಿತಿ ಸಿಕ್ಕಂತೆ ನಾನು ನಮ್ಮ ರೈತ ಹೋರಾಟದಲ್ಲಿರುವ ರೈತರೊಂದಿಗೆ ಮಾತುಕತೆ ನಡೆಸುತ್ತೇನೆ ಆ ಬಳಿಕ ಅವರು ಕೊಡುವಂತಹ ಸೂಚನೆಯ ಮೇಲೆ ನಮ್ಮ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…
ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…
ಗ್ಯಾಸ್ ಏಜೆನ್ಸಿಗಳಿಂದ ಎಲ್ಪಿಜಿ ಪೂರೈಕೆ: ನೆಟ್ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್ವರ್ಕ್…
ಕಟಪಾಡಿ: ಮಟ್ಟು ಬೀಚ್ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…