Featured

ಸಂಸದರ ನಿಧಿ ಬಳಕೆಯಲ್ಲಿ ಪ್ರತಾಪ ಸಿಂಹ ನಂ.1..- Vishwanews24

ನವದೆಹಲಿ :  17ನೇ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ ಪ್ರಾರಂಭವಾಗಿರುವಾಗಲೇ 16ನೇ ಲೋಕಸಭೆ ಅವಧಿಯಲ್ಲಿ ರಾಜ್ಯದ ಸಂಸದರು ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಸಂಸದರ ಪ್ರದೇಶಾಭಿವೃದ್ಧಿ ನಿಧಿಯನ್ನು ಪರಿಪೂರ್ಣವಾಗಿ ಬಳಸಲು ವಿಫಲರಾಗಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.

ಕಳೆದ ಐದು ವರ್ಷಗಳ ಅವಧಿಯಲ್ಲಿ ತಮಗೆ ಬಿಡುಗಡೆಯಾದ ಒಟ್ಟಾರೆ ನಿಧಿಯಲ್ಲಿ ರಾಜ್ಯದ ಸಂಸದರು ಇನ್ನೂ 85 ಕೋಟಿ ರು.ಗಳನ್ನು ಬಳಸದೇ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ. ಆದಾಗ್ಯೂ ಮೈಸೂರು ಸಂಸದ ಪ್ರತಾಪ ಸಿಂಹ ಅವರು ಅತಿ ಹೆಚ್ಚು ಅನುದಾನ ಬಳಕೆ ಮಾಡಿದ್ದಾರೆ. ಆದರೆ ಕೇಂದ್ರ ಸಚಿವರೂ ಆಗಿರುವ ವಿಜಯಪುರ ಸಂಸದ ರಮೇಶ್‌ ಜಿಗಜಿಣಗಿ, ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಅತಿ ಕಡಿಮೆ ಬಳಕೆ ಮಾಡಿದ್ದಾರೆ.

ಮೈಸೂರಿನ ಸಂಸದ ಪ್ರತಾಪ್‌ ಸಿಂಹ ತಮಗೆ ಬಿಡುಗಡೆಯಾಗಿರುವ .22.50 ಕೋಟಿಯಲ್ಲಿ ಕೇವಲ .5 ಲಕ್ಷ ಮಾತ್ರ ಬಾಕಿ ಉಳಿಸಿಕೊಂಡಿದ್ದಾರೆ. ಬೆಂಗಳೂರು ಸೆಂಟ್ರಲ… ಸಂಸದ ಪಿ.ಸಿ.ಮೋಹನ್‌ .17.50 ಕೋಟಿಯಲ್ಲಿ ಕೇವಲ .23 ಲಕ್ಷ, ಹಾವೇರಿಯ ಸಂಸದ ಶಿವಕುಮಾರ್‌ ಉದಾಸಿ .17.50 ಕೋಟಿಯಲ್ಲಿ ಕೇವಲ .19 ಲಕ್ಷ ಮಾತ್ರ ಬಾಕಿಯಿರಿಸಿಕೊಂಡಿದ್ದಾರೆ. ಕೋಲಾರ ಸಂಸದ ಕೆ.ಎಚ್‌.ಮುನಿಯಪ್ಪ .17.50 ಕೋಟಿಯಲ್ಲಿ .31 ಲಕ್ಷ ಮಾತ್ರ ಬಳಸಿಲ್ಲ. ತುಮಕೂರು ಸಂಸದ ಮುದ್ದ ಹನುಮೇಗೌಡ .22.50 ಕೋಟಿಯಲ್ಲಿ 61 ಲಕ್ಷ ಮಾತ್ರ ಖರ್ಚು ಮಾಡಲು ಬಾಕಿಯಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಬಿಡುಗಡೆಯಾಗಿರುವ .17.50 ಕೋಟಿಗಳಲ್ಲಿ .85 ಲಕ್ಷ ಬಳಸಿಲ್ಲ.

ಪ್ರತಾಪ್‌ಸಿಂಹ ಶೇ.99.50 ಸಾಧನೆ ಮಾಡಿದ್ದರೆ, ಮುನಿಯುಪ್ಪ ಶೇ.97.27, ಶೋಭಾ ಕರಂದ್ಲಾಜೆ ಶೇ.103.94, ಪಿ.ಸಿ.ಮೋಹನ್‌ ಶೇ.103.12, ಮುದ್ದಹನುಮೇಗೌಡ ಶೇ.102.46 ಮತ್ತು ಶಿವಕುಮಾರ್‌ ಉದಾಸಿ ಶೇ.100.86ರ ಸಾಧನೆ ಮಾಡಿದ್ದಾರೆ. ಸಂಸದರ ನಿಧಿಯನ್ನು ಸರ್ಕಾರ ಬ್ಯಾಂಕ್‌ ಖಾತೆಗೆ ಜಮೆ ಮಾಡುವುದರಿಂದ, ವಿಳಂಬವಾಗಿ ಬಳಸಿದರೆ ಬ್ಯಾಂಕಿನಿಂದ ಬಡ್ಡಿಯೂ ಸಿಗುತ್ತದೆ. ಹೀಗಾಗಿ ಕೆಲವು ಸಂಸದರು ಶೇ.100ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿದ್ದಾರೆ.

ಕಡಿಮೆ ಬಾಕಿ ಉಳಿಸಿಕೊಂಡವರು

ಪ್ರತಾಪ್‌ ಸಿಂಹ    ಮೈಸೂರು    22.50 ಕೋಟಿ    5 ಲಕ್ಷ

ಶಿವಕುಮಾರ್‌ ಉದಾಸಿ    ಹಾವೇರಿ    17.50 ಕೋಟಿ    19 ಲಕ್ಷ

ಕೆ.ಎಚ್‌. ಮುನಿಯಪ್ಪ    ಕೋಲಾರ    17.50 ಕೋಟಿ    31 ಲಕ್ಷ

ಪಿ.ಸಿ. ಮೋಹನ್‌    ಬೆಂ.ಸೆಂಟ್ರಲ್‌    17.50 ಕೋಟಿ    23 ಲಕ್ಷ

ಮುದ್ದಹನುಮೇಗೌಡ    ತುಮಕೂರು    22.50 ಕೋ    ಟಿ    61 ಲಕ್ಷ

ಶೋಭಾ ಕರಂದ್ಲಾಜೆ    17.50 ಕೋಟಿ    85 ಲಕ್ಷ

Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

29 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

40 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

45 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

52 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

19 hours ago