Featured

ಸಂಸದರ ನಿಧಿ ಬಳಕೆಯಲ್ಲಿ ಪ್ರತಾಪ ಸಿಂಹ ನಂ.1..- Vishwanews24

ನವದೆಹಲಿ :  17ನೇ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ ಪ್ರಾರಂಭವಾಗಿರುವಾಗಲೇ 16ನೇ ಲೋಕಸಭೆ ಅವಧಿಯಲ್ಲಿ ರಾಜ್ಯದ ಸಂಸದರು ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಸಂಸದರ ಪ್ರದೇಶಾಭಿವೃದ್ಧಿ ನಿಧಿಯನ್ನು ಪರಿಪೂರ್ಣವಾಗಿ ಬಳಸಲು ವಿಫಲರಾಗಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.

ಕಳೆದ ಐದು ವರ್ಷಗಳ ಅವಧಿಯಲ್ಲಿ ತಮಗೆ ಬಿಡುಗಡೆಯಾದ ಒಟ್ಟಾರೆ ನಿಧಿಯಲ್ಲಿ ರಾಜ್ಯದ ಸಂಸದರು ಇನ್ನೂ 85 ಕೋಟಿ ರು.ಗಳನ್ನು ಬಳಸದೇ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ. ಆದಾಗ್ಯೂ ಮೈಸೂರು ಸಂಸದ ಪ್ರತಾಪ ಸಿಂಹ ಅವರು ಅತಿ ಹೆಚ್ಚು ಅನುದಾನ ಬಳಕೆ ಮಾಡಿದ್ದಾರೆ. ಆದರೆ ಕೇಂದ್ರ ಸಚಿವರೂ ಆಗಿರುವ ವಿಜಯಪುರ ಸಂಸದ ರಮೇಶ್‌ ಜಿಗಜಿಣಗಿ, ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಅತಿ ಕಡಿಮೆ ಬಳಕೆ ಮಾಡಿದ್ದಾರೆ.

ಮೈಸೂರಿನ ಸಂಸದ ಪ್ರತಾಪ್‌ ಸಿಂಹ ತಮಗೆ ಬಿಡುಗಡೆಯಾಗಿರುವ .22.50 ಕೋಟಿಯಲ್ಲಿ ಕೇವಲ .5 ಲಕ್ಷ ಮಾತ್ರ ಬಾಕಿ ಉಳಿಸಿಕೊಂಡಿದ್ದಾರೆ. ಬೆಂಗಳೂರು ಸೆಂಟ್ರಲ… ಸಂಸದ ಪಿ.ಸಿ.ಮೋಹನ್‌ .17.50 ಕೋಟಿಯಲ್ಲಿ ಕೇವಲ .23 ಲಕ್ಷ, ಹಾವೇರಿಯ ಸಂಸದ ಶಿವಕುಮಾರ್‌ ಉದಾಸಿ .17.50 ಕೋಟಿಯಲ್ಲಿ ಕೇವಲ .19 ಲಕ್ಷ ಮಾತ್ರ ಬಾಕಿಯಿರಿಸಿಕೊಂಡಿದ್ದಾರೆ. ಕೋಲಾರ ಸಂಸದ ಕೆ.ಎಚ್‌.ಮುನಿಯಪ್ಪ .17.50 ಕೋಟಿಯಲ್ಲಿ .31 ಲಕ್ಷ ಮಾತ್ರ ಬಳಸಿಲ್ಲ. ತುಮಕೂರು ಸಂಸದ ಮುದ್ದ ಹನುಮೇಗೌಡ .22.50 ಕೋಟಿಯಲ್ಲಿ 61 ಲಕ್ಷ ಮಾತ್ರ ಖರ್ಚು ಮಾಡಲು ಬಾಕಿಯಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಬಿಡುಗಡೆಯಾಗಿರುವ .17.50 ಕೋಟಿಗಳಲ್ಲಿ .85 ಲಕ್ಷ ಬಳಸಿಲ್ಲ.

ಪ್ರತಾಪ್‌ಸಿಂಹ ಶೇ.99.50 ಸಾಧನೆ ಮಾಡಿದ್ದರೆ, ಮುನಿಯುಪ್ಪ ಶೇ.97.27, ಶೋಭಾ ಕರಂದ್ಲಾಜೆ ಶೇ.103.94, ಪಿ.ಸಿ.ಮೋಹನ್‌ ಶೇ.103.12, ಮುದ್ದಹನುಮೇಗೌಡ ಶೇ.102.46 ಮತ್ತು ಶಿವಕುಮಾರ್‌ ಉದಾಸಿ ಶೇ.100.86ರ ಸಾಧನೆ ಮಾಡಿದ್ದಾರೆ. ಸಂಸದರ ನಿಧಿಯನ್ನು ಸರ್ಕಾರ ಬ್ಯಾಂಕ್‌ ಖಾತೆಗೆ ಜಮೆ ಮಾಡುವುದರಿಂದ, ವಿಳಂಬವಾಗಿ ಬಳಸಿದರೆ ಬ್ಯಾಂಕಿನಿಂದ ಬಡ್ಡಿಯೂ ಸಿಗುತ್ತದೆ. ಹೀಗಾಗಿ ಕೆಲವು ಸಂಸದರು ಶೇ.100ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿದ್ದಾರೆ.

ಕಡಿಮೆ ಬಾಕಿ ಉಳಿಸಿಕೊಂಡವರು

ಪ್ರತಾಪ್‌ ಸಿಂಹ    ಮೈಸೂರು    22.50 ಕೋಟಿ    5 ಲಕ್ಷ

ಶಿವಕುಮಾರ್‌ ಉದಾಸಿ    ಹಾವೇರಿ    17.50 ಕೋಟಿ    19 ಲಕ್ಷ

ಕೆ.ಎಚ್‌. ಮುನಿಯಪ್ಪ    ಕೋಲಾರ    17.50 ಕೋಟಿ    31 ಲಕ್ಷ

ಪಿ.ಸಿ. ಮೋಹನ್‌    ಬೆಂ.ಸೆಂಟ್ರಲ್‌    17.50 ಕೋಟಿ    23 ಲಕ್ಷ

ಮುದ್ದಹನುಮೇಗೌಡ    ತುಮಕೂರು    22.50 ಕೋ    ಟಿ    61 ಲಕ್ಷ

ಶೋಭಾ ಕರಂದ್ಲಾಜೆ    17.50 ಕೋಟಿ    85 ಲಕ್ಷ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago