ಕೋಝಿಕ್ಕೋಡ್: ರಾಜ್ಯಸಭಾ ಸಂಸದೆ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಡಾ. ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ (64ವ) ಇಂದು ಶುಕ್ರವಾರ ನಸುಕಿನ ಜಾವ ನಿಧನರಾದರು. ಅವರು ತಿಕ್ಕೋಡಿ ಪೆರುಮಾಳ್ಪುರಂನಲ್ಲಿರುವ ಅವರ ನಿವಾಸದಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಸಿದು ಬಿದ್ದರು. ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಯ ಸಮಯದಲ್ಲಿ ಉಷಾ ಮನೆಯಲ್ಲಿ ಇರಲಿಲ್ಲ. ಸಂಸತ್ತಿನ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಯಲ್ಲಿದ್ದ ಅವರು ಸುದ್ದಿ ತಿಳಿದ ತಕ್ಷಣ ಊರಿಗೆ ತೆರಳಿದ್ದಾರೆ. ಶ್ರೀನಿವಾಸನ್ ಪೊನ್ನಾನಿಯ ಕುಟ್ಟಿಕ್ಕಾಡ್ನಲ್ಲಿರುವ ವೆಂಗಲಿ ಥರಾವದ್ನ ನಾರಾಯಣನ್ ಮತ್ತು ಸರೋಜಿನಿ ದಂಪತಿಯ ಪುತ್ರರಾಗಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ನಿವೃತ್ತ ಡೆಪ್ಯೂಟಿ ಎಸ್ಪಿಯಾಗಿದ್ದರು.
1991 ರಲ್ಲಿ ತಮ್ಮ ದೂರದ ಸಂಬಂಧಿ ಪಿ.ಟಿ. ಉಷಾ ಅವರನ್ನು ವಿವಾಹವಾದರು. ದಂಪತಿಗೆ ಡಾ. ಉಜ್ವಲ್ ವಿಘ್ನೇಶ್ ಎಂಬ ಪುತ್ರನಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಪಿ.ಟಿ. ಉಷಾ ಅವರಿಗೆ ದೂರವಾಣಿ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…