Featured

ಸಂಸದ ಪ್ರತಾಪ್ ಸಿಂಹ ವಿರುದ್ದ ಶಿಲುಬೆಗಳನ್ನು ಹಿಡಿದು ಧರಣಿ ಸತ್ಯಾಗ್ರಹ ನಡೆಸಿದ ಕ್ರಿಶ್ಚಿಯನ್ ಪೊಲಿಟಿಕಲ್ ಲೀಡರ್ಸ್ ಫೋರಂನ ಕಾರ್ಯಕರ್ತರು -Vishwanews24

ಸಂಸದ ಪ್ರತಾಪ್ ಸಿಂಹ ವಿರುದ್ದ ಶಿಲುಬೆಗಳನ್ನು ಹಿಡಿದು ಧರಣಿ ಸತ್ಯಾಗ್ರಹ ನಡೆಸಿದ ಕ್ರಿಶ್ಚಿಯನ್ ಪೊಲಿಟಿಕಲ್ ಲೀಡರ್ಸ್ ಫೋರಂನ ಕಾರ್ಯಕರ್ತರು -Vishwanews24

ಬೆಂಗಳೂರು : ಮೊದಲು ಕುತ್ತಿಗೆಗೆ ಶಿಲುಬೆ ಹಾಕಿಕೊಂಡು ಓಡಾಡುವವರನ್ನು ಗುರುತಿಸಿ ಅವರಿಗೆ ಸೌಲಭ್ಯ ವಿತರಣೆ ಮಾಡುತ್ತಿದ್ದರೆ, ಅದನ್ನು ಕೂಡಲೇ ನಿಲ್ಲಿಸಬೇಕು ಎಂದು ಹೇಳಿಕೆ ನೀಡಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ದ ಕರ್ನಾಟಕ ಕ್ರಿಶ್ಚಿಯನ್ ಪೊಲಿಟಿಕಲ್ ಲೀಡರ್ಸ್ ಫೋರಂ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.

ಸೋಮವಾರ ಇಲ್ಲಿನ ಮೌರ್ಯ ವೃತ್ತದ ಬಳಿಯ ಗಾಂಧಿ ಪ್ರತಿಮೆ ಸಮೀಪ ಶಿಲುಬೆಗಳನ್ನು ಹಿಡಿದು ಧರಣಿ ಸತ್ಯಾಗ್ರಹ ನಡೆಸಿದ ಫೋರಂನ ಕಾರ್ಯಕರ್ತರು, ಸಂಸದ ಪ್ರತಾಪ್ ಸಿಂಹ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಾರ್ಕೂರು: ಆರ್‌ಟಿಐ ಕಾರ್ಯಕರ್ತ ಹಲ್ಲೆ ಪ್ರಕರಣ : ಆರೋಪಗಳನ್ನು ಬಂಧಿಸದಿದ್ದರೆ ತೀವ್ರ ಪ್ರತಿಭಟನೆ : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ -Vishwanews24

ಕುತ್ತಿಗೆಯಲ್ಲಿ ಶಿಲುಬೆ ಹಾಕಿಕೊಂಡು ತಿರುಗಾಡುವವರನ್ನು ಗುರುತಿಸಿ. ಅಂತಹವರಿಗೆ ಸರಕಾರ ನೀಡುವ ಸೌಲಭ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು’ ಎಂದು ಫೆ.24ರಂದು ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಸಂಸದ ಪ್ರತಾಪ ಸಿಂಹ ಕೂಡಲೇ ಕ್ರೈಸ್ತ ಸಮುದಾಯದ ಕ್ಷಮೆ ಕೇಳಬೇಕು. ಇಲ್ಲವಾದರೆ ಅವರು ಪಾಲ್ಗೊಳ್ಳುವ ಎಲ್ಲ ಕಾರ್ಯಕ್ರಮಗಳಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ಮಾತನಾಡಿದ ಫೋರಂನ ಮುಖಂಡ ಅಂತೋಣಿ ವಿಕ್ರಂ, ‘ಸಂಸದ ಪ್ರತಾಪ್ ಸಿಂಹ ಎಲ್ಲ ಸಮುದಾಯದ ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಅವರಿಗೆ ನಮ್ಮ ತೆರಿಗೆ ಹಣದಿಂದ ವೇತನ, ಭತ್ತೆ ನೀಡಲಾಗುತ್ತದೆ. ಆದರೆ, ಜನರ ತೆರಿಗೆ ಹಣದಲ್ಲಿ ಕ್ರೈಸ್ತ ಸಮುದಾಯಕ್ಕೆ ಸರಕಾರ ಸೌಲಭ್ಯಗಳನ್ನು ನೀಡಲಾಗುತ್ತದೆಯೇ ಹೊರತು ಪ್ರತಾಪ್ ಸಿಂಹ ಅವರ ಜೇಬಿನ ಹಣದಿಂದ ಅಲ್ಲ ಎಂಬ ಜ್ಞಾನ ಅವರಿಗೆ ಇರಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್‌ ಅವರೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹಿಂದಿರುಗಬೇಕು : ಎಂ.ವೀರಪ್ಪ ಮೊಯ್ಲಿ -Vishwanews24

‘ಮನಸೋ ಇಚ್ಛೆ, ಬಾಯಿಗೆ ಬಂದಂತೆ ಮಾತನಾಡುವುದು ಬಿಜೆಪಿ ಮುಖಂಡರ ಕೆಟ್ಟ ಚಾಳಿಯಾಗಿದೆ. ಆ ಪಕ್ಷದ ಕೆಲ ಮುಖಂಡರಿಗೆ ಸಮುದಾಯಗಳ ನಿಂದನೆ, ಅವಹೇಳನ ಮಾಡದಿದ್ದರೆ ನಿದ್ದೆ ಬರುವುದಿಲ್ಲ. ಪ್ರತಾಪ್ ಸಿಂಹ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಮರೆತು ಸರ್ವಾಧಿಕಾರಿ ಆಡಳಿತದಲ್ಲಿರುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ಅವರು ಟೀಕಿಸಿದರು.

ದೇಶ ಮತ್ತು ರಾಜ್ಯದ ಅಭ್ಯುದಯಕ್ಕೆ ಕ್ರೈಸ್ತರ ಕೊಡುಗೆ ಅರಿವಿದ್ದರೆ ಸಂಸದ ಪ್ರತಾಪ್ ಸಿಂಹ ಇಂತಹ ಹೇಳಿಕೆಗಳನ್ನು ನೀಡುತ್ತಿರಲಿಲ್ಲ. ಜಾತಿ-ಧರ್ಮದ ಆಧಾರದ ಮೇಲೆ ಮಾತನಾಡುವುದು ಜನಪ್ರತಿನಿಧಿಗೆ ಶೋಭೆಯಲ್ಲ. ಹೀಗಾಗಿ ಕೂಡಲೇ ಸಮುದಾಯದ ಕ್ಷಮೆ ಕೋರಬೇಕು ಎಂದು ವಿಕ್ರಂ ಆಗ್ರಹಿಸಿದರು.

ಡಾ.ರೆ.ಮನೋಹರ ಚಂದ್ರಪ್ರಸಾದ್, ಅನಿಲ್ ಅಂತೋಣಿ, ಕ್ರಿಸ್ಟೋಫರ್ ಸೇರಿ ಹಲವರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಪುತ್ತೂರು: ಮಹಿಳಾ ಎಸ್.ಐ ಮೇಲೆ ಹಲ್ಲೆ ಪ್ರಕರಣ ; ಇಬ್ಬರು ಸಹೋದರಿಯರ ಬಂಧನ -Vishwanews24

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

1 hour ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago