Featured

ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು – Vishwanews24

ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು

ರಾಮನಗರ: ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದ್ದು, ಸಂಸದರು ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಂಸದರು, ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುತ್ತಿದ್ದ ಸ್ನೇಹಜೀವಿ ಹಾಗೂ ನನ್ನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್  ಅವರ ಅಕಾಲಿಕ ನಿಧನದ ಸುದ್ದಿಯಿಂದ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ಇವರು ಶಿವಮೊಗ್ಗ ಜಿಲ್ಲೆ ಹೊಸನಗರ ನಿವಾಸಿಯಾಗಿರುವ ಪ್ರಸನ್ನ ಭಟ್ (25) ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಸಂಜೆ ಈಜಲು ಹೋಗಿದ್ದ ಸಂದರ್ಭದಲ್ಲಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಸನ್ನ ಭಟ್ ಆರು ಜನರ ತಂಡ ಕನಕಪುರದ ಸ್ನೇಹಿತನ ಮನೆಗೆ ಬಂದಿದ್ದರು. ಅಂತೆಯೇ ಸಂಜೆ ಈಜಾಡಲು ಎಂದು ಮಾವತ್ತೂರು ಕೆರೆ ತೆರಳಿದ್ದರು. ಈಜಾಡುವ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಇನ್ ಸ್ಟಾಗ್ರಾಂನಲ್ಲಿ ಮಾವತ್ತೂರು ಕೆರೆಯ ವಿಡಿಯೋ ನೋಡಿದ್ದರು. ಹಾಗಾಗಿ ಅಲ್ಲಿಗೆ ತೆರಳಿದ್ದರು ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಪ್ರಸನ್ನ ಭಟ್ ಅವರಿಗಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ರಾತ್ರಿ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ದಯಾನಂದ ಸಾಗರ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

ಫೋಟೋಗ್ರಫಿ, ವಿಡಿಯೋಗ್ರಫಿಯಲ್ಲಿ ನಿಪುಣರಾಗಿದ್ದರು. ಕೆಲ ವರ್ಷದಿಂದ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೊ ಗ್ರಾಫರ್  ಆಗಿ ಕಾರ್ಯ ನಿರ್ಹಿಸುತ್ತಿದ್ದರು. ಸಂಸದ ರಾಘವೇಂದ್ರ ಅವರ ಸಾಮಾಜಿಕ ಜಾಲತಾಣಗಳು, ಮೀಡಿಯಾ ವಿಭಾಗವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದರು. ಇದೆ ಕಾರಣಕ್ಕೆ ಅವರು ಸಂಸದ ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದವರಿಗೆ ಆಪ್ತರಾಗಿದ್ದರು.

ಕೂಡಲೇ ವಿಷಯ ತಿಳಿದು ಕನಕಪುರ ಗಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ದಯಾನಂದ ಸಾಗರ್ ಆಸ್ಪತ್ರೆಗೆ ರವಾನಿಸಲಗಿತ್ತು. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago