Featured

ಸಂಸದ ಸ್ಥಾನದಿಂದ ರಾಹುಲ್‌ ಗಾಂಧಿ ಅನರ್ಹ – VIshwanews24

ಸಂಸದ ಸ್ಥಾನದಿಂದ ರಾಹುಲ್‌ ಗಾಂಧಿ ಅನರ್ಹ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಕೇರಳದ ವಯನಾಡ್‌ ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ.

ಮಾನನಷ್ಟ ಪ್ರಕರಣ ಸಂಬಂಧ ಸೂರತ್‌ ಕೋರ್ಟ್‌ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್‌ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು.

Vishwa News 24

Recent Posts

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

1 hour ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

1 hour ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

2 hours ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

3 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

24 hours ago