ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡ್ ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ.
ಮಾನನಷ್ಟ ಪ್ರಕರಣ ಸಂಬಂಧ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು.
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…