ಸಂಸ್ಕರಿಸಿದ ಆಹಾರ ಸೇವನೆಯಿಂದಾಗುವ ಅಪಾಯ, ರೈತರ ಸಮಸ್ಯೆಗಳ ಬಗ್ಗೆ ದನಿ ಎತ್ತಿದ ರಾಜ್ಯ ಬಿಜೆಪಿ ಸಂಸದರು – vishwanews24

Featured, ರಾಷ್ಟ್ರ ನ್ಯೂಸ್

ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಬಿ.ವೈ ರಾಘವೇಂದ್ರ ಮನವಿ

ರೈತರಿಗೆ ಪರಿಹಾರ ನೀಡುವಂತೆ ಡಾ.ಮಂಜುನಾಥ್‌ ಆಗ್ರಹ

ಲೋಕಸಭೆ ಶೂನ್ಯವೇಳೆಯಲ್ಲಿ ರಾಜ್ಯ ಬಿಜೆಪಿ ಸಂಸದರ ದನಿ

ನವದೆಹಲಿ: ಸಂಸ್ಕರಿಸಿದ ಆಹಾರಗಳ  ಸೇವನೆಯಿಂದಾಗುವ ಅಪಾಯಗಳು, ರೈತರ ಸಮಸ್ಯೆಗಳು ಹಾಗೂ ರಿಂಗ್‌ ರಸ್ತೆಗೆ ಭೂಮಿ ನೀಡಿದ ರೈತರ ಸಮಸ್ಯೆಗಳ ಬಗ್ಗೆ ಇಂದು ಲೋಕಸಭೆಯ ಶೂನ್ಯ ವೇಳೆಯಲ್ಲಿ ರಾಜ್ಯ ಬಿಜೆಪಿ ಸಂಸದರು ದನಿ ಎತ್ತಿದರು. ಸಂಸದರಾದ ತೇಜಸ್ವಿ ಸೂರ್ಯ , ಬಿ.ವೈ ರಾಘವೇಂದ್ರ ಮತ್ತು ಡಾ.ಸಿ.ಎನ್‌ ಮಂಜುನಾಥ್‌ ಅವರು ವಿವಿಧ ವಿಷಯಗಳ ಕುರಿತು ಮಾತನಾಡಿ, ಸರ್ಕಾರದ ಗಮನ ಸೆಳೆದರು. ಮಕ್ಕಳ ಆರೋಗ್ಯ, ರೈತರ ಪರಿಸ್ಥಿತಿ ಮತ್ತು ಅಭಿವೃದ್ಧಿ ಯೋಜನೆಗಳ ಪರಿಹಾರದಂತಹ ಮಹತ್ವದ ಸಮಸ್ಯೆಗಳನ್ನ ಅವರು ಪ್ರಸ್ತಾಪಿಸಿದರು.

ಮುಸ್ಲಿಮರು ಎಲ್ಲೂ ಈಶ್ವರ ಅಲ್ಹಾ ತೇರೇ ನಾಮ್ ಅಂತ ಹೇಳಿದ್ದನ್ನು ನಾನಂತೂ ಕೇಳಿಲ್ಲ : ಸಿ.ಟಿ ರವಿ  – vishwanews24

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸಂಸ್ಕರಿಸಿದ ಆಹಾರ ಉತ್ಪನ್ನಗಳಿಂದಾಗುವ ಅಪಾಯಗಳ ಬಗ್ಗೆ ಮಾತನಾಡಿ, ಇದರಿಂದ ಮಕ್ಕಳಲ್ಲಿ ಒಬೆಸಿಟಿ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ನೂಡಲ್ಸ್, ಕೂಲ್ ಡ್ರಿಂಕ್ಸ್ ಸೇರಿದಂತೆ ಹತ್ತಾರು ಉತ್ಪನ್ನಗಳನ್ನು ಮಕ್ಕಳು ಹೆಚ್ಚು ಸೇವಿಸುತ್ತಿರುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಸಂಸ್ಕರಿಸಿದ ಆಹಾರ ಉತ್ಪನ್ನಗಳಿಗೆ ಸರಿಯಾದ ವ್ಯಾಖ್ಯಾನ ಮಾಡಬೇಕು ಮತ್ತು ಪ್ಯಾಕೇಜಿಂಗ್ ಮೇಲೆ ಅದನ್ನು ಸ್ಪಷ್ಟವಾಗಿ ನಮೋದಿಸಬೇಕು ಎಂದು ಆಗ್ರಹಿಸಿದರು. ಮಕ್ಕಳಿಗೆ ಇಂತಹ ಉತ್ಪನ್ನಗಳ ಸೇವನೆ ನಿರ್ಬಂಧಿಸುವ ನಿಟ್ಟಿನಲ್ಲಿ ಸರ್ಕಾರ ಜಾಹೀರಾತು ಪ್ರಕಟಿಸಬೇಕು ಎಂದು ಮನವಿ ಮಾಡಿದರು.

ಪಡುಬಿದ್ರಿ :  ಟೈಯರ್ ಸ್ಫೋಟಗೊಂಡು ರಸ್ತೆಗೆ ಮಗುಚಿ ಬಿದ್ದ ಟೆಂಪೋ – vishwanews24

Leave a Reply