ನವದೆಹಲಿ: ಸಂಸ್ಕರಿಸಿದ ಆಹಾರಗಳ ಸೇವನೆಯಿಂದಾಗುವ ಅಪಾಯಗಳು, ರೈತರ ಸಮಸ್ಯೆಗಳು ಹಾಗೂ ರಿಂಗ್ ರಸ್ತೆಗೆ ಭೂಮಿ ನೀಡಿದ ರೈತರ ಸಮಸ್ಯೆಗಳ ಬಗ್ಗೆ ಇಂದು ಲೋಕಸಭೆಯ ಶೂನ್ಯ ವೇಳೆಯಲ್ಲಿ ರಾಜ್ಯ ಬಿಜೆಪಿ ಸಂಸದರು ದನಿ ಎತ್ತಿದರು. ಸಂಸದರಾದ ತೇಜಸ್ವಿ ಸೂರ್ಯ , ಬಿ.ವೈ ರಾಘವೇಂದ್ರ ಮತ್ತು ಡಾ.ಸಿ.ಎನ್ ಮಂಜುನಾಥ್ ಅವರು ವಿವಿಧ ವಿಷಯಗಳ ಕುರಿತು ಮಾತನಾಡಿ, ಸರ್ಕಾರದ ಗಮನ ಸೆಳೆದರು. ಮಕ್ಕಳ ಆರೋಗ್ಯ, ರೈತರ ಪರಿಸ್ಥಿತಿ ಮತ್ತು ಅಭಿವೃದ್ಧಿ ಯೋಜನೆಗಳ ಪರಿಹಾರದಂತಹ ಮಹತ್ವದ ಸಮಸ್ಯೆಗಳನ್ನ ಅವರು ಪ್ರಸ್ತಾಪಿಸಿದರು.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸಂಸ್ಕರಿಸಿದ ಆಹಾರ ಉತ್ಪನ್ನಗಳಿಂದಾಗುವ ಅಪಾಯಗಳ ಬಗ್ಗೆ ಮಾತನಾಡಿ, ಇದರಿಂದ ಮಕ್ಕಳಲ್ಲಿ ಒಬೆಸಿಟಿ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ನೂಡಲ್ಸ್, ಕೂಲ್ ಡ್ರಿಂಕ್ಸ್ ಸೇರಿದಂತೆ ಹತ್ತಾರು ಉತ್ಪನ್ನಗಳನ್ನು ಮಕ್ಕಳು ಹೆಚ್ಚು ಸೇವಿಸುತ್ತಿರುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಸಂಸ್ಕರಿಸಿದ ಆಹಾರ ಉತ್ಪನ್ನಗಳಿಗೆ ಸರಿಯಾದ ವ್ಯಾಖ್ಯಾನ ಮಾಡಬೇಕು ಮತ್ತು ಪ್ಯಾಕೇಜಿಂಗ್ ಮೇಲೆ ಅದನ್ನು ಸ್ಪಷ್ಟವಾಗಿ ನಮೋದಿಸಬೇಕು ಎಂದು ಆಗ್ರಹಿಸಿದರು. ಮಕ್ಕಳಿಗೆ ಇಂತಹ ಉತ್ಪನ್ನಗಳ ಸೇವನೆ ನಿರ್ಬಂಧಿಸುವ ನಿಟ್ಟಿನಲ್ಲಿ ಸರ್ಕಾರ ಜಾಹೀರಾತು ಪ್ರಕಟಿಸಬೇಕು ಎಂದು ಮನವಿ ಮಾಡಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…