Featured

ಸಂಸ್ಕರಿಸಿದ ಆಹಾರ ಸೇವನೆಯಿಂದಾಗುವ ಅಪಾಯ, ರೈತರ ಸಮಸ್ಯೆಗಳ ಬಗ್ಗೆ ದನಿ ಎತ್ತಿದ ರಾಜ್ಯ ಬಿಜೆಪಿ ಸಂಸದರು – vishwanews24

ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಬಿ.ವೈ ರಾಘವೇಂದ್ರ ಮನವಿ

ರೈತರಿಗೆ ಪರಿಹಾರ ನೀಡುವಂತೆ ಡಾ.ಮಂಜುನಾಥ್‌ ಆಗ್ರಹ

ಲೋಕಸಭೆ ಶೂನ್ಯವೇಳೆಯಲ್ಲಿ ರಾಜ್ಯ ಬಿಜೆಪಿ ಸಂಸದರ ದನಿ

ನವದೆಹಲಿ: ಸಂಸ್ಕರಿಸಿದ ಆಹಾರಗಳ  ಸೇವನೆಯಿಂದಾಗುವ ಅಪಾಯಗಳು, ರೈತರ ಸಮಸ್ಯೆಗಳು ಹಾಗೂ ರಿಂಗ್‌ ರಸ್ತೆಗೆ ಭೂಮಿ ನೀಡಿದ ರೈತರ ಸಮಸ್ಯೆಗಳ ಬಗ್ಗೆ ಇಂದು ಲೋಕಸಭೆಯ ಶೂನ್ಯ ವೇಳೆಯಲ್ಲಿ ರಾಜ್ಯ ಬಿಜೆಪಿ ಸಂಸದರು ದನಿ ಎತ್ತಿದರು. ಸಂಸದರಾದ ತೇಜಸ್ವಿ ಸೂರ್ಯ , ಬಿ.ವೈ ರಾಘವೇಂದ್ರ ಮತ್ತು ಡಾ.ಸಿ.ಎನ್‌ ಮಂಜುನಾಥ್‌ ಅವರು ವಿವಿಧ ವಿಷಯಗಳ ಕುರಿತು ಮಾತನಾಡಿ, ಸರ್ಕಾರದ ಗಮನ ಸೆಳೆದರು. ಮಕ್ಕಳ ಆರೋಗ್ಯ, ರೈತರ ಪರಿಸ್ಥಿತಿ ಮತ್ತು ಅಭಿವೃದ್ಧಿ ಯೋಜನೆಗಳ ಪರಿಹಾರದಂತಹ ಮಹತ್ವದ ಸಮಸ್ಯೆಗಳನ್ನ ಅವರು ಪ್ರಸ್ತಾಪಿಸಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸಂಸ್ಕರಿಸಿದ ಆಹಾರ ಉತ್ಪನ್ನಗಳಿಂದಾಗುವ ಅಪಾಯಗಳ ಬಗ್ಗೆ ಮಾತನಾಡಿ, ಇದರಿಂದ ಮಕ್ಕಳಲ್ಲಿ ಒಬೆಸಿಟಿ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ನೂಡಲ್ಸ್, ಕೂಲ್ ಡ್ರಿಂಕ್ಸ್ ಸೇರಿದಂತೆ ಹತ್ತಾರು ಉತ್ಪನ್ನಗಳನ್ನು ಮಕ್ಕಳು ಹೆಚ್ಚು ಸೇವಿಸುತ್ತಿರುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಸಂಸ್ಕರಿಸಿದ ಆಹಾರ ಉತ್ಪನ್ನಗಳಿಗೆ ಸರಿಯಾದ ವ್ಯಾಖ್ಯಾನ ಮಾಡಬೇಕು ಮತ್ತು ಪ್ಯಾಕೇಜಿಂಗ್ ಮೇಲೆ ಅದನ್ನು ಸ್ಪಷ್ಟವಾಗಿ ನಮೋದಿಸಬೇಕು ಎಂದು ಆಗ್ರಹಿಸಿದರು. ಮಕ್ಕಳಿಗೆ ಇಂತಹ ಉತ್ಪನ್ನಗಳ ಸೇವನೆ ನಿರ್ಬಂಧಿಸುವ ನಿಟ್ಟಿನಲ್ಲಿ ಸರ್ಕಾರ ಜಾಹೀರಾತು ಪ್ರಕಟಿಸಬೇಕು ಎಂದು ಮನವಿ ಮಾಡಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

1 hour ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago