Featured

ಸಂಸ್ಕರಿಸಿದ ಆಹಾರ ಸೇವನೆಯಿಂದಾಗುವ ಅಪಾಯ, ರೈತರ ಸಮಸ್ಯೆಗಳ ಬಗ್ಗೆ ದನಿ ಎತ್ತಿದ ರಾಜ್ಯ ಬಿಜೆಪಿ ಸಂಸದರು – vishwanews24

ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಬಿ.ವೈ ರಾಘವೇಂದ್ರ ಮನವಿ

ರೈತರಿಗೆ ಪರಿಹಾರ ನೀಡುವಂತೆ ಡಾ.ಮಂಜುನಾಥ್‌ ಆಗ್ರಹ

ಲೋಕಸಭೆ ಶೂನ್ಯವೇಳೆಯಲ್ಲಿ ರಾಜ್ಯ ಬಿಜೆಪಿ ಸಂಸದರ ದನಿ

ನವದೆಹಲಿ: ಸಂಸ್ಕರಿಸಿದ ಆಹಾರಗಳ  ಸೇವನೆಯಿಂದಾಗುವ ಅಪಾಯಗಳು, ರೈತರ ಸಮಸ್ಯೆಗಳು ಹಾಗೂ ರಿಂಗ್‌ ರಸ್ತೆಗೆ ಭೂಮಿ ನೀಡಿದ ರೈತರ ಸಮಸ್ಯೆಗಳ ಬಗ್ಗೆ ಇಂದು ಲೋಕಸಭೆಯ ಶೂನ್ಯ ವೇಳೆಯಲ್ಲಿ ರಾಜ್ಯ ಬಿಜೆಪಿ ಸಂಸದರು ದನಿ ಎತ್ತಿದರು. ಸಂಸದರಾದ ತೇಜಸ್ವಿ ಸೂರ್ಯ , ಬಿ.ವೈ ರಾಘವೇಂದ್ರ ಮತ್ತು ಡಾ.ಸಿ.ಎನ್‌ ಮಂಜುನಾಥ್‌ ಅವರು ವಿವಿಧ ವಿಷಯಗಳ ಕುರಿತು ಮಾತನಾಡಿ, ಸರ್ಕಾರದ ಗಮನ ಸೆಳೆದರು. ಮಕ್ಕಳ ಆರೋಗ್ಯ, ರೈತರ ಪರಿಸ್ಥಿತಿ ಮತ್ತು ಅಭಿವೃದ್ಧಿ ಯೋಜನೆಗಳ ಪರಿಹಾರದಂತಹ ಮಹತ್ವದ ಸಮಸ್ಯೆಗಳನ್ನ ಅವರು ಪ್ರಸ್ತಾಪಿಸಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸಂಸ್ಕರಿಸಿದ ಆಹಾರ ಉತ್ಪನ್ನಗಳಿಂದಾಗುವ ಅಪಾಯಗಳ ಬಗ್ಗೆ ಮಾತನಾಡಿ, ಇದರಿಂದ ಮಕ್ಕಳಲ್ಲಿ ಒಬೆಸಿಟಿ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ನೂಡಲ್ಸ್, ಕೂಲ್ ಡ್ರಿಂಕ್ಸ್ ಸೇರಿದಂತೆ ಹತ್ತಾರು ಉತ್ಪನ್ನಗಳನ್ನು ಮಕ್ಕಳು ಹೆಚ್ಚು ಸೇವಿಸುತ್ತಿರುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಸಂಸ್ಕರಿಸಿದ ಆಹಾರ ಉತ್ಪನ್ನಗಳಿಗೆ ಸರಿಯಾದ ವ್ಯಾಖ್ಯಾನ ಮಾಡಬೇಕು ಮತ್ತು ಪ್ಯಾಕೇಜಿಂಗ್ ಮೇಲೆ ಅದನ್ನು ಸ್ಪಷ್ಟವಾಗಿ ನಮೋದಿಸಬೇಕು ಎಂದು ಆಗ್ರಹಿಸಿದರು. ಮಕ್ಕಳಿಗೆ ಇಂತಹ ಉತ್ಪನ್ನಗಳ ಸೇವನೆ ನಿರ್ಬಂಧಿಸುವ ನಿಟ್ಟಿನಲ್ಲಿ ಸರ್ಕಾರ ಜಾಹೀರಾತು ಪ್ರಕಟಿಸಬೇಕು ಎಂದು ಮನವಿ ಮಾಡಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago