ಬೆಂಗಳೂರು: ದೈವಾರಾಧನೆ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದರು, ಇದು ನಿಜವಲ್ಲ ಎಂದು ಚೇತನ್ ಹೇಳಿದ್ದರು. ಈ ವಿಚಾರದ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಹೀಗಿರುವಾಗಲೇ ರಿಷಬ್ ಶೆಟ್ಟಿ ಅವರು ಪರೋಕ್ಷವಾಗಿ ಚೇತನ್ಗೆ ತಿರುಗೇಟು ನೀಡಿದ್ದಾರೆ. ‘ಈ ವಿಚಾರದಲ್ಲಿ ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ’ ಎಂಬ ಮಾತನ್ನು ರಿಷಬ್ ಹೇಳಿದ್ದಾರೆ.
‘ನಾನು ಈ ಸಿನಿಮಾ ಮಾಡಬೇಕಾದ್ರೆ ಮೂಲ ನಿವಾಸಿಗಳು ನನ್ನ ಜೊತೆಯಲ್ಲಿದ್ದರು. ಚಿಕ್ಕಂದಿನಿಂದಲೇ ನಾವು ದೈವ ನಂಬಿದ್ದೇವೆ. ಇಂಥದ್ದೊಂದು ಕತೆ ಹೇಳೋಕೆ ಹೋಗ್ತಿದ್ದೀನಿ ಎಂದಾಗ ಇಲ್ಲಿನ ಮೂಲ ಜನರಿಗೆ ನೋವಾಗಬಾರದು ಎಂದು ನಾನು ಬಯಸಿದ್ದೆ. ಎಲ್ಲೂ ದೈವ ದೇವಾದಿಗಳಿಗೆ, ಇದನ್ನು ಆರಾಧಿಸುವ ಜನರಿಗೆ ನೋವಾಗಬಾರದು, ಎಲ್ಲೂ ಕೂಡ ತಪ್ಪಾಗಬಾರದು ಎಂಬುದು ನನ್ನ ಉದ್ದೇಶ ಆಗಿತ್ತು’ ಎಂದಿದ್ದಾರೆ ರಿಷಬ್.
‘ಇದಕ್ಕೆ ಬೇಕಾದ ಎಲ್ಲಾ ಮುಂಜಾಗ್ರತೆಗಳನ್ನು ನಾನು ತೆಗೆದುಕೊಂಡಿದ್ದೆ. ನನ್ನ ಜೊತೆಯಲ್ಲೇ ಅವರನ್ನು ಇರಿಸಿಕೊಂಡು ಪ್ರತಿಯೊಂದು ಶಾಟ್ ತೆಗೆದಿದ್ದೇವೆ. ದೈವಾರಾಧನೆಗೆ ಸಂಬಂಧಿಸಿದ ಪ್ರತಿ ದೃಶ್ಯಗಳನ್ನು ಅಲ್ಲಿನ ಜನರಿಗೆ ತೋರಿಸುತ್ತಿದ್ದೆವು. ಈ ವಿಚಾರದಲ್ಲಿ ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ. ಆ ಬಗ್ಗೆ ನೋ ಕಾಮೆಂಟ್ಸ್. ಅದಕ್ಕೆ ಸಂಬಂಧ ಪಟ್ಟವರು ಮಾತನಾಡುತ್ತಾರೆ. ಅದಕ್ಕೆಲ್ಲಾ ನಾವೇಕೆ ತಲೆ ಕೆಡಿಸಿಕೊಳ್ಳಬೇಕು’ ಎಂದಿದ್ದಾರೆ ರಿಷಬ್.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…