ಸುಬ್ರಹ್ಮಣ್ಯ: ಮಂಗಳೂರು- ಬೆಂಗಳೂರು ರೈಲು ಮಾರ್ಗದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೇ ವಿದ್ಯುದ್ದೀಕರಣ ಕಾರ್ಯವು ನಡೆಯುತ್ತಿರುವ ಕಾರಣ, ನೈಋತ್ಯ ರೈಲ್ವೇ ನ. 2ರಿಂದ ಡಿ. 15ರ ವರೆಗೆ ಪ್ರತೀದಿನ ನಾಲ್ಕು ಗಂಟೆಗಳ ಕಾಲ ಲೈನ್ ಬ್ಲಾಕ್ ತೆಗೆದುಕೊಳ್ಳಲಿದ್ದು, ಈ ಕಾರಣದಿಂದಾಗಿ ಕೆಲವು ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿಯನ್ನು ವಿಸ್ತರಿಸಲಾಗಿದೆ.
ರೈಲು ಸಂಖ್ಯೆ 16539 ಯಶವಂತಪುರ- ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಮೊದಲು ನ. 1ರ ರವರೆಗೆ ರದ್ದುಗೊಂಡಿತ್ತು. ಈಗ ನ. 8ರಿಂದ ಡಿ. 13ರ ವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಮೊದಲು ನ. 2ರ ವರೆಗೆ ರದ್ದುಗೊಂಡಿತ್ತು, ಈಗ ನ. 9ರಿಂದ ಡಿ. 14ರ ವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ಎಕ್ಸ್ಪ್ರೆಸ್ ಮೊದಲು ಅ. 30ರ ವರೆಗೆ ರದ್ದುಗೊಂಡಿತ್ತು. ಈಗ ನ. 2ರಿಂದ ಡಿ. 14ರ ವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್- ಯಶವಂತಪುರ ಎಕ್ಸ್ಪ್ರೆಸ್ ಮೊದಲು ಅ. 30 ರವರೆಗೆ ರದ್ದುಗೊಂಡಿತ್ತು. ಈಗ ನ. 3ರಿಂದ ಡಿ. 15ರ ವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ ಎಕ್ಸ್ಪ್ರೆಸ್ ಮೊದಲು ಅ. 31ರ ವರೆಗೆ ರದ್ದುಗೊಂಡಿತ್ತು. ಈಗ ನ. 3ರಿಂದ ಡಿ. 15ರ ವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ ಎಕ್ಸ್ಪ್ರೆಸ್ ಮೊದಲು ನ. 1ರ ವರೆಗೆ ರದ್ದುಗೊಂಡಿತ್ತು. ಈಗ ನ. 4ರಿಂದ ಡಿ. 16ರ ವರೆಗೆ ರದ್ದುಗೊಳ್ಳಲಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…