Featured

ಸಕಾಲ ಸೇವೆಗಳ ಅಡಿ ಅರ್ಜಿ ವಿಲೇವಾರಿಯಲ್ಲಿ ಉಡುಪಿ ಜಲ್ಲೆ ಪ್ರಥಮ ಸ್ಥಾನ -Vishwanews24

ಸಕಾಲ ಸೇವೆಗಳ ಅಡಿ ಅರ್ಜಿ ವಿಲೇವಾರಿಯಲ್ಲಿ ಉಡುಪಿ ಜಲ್ಲೆ ಪ್ರಥಮ ಸ್ಥಾನ -Vishwanews24

ಉಡುಪಿ, : ಸಕಾಲ ಯೋಜನೆಯಡಿಯ ವಿಳಂಬ ರಹಿತ ಅರ್ಜಿ ವಿಲೇವಾರಿಯಲ್ಲಿ ಉಡುಪಿ ಜಿಲ್ಲೆಯು ಆಗಸ್ಟ್ ಮಾಹೆಯಲ್ಲಿಯೇ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಮುಂದಿನ ದಿನಗಳಲ್ಲಿಯೂ ಉತ್ತಮವಾಗಿ ಕಾರ್ಯ ನಿರ್ವಹಿಸುವುದರೊಂದಿಗೆ ಪ್ರಥಮ ಸ್ಥಾನ ಹೊಂದಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅಧಿಕಾರಿಗಳಿಗೆ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಕಾಲ ಯೋಜನೆಯ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸಕಾಲ ಯೋಜನೆಯು ನಾಗರಿಕರಿಗೆ ಸರಕಾರದ ಸೇವೆಯನ್ನು ನಿಗದಿತ ಕಾಲಾವಧಿಯಲ್ಲಿ ಒದಗಿಸುವ ಪ್ರಮುಖ ಯೋಜನೆಯಲ್ಲಿ ಒಂದಾಗಿದ್ದು, ಸಾರ್ವಜನಿಕರು ಸರಕಾರದ 101 ವಿವಿಧ ಇಲಾಖೆಗಳಲ್ಲಿ 1,112 ಸೇವೆಗಳಿಗೆ ನಿಗದಿತ ಪ್ರಮಾಣದಲ್ಲಿ ಅರ್ಜಿ ಸಲ್ಲಿಸಿ, ಸೇವೆಯ ಪ್ರಯೋಜನೆವನ್ನು ಪಡೆದುಕೊಳ್ಳ ಬಹುದಾಗಿದೆ ಎಂದರು.

ಸಾರ್ವಜನಿಕರು ಸಕಾಲದಡಿಯಲ್ಲಿ ನಿಗದಿತ ಅರ್ಜಿಯನ್ನು ಸಲ್ಲಿಸಿದಾಗ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಿದಾಗ ಶೀಘ್ರದಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ. ಎಂದ ಅವರು ಅಧಿಕಾರಿಗಳು ನಿಗದಿತ ಕಾಲಾವಧಿಯಲ್ಲಿ ಅವುಗಳನ್ನು ತಡವಿಲ್ಲದೇ ವಿಲೇವಾರಿ ಮಾಡಬೇಕು ಎಂದರು.

ವಿವಿಧ ಸೇವೆಗಳನ್ನು ಪಡೆಯಲು ನಾಗರಿಕರು ಸಲ್ಲಿಸುವ ಅರ್ಜಿಗಳ ತಿರಸ್ಕಾರದ ಪ್ರಮಾಣವನ್ನು ಆದಷ್ಟು ಕಡಿಮೆ ಮಾಡಬೇಕು. ಸಕಾರಣವಿಲ್ಲದೆ ಯಾವುದೇ ಅರ್ಜಿಗಳನ್ನು ತಿರಸ್ಕಾರ ಮಾಡಬಾರದು ಒಂದೊಮ್ಮೆ ತಿರಸ್ಕಾರ ಮಾಡುವಾಗ ಸರಿಯಾದ ಕಾರಣವನ್ನು ನೀಡಬೇಕು ಎಂದರು.

ಪ್ರಸ್ತುತ ಮಾಹೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಸರ್ಕಾರದ ಅಡಿಯಲ್ಲಿ 59,237 ಅರ್ಜಿಗಳು ಬಂದಿದ್ದು ಅವುಗಳಲ್ಲಿ 52,511 ಅರ್ಜಿಗಳು ಪುರಸ್ಕೃತಗೊಮಡು 1,094 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದರು.

ಸಕಾಲ ಯೋಜನೆಯು 2011 ರಿಂದ ರಾಜ್ಯದಲ್ಲಿ ಜಾರಿಗೆ ಬಂದಿದ್ದು ಈವರೆಗೆ 6.53 ಕೋಟಿ ಅರ್ಜಿಗಳು ಬಂದಿದ್ದು ಅವುಗಳಲ್ಲಿ 5.98 ಕೋಟಿಯಷ್ಟು ಪುರಸ್ಕೃತಗೊಂಡು 45.02 ಲಕ್ಷ ತಿರಸ್ಕೃತಗೊಂಡು 6.43 ಕೋಟಿ ವಿಲೇವಾರಿಯಾಗಿದೆ ಎಂದರು. ಈವರೆಗೆ ಜಿಲ್ಲೆಯಲ್ಲಿ 14.15 ಲಕ್ಷ ಅರ್ಜಿಗಳು ಬಂದಿದ್ದು, ಅವುಗಳಲ್ಲಿ 13.58 ರಷ್ಟು ಅರ್ಜಿಗಳು ಪುರಸ್ಕೃತಗೊಂಡು 42,194 ಅರ್ಜಿಗಳು ವಿಲೇವಾರಿಗೊಂಡಿವೆ ಎಂದರು.

ಅಧಿಕಾರಿಗಳು ಮುತುವರ್ಜಿ ವಹಿಸಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ವಿಲೇವಾರಿ ವಿಳಂಬ ಮಾಡಿದವರಿಗೆ ದಂಡ ವಿಧಿಸುವ ಅವಕಾಶವಿದೆ, ಅಲ್ಲದೇ ವಿಳಂಬವಾದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದರು.

ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಕಾಲ ಯೋಜನೆಯ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

3 hours ago

ಉಡುಪಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ – vishwanews24

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ ಉಡುಪಿ: ಉಡುಪಿ…

3 hours ago

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ – vishwanews24

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್‌ ಸಾಗಿಸುತ್ತಿದ್ದ…

3 hours ago

ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ – vishwanews24

ವೆನ್‍ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…

3 hours ago

ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ :  ಮುದರಂಗಡಿ ಗ್ರಾಮ ಪಂಚಾಯತ್…

4 hours ago