ಬೆಂಗಳೂರು: ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ದಿನದಿಂದ ದಿನಕ್ಕೆ ಮತ್ತಷ್ಟು ಜೋರಾಗುತ್ತಿದೆ. ಸಚಿನ್ ಪಾಂಚಾಳ್ ಸಾವಿಗೂ ನನಗೂ ಯಾವುದೇ ಸಂಬಂಧ ಇಲ್ಲವೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇದೀಗ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರದ್ದು ಎನ್ನಲಾದ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ನಿನ್ನೆ ನನ್ನ ಹಳೆಯ ಸ್ಪೀಚ್ ಅಪ್ಲೋಡ್ ಮಾಡಿದ್ದಾರೆ. ಕಲಬುರಗಿ ರಿಪಬ್ಲಿಕ್ ಮಾಡಿದವರು ಯಾರು? ನಿಮ್ಮ ಅಭ್ಯರ್ಥಿ ನಮ್ಮ ಕುಟುಂಬದ ವಿರುದ್ಧ ಸಂಚು ಮಾಡುತ್ತಾನೆ. ನಮ್ಮ ತಂದೆ, ತಾಯಿ, ಕುಟುಂಬ ಕೊಲ್ತೀನಿ ಅಂತಾ ಆತ ಹೇಳುತ್ತಾನೆ. ಅದರ ಬಗ್ಗೆ ನಾವು ದೂರು ಕೊಟ್ಟಾಗ ನಿಮ್ಮದೇ ಸರ್ಕಾರ ಇತ್ತು. ಅಂಥವನಿಗೆ ನೀವು ಅಧಿಕೃತ ಅಭ್ಯರ್ಥಿ ಮಾಡಿ ಟಿಕೆಟ್ ಕೊಟ್ಟಿದ್ದೀರಿ ಎಂದು ವಾಗ್ದಾಳಿ ಮಾಡಿದ್ದಾರೆ.
ನನ್ನ ರಾಜೀನಾಮೆ ಕೊಡಿಸಲು ಖರ್ಗೆಗೆ ಕಪ್ಪು ಚುಕ್ಕೆ ತರಲು ಯತ್ನಿಸುತ್ತಿದ್ದಾರೆ. ಬಿಜೆಪಿಗರು ಬಹಳ ಬಾಲಿಶವಾಗಿ ಮಕ್ಕಳ ರೀತಿ ಹೇಳಿಕೆ ನೀಡುತ್ತಿದ್ದಾರೆ. ಕಳೆದ 4-5 ದಿನಗಳಿಂದ ಬಿಜೆಪಿ ಬಹಳಷ್ಟು ಪ್ರಯತ್ನ ಮಾಡಿದ್ದಾರೆ. ವಿಜಯೇಂದ್ರ, ನಾರಾಯಣಸ್ವಾಮಿ ಯಾಕೋ ಹೋಂ ವರ್ಕ್ ಸರಿಯಾಗಿ ಮಾಡುತ್ತಿಲ್ಲ. ನಾರಾಯಣಸ್ವಾಮಿಗೆ ವೈಯಕ್ತಿಕ ಟೀಕೆ ಮಾಡಲು ಸ್ಥಾನ ಕೊಟ್ಟಂತಿದೆ. ಕಲಬುರಗಿ ರಿಪಬ್ಲಿಕ್ ಅಂತಾ ನಾರಾಯಣಸ್ವಾಮಿ ಆರೋಪ ಮಾಡಿದ್ದಾರೆ ಎಂದರು.
ಸಂತೋಷ್ ಬರೆದ ಡೆತ್ನೋಟ್ನಲ್ಲಿ ಈಶ್ವರಪ್ಪ ಹೆಸರು ಸ್ಪಷ್ಟವಾಗಿತ್ತು. ನನ್ನ ಸಾವಿಗೆ ನೇರ ಕಾರಣ ಈಶ್ವರಪ್ಪ ಅಂತಾ ಡೆತ್ನೋಟ್ ಬರೆದಿದ್ದರು. ಆದರೆ ಸಚಿನ್ ಪ್ರಕರಣದಲ್ಲಿ ನನ್ನ ಹೆಸರೇ ಬರೆದಿಲ್ಲ. ಸಂತೋಷ್ ಮನೆಗೆ ಒಮ್ಮೆಯಾದರೂ ವಿಜಯೇಂದ್ರ ಹೋಗಿದ್ದಾರಾ? ಸಚಿನ್ ಮನೆಗೆ ವಿಜಯೇಂದ್ರ 5 ಲಕ್ಷ ರೂ. ತೆಗೆದುಕೊಂಡು ಹೋಗಿದ್ದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಗೆ ಯಾಕೆ ಹೋಗಲಿಲ್ಲ? ಯಾರೋ ಬರೆದಿದ್ದನ್ನು ತಿರುಚಿ ಮಗುಚಿ ಹಾಕಿದ್ರಲ್ಲ ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿದ್ದಾರೆ. ರಾಜೀವ್ ವಿರುದ್ಧ ಮಾನನಷ್ಟ ಕೇಸ್ ಹಾಕಿದ್ದೆ, ಈವರೆಗೂ ಉತ್ತರ ಬಂದಿಲ್ಲ. ಬಿಜೆಪಿಯವರು ಸುಳ್ಳಿನ ಮಹಾಶೂರರು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಮಾಡಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…