ಬೆಂಗಳೂರು: ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ದಿನದಿಂದ ದಿನಕ್ಕೆ ಮತ್ತಷ್ಟು ಜೋರಾಗುತ್ತಿದೆ. ಸಚಿನ್ ಪಾಂಚಾಳ್ ಸಾವಿಗೂ ನನಗೂ ಯಾವುದೇ ಸಂಬಂಧ ಇಲ್ಲವೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇದೀಗ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರದ್ದು ಎನ್ನಲಾದ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ನಿನ್ನೆ ನನ್ನ ಹಳೆಯ ಸ್ಪೀಚ್ ಅಪ್ಲೋಡ್ ಮಾಡಿದ್ದಾರೆ. ಕಲಬುರಗಿ ರಿಪಬ್ಲಿಕ್ ಮಾಡಿದವರು ಯಾರು? ನಿಮ್ಮ ಅಭ್ಯರ್ಥಿ ನಮ್ಮ ಕುಟುಂಬದ ವಿರುದ್ಧ ಸಂಚು ಮಾಡುತ್ತಾನೆ. ನಮ್ಮ ತಂದೆ, ತಾಯಿ, ಕುಟುಂಬ ಕೊಲ್ತೀನಿ ಅಂತಾ ಆತ ಹೇಳುತ್ತಾನೆ. ಅದರ ಬಗ್ಗೆ ನಾವು ದೂರು ಕೊಟ್ಟಾಗ ನಿಮ್ಮದೇ ಸರ್ಕಾರ ಇತ್ತು. ಅಂಥವನಿಗೆ ನೀವು ಅಧಿಕೃತ ಅಭ್ಯರ್ಥಿ ಮಾಡಿ ಟಿಕೆಟ್ ಕೊಟ್ಟಿದ್ದೀರಿ ಎಂದು ವಾಗ್ದಾಳಿ ಮಾಡಿದ್ದಾರೆ.
ನನ್ನ ರಾಜೀನಾಮೆ ಕೊಡಿಸಲು ಖರ್ಗೆಗೆ ಕಪ್ಪು ಚುಕ್ಕೆ ತರಲು ಯತ್ನಿಸುತ್ತಿದ್ದಾರೆ. ಬಿಜೆಪಿಗರು ಬಹಳ ಬಾಲಿಶವಾಗಿ ಮಕ್ಕಳ ರೀತಿ ಹೇಳಿಕೆ ನೀಡುತ್ತಿದ್ದಾರೆ. ಕಳೆದ 4-5 ದಿನಗಳಿಂದ ಬಿಜೆಪಿ ಬಹಳಷ್ಟು ಪ್ರಯತ್ನ ಮಾಡಿದ್ದಾರೆ. ವಿಜಯೇಂದ್ರ, ನಾರಾಯಣಸ್ವಾಮಿ ಯಾಕೋ ಹೋಂ ವರ್ಕ್ ಸರಿಯಾಗಿ ಮಾಡುತ್ತಿಲ್ಲ. ನಾರಾಯಣಸ್ವಾಮಿಗೆ ವೈಯಕ್ತಿಕ ಟೀಕೆ ಮಾಡಲು ಸ್ಥಾನ ಕೊಟ್ಟಂತಿದೆ. ಕಲಬುರಗಿ ರಿಪಬ್ಲಿಕ್ ಅಂತಾ ನಾರಾಯಣಸ್ವಾಮಿ ಆರೋಪ ಮಾಡಿದ್ದಾರೆ ಎಂದರು.
ಸಂತೋಷ್ ಬರೆದ ಡೆತ್ನೋಟ್ನಲ್ಲಿ ಈಶ್ವರಪ್ಪ ಹೆಸರು ಸ್ಪಷ್ಟವಾಗಿತ್ತು. ನನ್ನ ಸಾವಿಗೆ ನೇರ ಕಾರಣ ಈಶ್ವರಪ್ಪ ಅಂತಾ ಡೆತ್ನೋಟ್ ಬರೆದಿದ್ದರು. ಆದರೆ ಸಚಿನ್ ಪ್ರಕರಣದಲ್ಲಿ ನನ್ನ ಹೆಸರೇ ಬರೆದಿಲ್ಲ. ಸಂತೋಷ್ ಮನೆಗೆ ಒಮ್ಮೆಯಾದರೂ ವಿಜಯೇಂದ್ರ ಹೋಗಿದ್ದಾರಾ? ಸಚಿನ್ ಮನೆಗೆ ವಿಜಯೇಂದ್ರ 5 ಲಕ್ಷ ರೂ. ತೆಗೆದುಕೊಂಡು ಹೋಗಿದ್ದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಗೆ ಯಾಕೆ ಹೋಗಲಿಲ್ಲ? ಯಾರೋ ಬರೆದಿದ್ದನ್ನು ತಿರುಚಿ ಮಗುಚಿ ಹಾಕಿದ್ರಲ್ಲ ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿದ್ದಾರೆ. ರಾಜೀವ್ ವಿರುದ್ಧ ಮಾನನಷ್ಟ ಕೇಸ್ ಹಾಕಿದ್ದೆ, ಈವರೆಗೂ ಉತ್ತರ ಬಂದಿಲ್ಲ. ಬಿಜೆಪಿಯವರು ಸುಳ್ಳಿನ ಮಹಾಶೂರರು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಮಾಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…