Featured

ಸಚಿವರ ಹೇಳಿಕೆಗೆ ವಿಧಾನಸಭೆಯಲ್ಲಿ ಭಾರೀ ಆಕ್ರೋಶ ; ಸುಧಾಕರ್‌ ರಾಜೀನಾಮೆಗೆ ವಿರೋಧ ಪಕ್ಷಗಳ ಆಗ್ರಹ -Vishwanews24

ಸಚಿವರ ಹೇಳಿಕೆಗೆ ವಿಧಾನಸಭೆಯಲ್ಲಿ ಭಾರೀ ಆಕ್ರೋಶ; ಸುಧಾಕರ್‌ ರಾಜೀನಾಮೆಗೆ ವಿರೋಧ ಪಕ್ಷಗಳ ಆಗ್ರಹ -Vishwanews24

ಬೆಂಗಳೂರು: ರಾಜ್ಯದ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆಯಾಗಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ನೀಡಿರುವ ಹೇಳಿಕೆಯನ್ನು ವಿರೋಧಿಸಿ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಚಿವ ಸುಧಾಕರ್ ಅವರ ರಾಜೀನಾಮೆಗೆ ಒತ್ತಾಯಿಸಿದರು.

ಭೋಜನ ವಿರಾಮದ ಬಳಿಕ ಕಲಾಪ ಸೇರಿದಾಗ ಸುಧಾಕರ್‌ ಹೇಳಿಕೆಯನ್ನು ವಿಪಕ್ಷ ಸದಸ್ಯರು ಕಟುವಾಗಿ ಟೀಕಿಸಿದರು. ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಸಿದ್ದರಾಮಯ್ಯ ಮಾತನಾಡಿ, ‘ಸುಧಾಕರ್‌ ಅವರು ಬೇಜವಾಬ್ದಾರಿಯ ಹೇಳಿಕೆ ನೀಡಿದ್ದಾರೆ. ನನ್ನ, ಕೆ.ಆರ್‌.ರಮೇಶ್‌ಕುಮಾರ್‌, ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್‌ ಅವರ ಹೆಸರುಗಳನ್ನು ಪ್ರಸ್ತಾಪಿಸಿದ್ದಾರೆ. 224 ಶಾಸಕರು ಸತ್ಯ ಹರಿಶ್ಚಂದ್ರರಲ್ಲ ಎಂದಿದ್ದಾರೆ. ಇದು ಹಕ್ಕುಚ್ಯುತಿಯಾಗುತ್ತದೆ. ಎಲ್ಲಾ ಶಾಸಕರ ಬಗ್ಗೆಯೂ ತನಿಖೆ ಮಾಡಿಸಿ’ ಎಂದು ಗುಡುಗಿದರು.

‘ಮುಖ್ಯಮಂತ್ರಿ ಸೇರಿ ಎಲ್ಲ ಶಾಸಕರ ಬಗ್ಗೆಯೂ ತನಿಖೆ ನಡೆಯಲಿ. ಈ ರೀತಿ ಹೇಳಿಕೆ ನೀಡಿದ ಸುಧಾಕರ್‌ ಅವರು ರಾಜೀನಾಮೆ ನೀಡಬೇಕು. ಇವರ ಪ್ರಕಾರ 224 ಶಾಸಕರೂ ವ್ಯಭಿಚಾರಿಗಳಾ? ಮಂತ್ರಿಗಳನ್ನು ನೀವೇಕೆ ಸಮರ್ಥಿಸಿಕೊಳ್ಳುತ್ತೀರಿ’ ಎಂದು ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ ವಿರುದ್ಧ ಗರಂ ಆದ ಸಿದ್ದರಾಮಯ್ಯ, ’ಇದು ವ್ಯಭಿಚಾರಿಗಳ ಸರ್ಕಾರ’ ಎಂದು ಕಿಡಿಕಾರಿದರು.

ಸಚಿವ ಸುಧಾಕರ್‌ ಅವರು ಸದಸ್ಯರ ಕ್ಷಮೆಯನ್ನು ಕೇಳಬೇಕು ಎಂದು ಜೆಡಿಎಸ್‌ನ ಬಂಡೆಪ್ಪ ಕಾಶೆಂಪುರ್‌ ಆಗ್ರಹಿಸಿದರು.

ಸಚಿವ ಸುಧಾಕರ್ ಅವರನ್ನು ಸಮರ್ಥಿಸಿ ಮಾತನಾಡಿದ ಬೊಮ್ಮಾಯಿ, ‘ಸಚಿವರು ಸದನದಿಂದ ಹೊರಗೆ ಮಾಧ್ಯಮದ ಬಳಿ ಮಾತನಾಡಿದ್ದಾರೆ. ಅವರು ಯಾವ ಅರ್ಥದಲ್ಲಿ ಏನು ಮತ್ತು ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಂಬುದನ್ನು ಪರಿಶೀಲಿಸಬೇಕು. ಸದನದಲ್ಲಿ ಸಚಿವರ ಚಾರಿತ್ರ್ಯಕ್ಕೆ ಧಕ್ಕೆ ಬರುವಂತೆ ನೀವು ಮಾತನಾಡಲಿಲ್ಲವೇ’ ಎಂದು ಪ್ರಶ್ನಿಸಿದರು.

ಕಲಾಪ ಅನಿರ್ಧಿಷ್ಟ ಮುಂದಕ್ಕೆ

ವಿಧಾನಸಭೆ ಕಲಾಪವನ್ನು ಸಭಾಧ್ಯಕ್ಷ ಕಾಗೇರಿ ಅನಿರ್ಧಿಷ್ಟ ಕಾಲ ಮುಂದೂಡಿದರು. ‘ಬಜೆಟ್‌ ಅಧಿವೇಶನ ಒಟ್ಟು 13 ದಿನಗಳು ನಡೆದಿದ್ದು, 44 ಗಂಟೆ 30 ನಿಮಿಷ ಕಲಾಪ ನಡೆದಿದೆ. 11 ಮಸೂದೆಗಳ ಪೈಕಿ 9 ಮಸೂದೆಗಳು ಅಂಗೀಕಾರ ಪಡೆದಿವೆ’ ಎಂದು ಕಾಗೇರಿ ತಿಳಿಸಿದರು

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago