ತುಮಕೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಸಂಸದ ಜಿ.ಎಸ್.ಬಸವರಾಜು ಹೊಸ ಹೆಸರು ತೇಲಿ ಬಿಟ್ಟಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಟಿಕೆಟ್ ನೀಡಿದರೆ ಫಲಿತಾಂಶದ ಬಗ್ಗೆ ಈಗಲೇ ಏನೂ ಹೇಳಲು ಆಗುವುದಿಲ್ಲ’ ಎಂದು ಹೇಳಿದ್ದಾರೆ.
‘ವಿಧಾನಸಭಾ ಚುನಾವಣೆಯಲ್ಲಿ ಮಾಧುಸ್ವಾಮಿ ಸೋತಿದ್ದಾರೆ. ದುರಹಂಕಾರದವರಿಗೆ ಜನ ಮತ ಹಾಕುವುದಿಲ್ಲ. ಹೈಕಮಾಂಡ್ ನಾಯಕರು ಜನಾಭಿಪ್ರಾಯ ನೋಡಿಕೊಂಡು ಅಭ್ಯರ್ಥಿಯನ್ನು ಘೋಷಿಸುತ್ತಾರೆ. ಪಕ್ಷದಿಂದ ಯಾರಿಗೆ ಟಿಕೆಟ್ ಕೊಟ್ಟರೂ ಅವರ ಪರ ಕೆಲಸ ಮಾಡುತ್ತೇವೆ’ ಎಂದರು.
ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇಲ್ಲಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲಬಹುದು ಎಂದು ಸೋಮಣ್ಣ ಅವರಿಗೆ ಹೇಳಿದ್ದೇನೆ. ಮುಂದಿನ ಅಧಿವೇಶನ ಸಮಯದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಯ ನೀಡಿದ್ದಾರೆ. ಆಗ ಎಲ್ಲ ವಿಷಯಗಳನ್ನು ಅವರ ಗಮನಕ್ಕೆ ತರುತ್ತೇನೆ. ವಾಸ್ತವ ಸ್ಥಿತಿಯನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಲೋಕಸಭಾ ಸ್ಪರ್ಧೆಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ಮುಖಂಡ ಎಸ್.ಪಿ. ಚಿದಾನಂದ್ ಸೇರಿದಂತೆ ಹತ್ತಕ್ಕೂ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಕತ್ತೆ ನಿಲ್ಲಿಸಿದರೂ ಪ್ರಧಾನಿ ಮೋದಿ ಮುಖ ನೋಡಿಕೊಂಡು ಜನ ಬಿಜೆಪಿಗೆ ಮತ ನೀಡುತ್ತಾರೆ ಎಂದು ಬಸವರಾಜು ಹೇಳಿದರು.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಅವರದ್ದೇ ಆದ ಶಕ್ತಿಯಿದೆ. ಅವರು ಚಾಣಾಕ್ಷರಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲೂ ದೇವೇಗೌಡರ ವಿರುದ್ಧ ನಾನು ವೈಯಕ್ತಿಕವಾಗಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…