Featured

ಸಚಿವೆ ಶೋಭಾ ಕರಂದ್ಲಾಜೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ : ಸಂಸದ ಜಿ.ಎಸ್. ಬಸವರಾಜು – vishwanews24

ಸಚಿವೆ ಶೋಭಾ ಕರಂದ್ಲಾಜೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ : ಸಂಸದ ಜಿ.ಎಸ್. ಬಸವರಾಜು

ತುಮಕೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಸಂಸದ ಜಿ.ಎಸ್.ಬಸವರಾಜು ಹೊಸ ಹೆಸರು ತೇಲಿ ಬಿಟ್ಟಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಟಿಕೆಟ್ ನೀಡಿದರೆ ಫಲಿತಾಂಶದ ಬಗ್ಗೆ ಈಗಲೇ ಏನೂ ಹೇಳಲು ಆಗುವುದಿಲ್ಲ’ ಎಂದು ಹೇಳಿದ್ದಾರೆ.

‘ವಿಧಾನಸಭಾ ಚುನಾವಣೆಯಲ್ಲಿ ಮಾಧುಸ್ವಾಮಿ ಸೋತಿದ್ದಾರೆ. ದುರಹಂಕಾರದವರಿಗೆ ಜನ ಮತ ಹಾಕುವುದಿಲ್ಲ. ಹೈಕಮಾಂಡ್ ನಾಯಕರು ಜನಾಭಿಪ್ರಾಯ ನೋಡಿಕೊಂಡು ಅಭ್ಯರ್ಥಿಯನ್ನು ಘೋಷಿಸುತ್ತಾರೆ. ಪಕ್ಷದಿಂದ ಯಾರಿಗೆ ಟಿಕೆಟ್ ಕೊಟ್ಟರೂ ಅವರ ಪರ ಕೆಲಸ ಮಾಡುತ್ತೇವೆ’ ಎಂದರು.

ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇಲ್ಲಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲಬಹುದು ಎಂದು ಸೋಮಣ್ಣ ಅವರಿಗೆ ಹೇಳಿದ್ದೇನೆ. ಮುಂದಿನ ಅಧಿವೇಶನ ಸಮಯದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಯ ನೀಡಿದ್ದಾರೆ. ಆಗ ಎಲ್ಲ ವಿಷಯಗಳನ್ನು ಅವರ ಗಮನಕ್ಕೆ ತರುತ್ತೇನೆ. ವಾಸ್ತವ ಸ್ಥಿತಿಯನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಲೋಕಸಭಾ ಸ್ಪರ್ಧೆಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಸ್.ರವಿಶಂಕರ್, ಮುಖಂಡ ಎಸ್.ಪಿ. ಚಿದಾನಂದ್ ಸೇರಿದಂತೆ ಹತ್ತಕ್ಕೂ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಕತ್ತೆ ನಿಲ್ಲಿಸಿದರೂ ಪ್ರಧಾನಿ ಮೋದಿ ಮುಖ ನೋಡಿಕೊಂಡು ಜನ ಬಿಜೆಪಿಗೆ ಮತ ನೀಡುತ್ತಾರೆ ಎಂದು ಬಸವರಾಜು ಹೇಳಿದರು.

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರಿಗೆ ಅವರದ್ದೇ ಆದ ಶಕ್ತಿಯಿದೆ. ಅವರು ಚಾಣಾಕ್ಷರಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲೂ ದೇವೇಗೌಡರ ವಿರುದ್ಧ ನಾನು ವೈಯಕ್ತಿಕವಾಗಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

20 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

22 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

23 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

23 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

23 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

23 hours ago