Featured

ಸಚಿವ ಅನಂತ್ ಕುಮಾರ್ ತೀವ್ರ ಅಸ್ವಸ್ಥ: ಲಂಡನ್ ನಲ್ಲಿ ಚಿಕಿತ್ಸೆ

ಹೊಸದಿಲ್ಲಿ, : ಗೋವಾ ಮುಖ್ಯಮಂತ್ರಿ ಹಾಗು ಪಕ್ಷದ ಹಿರಿಯ ಮುಖಂಡ ಮನೋಹರ್ ಪರಿಕ್ಕರ್ ತೀವ್ರ ಅಸ್ವಸ್ಥರಾಗಿರುವ ಬೆನ್ನಿಗೇ ಬಿಜೆಪಿ ಹಾಗೂ ಕೇಂದ್ರ ಸರಕಾರಕ್ಕೆ ಮತ್ತೊಂದು ಆಘಾತ ಬಂದೆರಗಿದೆ. ಪಕ್ಷದ ಹಿರಿಯ ಮುಖಂಡ, ಕೇಂದ್ರ ಸಚಿವ ಕರ್ನಾಟಕದ ಅನಂತ್ ಕುಮಾರ್ ಅವರು ಈಗ ತೀವ್ರ ಅನಾರೋಗ್ಯಕ್ಕೊಳಗಾಗಿ ಲಂಡನ್ ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂದು thewire.in ವರದಿ ಮಾಡಿದೆ.

ಮನೋಹರ್ ಪರಿಕ್ಕರ್ ಅವರಂತೆ ಅನಂತ್ ಕುಮಾರ್ ಅವರಿಗೂ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಇರಬಹುದೆಂದು ಶಂಕಿಸಲಾಗಿದ್ದು, ಖಚಿತಪಡಿಸಲು ಉನ್ನತ ಮಟ್ಟದ ಪರೀಕ್ಷೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ.

ಮೋದಿ ಸರ್ಕಾರದಲ್ಲಿ ಸಂಸದೀಯ ಮತ್ತು ರಸಗೊಬ್ಬರ ಖಾತೆ ಸಚಿವರಾಗಿರುವ ಅನಂತ್ ಕುಮಾರ್ ಪಕ್ಷದ ಹಿರಿಯ ಮುಖಂಡರಾಗಿದ್ದು ಈ ಹಿಂದಿನ ವಾಜಪೇಯಿ ಸರಕಾರದಲ್ಲೂ ಸೇವೆ ಸಲ್ಲಿಸಿರುವವರು. ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಸತತವಾಗಿ ಚುನಾವಣೆ ಗೆಲ್ಲುತ್ತಾ ಬಂದಿರುವ ಅನಂತ್ ಕುಮಾರ್ 2014 ರಲ್ಲಿ ಆಧಾರ್ ಮುಖ್ಯಸ್ಥ ನಂದನ್ ನಿಲೇಕಣಿಯವರನ್ನು ಸೋಲಿಸಿದ್ದರು.

ಕಳೆದ ಎರಡು ವಾರಗಳಿಂದಲೇ ಅನಂತ್ ಕುಮಾರ್ ಲಂಡನ್ ನಲ್ಲಿದ್ದು, ಈಗ ಅಗತ್ಯ ಬಿದ್ದರೆ ಅವರನ್ನು ಅಮೆರಿಕಕ್ಕೂ ಕರೆದುಕೊಂಡು ಹೋಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಳೆದ ಕೆಲವು ವಾರಗಳಿಂದಲೇ ಅನಂತ್ ಕುಮಾರ್ ತಮ್ಮ ಇಲಾಖೆಯ ಕಚೇರಿಗೆ ಭೇಟಿ ನೀಡುತ್ತಿಲ್ಲ ಎಂದು ಹೇಳಲಾಗಿದ್ದು ಈವರೆಗೆ ಅವರ ಖಾತೆಯನ್ನು ಪ್ರಧಾನಿ ಮೋದಿ ಯಾರಿಗೂ ವಹಿಸಿಲ್ಲ.

ಕೆಲವು ಸಮಯದ ಹಿಂದಷ್ಟೇ ಹಿರಿಯ ಸಚಿವ ಅರುಣ್ ಜೇಟ್ಲಿ ಮೂತ್ರಕೋಶದ ಗಂಭೀರ ಸಮಸ್ಯೆಗೆ ತುತ್ತಾಗಿ ಕಿಡ್ನಿ ಕಸಿ ಮಾಡಿಸಿಕೊಂಡು ಬಂದಿದ್ದರು. ಈ ಸಂದರ್ಭದಲ್ಲಿ ಸುದೀರ್ಘ ಕಾಲ ಅವರ ಖಾತೆಯನ್ನು ಪಿಯೂಷ್ ಗೋಯಲ್ ಅವರು ವಹಿಸಿಕೊಂಡಿದ್ದರು. ಇದೀಗ ಅನಂತ್ ಕುಮಾರ್ ಅವರ ಸರದಿ. ಗೋವಾದಲ್ಲಿ ಈಗಾಗಲೇ ಮುಖ್ಯಮಂತ್ರಿ ಬದಲಾಯಿಸಲು ಬಿಜೆಪಿಯ ಕೇಂದ್ರ ತಂಡ ಅಲ್ಲಿಗೆ ಭೇಟಿ ನೀಡಿದೆ. ಈ ಬಗ್ಗೆ ಕೇಂದ್ರ ಸರಕಾರವಾಗಲೀ, ಸಚಿವರ ಕಚೇರಿಯಾಗಲೀ ಅಧಿಕೃತ ಮಾಹಿತಿ ನೀಡಿಲ್ಲ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

15 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

15 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

16 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

19 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

19 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

19 hours ago