ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಿನ್ನೆ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಆದರೆ, ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾವುದೇ ವಿಷಯದ ಬಗ್ಗೆ ಅಸಮಾಧಾನ ಇದ್ದರೆ ಅದನ್ನು ಸರ್ಕಾರದ ಒಳಗೇ ಬಗೆಹರಿಸಿಕೊಳ್ಳಬೇಕು. ರಾಜ್ಯಪಾಲರಿಗೆ ದೂರು ನೀಡುವುದು ಸರಿಯಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ರಾಜ್ಯಪಾಲರಿಗೆ ದೂರು ನೀಡುವ ಹೊಸ ಪದ್ದತಿಯನ್ನು ಈಶ್ವರಪ್ಪ ಅನುಸರಿಸಿರುವುದು ಆಶ್ಚರ್ಯ ಮೂಡಿಸಿದೆ ಎಂದು ಅವರು ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಹೇಳಿದ್ದಾರೆ.
ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ ಆದೇಶವನ್ನು ಹಿಂಪಡೆದ ಕೇಂದ್ರ ಸರಕಾರ -Vishwanews24
ಮುಖ್ಯಮಂತ್ರಿಯವರು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಕೆಲಸ ಮಾಡುತ್ತಿದ್ದೇವೆ. ಯಾವುದೇ ಸಮಸ್ಯೆಗಳಿದ್ದರೆ ಸಚಿವ ಸಂಪುಟ ಅಥವಾ ಇತರ ವೇದಿಕೆಗಳಲ್ಲಿ ಚರ್ಚಿಸಲು ದಾರಿಯಿದೆ. ಅದು ಬಿಟ್ಟು ದೂರು ನೀಡುವುದು ಸರಿಯಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.
ಸಮಸ್ಯೆಗಳಿದ್ದರೆ ಈಶ್ವರಪ್ಪ ಹಾಗೂ ಯಡಿಯೂರಪ್ಪನವರು ಒಟ್ಟಿಗೆ ಕುಳಿತು ಬಗೆಹರಿಸಿಕೊಳ್ಳಬೇಕು. ಮುಖ್ಯಮಂತ್ರಿಯವರು ಹಣಕಾಸು ಸಚಿವರೂ ಆಗಿರುವುದರಿಂದ ಯಾವುದಕ್ಕೆ ಎಷ್ಟು ಹಣಕಾಸು ಬಿಡುಗಡೆ ಮಾಡಬೇಕು ಎಂಬ ಅಧಿಕಾರ ಅವರಿಗಿದೆ. ಈ ವಿಷಯದಲ್ಲಿ ಗೊಂದಲ ಸೃಷ್ಟಿಸುವುದನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದರು. ಅಲ್ಲದೇ ಅನೇಕ ಸಚಿವರು, ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ.
ಸ್ಯಾಂಡಲ್ವುಡ್ ನಟ ಪ್ರಜ್ವಲ್ ದೇವರಾಜ್ ದಂಪತಿಗೆ ಕೊರೊನಾ ಪಾಸಿಟಿವ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…