ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಿನ್ನೆ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಆದರೆ, ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾವುದೇ ವಿಷಯದ ಬಗ್ಗೆ ಅಸಮಾಧಾನ ಇದ್ದರೆ ಅದನ್ನು ಸರ್ಕಾರದ ಒಳಗೇ ಬಗೆಹರಿಸಿಕೊಳ್ಳಬೇಕು. ರಾಜ್ಯಪಾಲರಿಗೆ ದೂರು ನೀಡುವುದು ಸರಿಯಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ರಾಜ್ಯಪಾಲರಿಗೆ ದೂರು ನೀಡುವ ಹೊಸ ಪದ್ದತಿಯನ್ನು ಈಶ್ವರಪ್ಪ ಅನುಸರಿಸಿರುವುದು ಆಶ್ಚರ್ಯ ಮೂಡಿಸಿದೆ ಎಂದು ಅವರು ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಹೇಳಿದ್ದಾರೆ.
ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ ಆದೇಶವನ್ನು ಹಿಂಪಡೆದ ಕೇಂದ್ರ ಸರಕಾರ -Vishwanews24
ಮುಖ್ಯಮಂತ್ರಿಯವರು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಕೆಲಸ ಮಾಡುತ್ತಿದ್ದೇವೆ. ಯಾವುದೇ ಸಮಸ್ಯೆಗಳಿದ್ದರೆ ಸಚಿವ ಸಂಪುಟ ಅಥವಾ ಇತರ ವೇದಿಕೆಗಳಲ್ಲಿ ಚರ್ಚಿಸಲು ದಾರಿಯಿದೆ. ಅದು ಬಿಟ್ಟು ದೂರು ನೀಡುವುದು ಸರಿಯಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.
ಸಮಸ್ಯೆಗಳಿದ್ದರೆ ಈಶ್ವರಪ್ಪ ಹಾಗೂ ಯಡಿಯೂರಪ್ಪನವರು ಒಟ್ಟಿಗೆ ಕುಳಿತು ಬಗೆಹರಿಸಿಕೊಳ್ಳಬೇಕು. ಮುಖ್ಯಮಂತ್ರಿಯವರು ಹಣಕಾಸು ಸಚಿವರೂ ಆಗಿರುವುದರಿಂದ ಯಾವುದಕ್ಕೆ ಎಷ್ಟು ಹಣಕಾಸು ಬಿಡುಗಡೆ ಮಾಡಬೇಕು ಎಂಬ ಅಧಿಕಾರ ಅವರಿಗಿದೆ. ಈ ವಿಷಯದಲ್ಲಿ ಗೊಂದಲ ಸೃಷ್ಟಿಸುವುದನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದರು. ಅಲ್ಲದೇ ಅನೇಕ ಸಚಿವರು, ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ.
ಸ್ಯಾಂಡಲ್ವುಡ್ ನಟ ಪ್ರಜ್ವಲ್ ದೇವರಾಜ್ ದಂಪತಿಗೆ ಕೊರೊನಾ ಪಾಸಿಟಿವ್ -Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…